Webdunia - Bharat's app for daily news and videos

Install App

ಜೆಡಿಎಸ್ ಅಭ್ಯರ್ಥಿಗೆ ಚುನಾವಣಾಧಿಕಾರಿ ನೋಟಿಸ್

Webdunia
ಸೋಮವಾರ, 30 ಏಪ್ರಿಲ್ 2018 (13:03 IST)
ಚುನಾವಣಾ ನೀತಿ ಸಂಹಿತೆಜಾರಿಯಲ್ಲಿರುವಾಗಅನುಮತಿ ಪಡೆಯದೆ ಮೊಬೈಲ್ ಮೂಲಕ ಬಲ್ಕ್‌ ಎಸ್.ಎಂ.ಎಸ್ ಹಾಗೂ ವಾಯ್ಸ್‌ಮೆಸೇಜ್ ಕಳುಹಿಸಿದ ಚಿತ್ರದುರ್ಗ ವಿಧಾನಸಭಾಕ್ಷೇತ್ರದಜಾತ್ಯಾತೀತಜನತಾದಳದ ಅಭ್ಯರ್ಥಿ ಕೆ.ಸಿ.ವೀರೇಂದ್ರ ಇವರಿಗೆ ಚುನಾವಣಾಧಿಕಾರಿಯವರು ನೋಟಿಸ್ ನೀಡಿದ್ದಾರೆ.
ಜೆ.ಡಿ.ಎಸ್. ಅಭ್ಯರ್ಥಿ ಕೆ.ಸಿ.ವೀರೇಂದ್ರ ಇವರುಮಾಧ್ಯಮ ಪ್ರಮಾಣೀಕರಣ ಹಾಗೂ ಮೇಲ್ವಿಚಾರಣಾ ಸಮಿತಿಯಿಂದ  ಪೂರ್ವಭಾವಿಯಾಗಿಅನುಮತಿ ಪಡೆಯದೇಏಪ್ರಿಲ್ 26 ರಂದು ನಡೆದರ್‍ಯಾಲಿಯಲ್ಲಿ ಭಾಗವಹಿಸಲು ಸಾರ್ವಜನಿಕರಿಗೆ ಮೊಬೈಲ್ ಮೂಲಕ ಬಲ್ಕ್‌ಎಸ್.ಎಂ.ಎಸ್ ಹಾಗೂ ವಾಯ್ಸ್‌ಎಸ್.ಎಂ.ಎಸ್. ಕಳುಹಿಸಿದ್ದರು. 
 
ಜಿಲ್ಲಾಧಿಕಾರಿ ಹಾಗೂ ಜಿಲ್ಲಾಚುನಾವಣಾಧಿಕಾರಿ ವಿ.ವಿ.ಜ್ಯೋತ್ಸ್ನಾರವರು  ಎಂ.ಸಿ.ಎಂ.ಸಿ. ಸಮಿತಿ ಅಧ್ಯಕ್ಷರಾಗಿದ್ದುಅನುಮತಿ ಪಡೆಯದೇ ಬಲ್ಕ್‌ಎಸ್.ಎಂ.ಎಸ್., ವಾಯ್ಸ್ ಮೆಜೇಸ್ ಕಳುಹಿಸಿರುವ ಬಗ್ಗೆ ದೂರನ್ನು ಆಧರಿಸಿ ಅಭ್ಯರ್ಥಿಗೆ ನೋಟಿಸ್ ನೀಡಿ ಈ ಬಗ್ಗೆ ವಿವರಣೆ ಪಡೆದುಕೊಳ್ಳಲು ಸೂಚನೆ ನೀಡಿದ್ದರು. 
 
  ಜಿಲ್ಲಾ ಚುನಾವಣಾಧಿಕಾರಿಯವರ ನಿರ್ದೇಶನದ ಮೇರೆಗೆ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಯವರು ಅಭ್ಯರ್ಥಿಗೆ ನೋಟಿಸ್ ನೀಡಿದ 24 ಗಂಟೆಯೊಳಗಾಗಿ ಅನುಮತಿ ಪತ್ರ ಹಾಗೂ ಲೆಕ್ಕಪತ್ರವನ್ನು ಹಾಜರುಪಡಿಸಲು ತಿಳಿಸಿ ಇದನ್ನು ಉಲ್ಲಂಘಿಸಿದಲ್ಲಿ ಪ್ರಜಾಪ್ರತಿನಿಧಿ ಕಾಯ್ದೆಯನ್ವಯ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ನೋಟಿಸ್‌ನಲ್ಲಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments