Webdunia - Bharat's app for daily news and videos

Install App

ಜೆಡಿಎಸ್ ಅಭ್ಯರ್ಥಿಗೆ ಚುನಾವಣಾಧಿಕಾರಿ ನೋಟಿಸ್

Webdunia
ಸೋಮವಾರ, 30 ಏಪ್ರಿಲ್ 2018 (13:03 IST)
ಚುನಾವಣಾ ನೀತಿ ಸಂಹಿತೆಜಾರಿಯಲ್ಲಿರುವಾಗಅನುಮತಿ ಪಡೆಯದೆ ಮೊಬೈಲ್ ಮೂಲಕ ಬಲ್ಕ್‌ ಎಸ್.ಎಂ.ಎಸ್ ಹಾಗೂ ವಾಯ್ಸ್‌ಮೆಸೇಜ್ ಕಳುಹಿಸಿದ ಚಿತ್ರದುರ್ಗ ವಿಧಾನಸಭಾಕ್ಷೇತ್ರದಜಾತ್ಯಾತೀತಜನತಾದಳದ ಅಭ್ಯರ್ಥಿ ಕೆ.ಸಿ.ವೀರೇಂದ್ರ ಇವರಿಗೆ ಚುನಾವಣಾಧಿಕಾರಿಯವರು ನೋಟಿಸ್ ನೀಡಿದ್ದಾರೆ.
ಜೆ.ಡಿ.ಎಸ್. ಅಭ್ಯರ್ಥಿ ಕೆ.ಸಿ.ವೀರೇಂದ್ರ ಇವರುಮಾಧ್ಯಮ ಪ್ರಮಾಣೀಕರಣ ಹಾಗೂ ಮೇಲ್ವಿಚಾರಣಾ ಸಮಿತಿಯಿಂದ  ಪೂರ್ವಭಾವಿಯಾಗಿಅನುಮತಿ ಪಡೆಯದೇಏಪ್ರಿಲ್ 26 ರಂದು ನಡೆದರ್‍ಯಾಲಿಯಲ್ಲಿ ಭಾಗವಹಿಸಲು ಸಾರ್ವಜನಿಕರಿಗೆ ಮೊಬೈಲ್ ಮೂಲಕ ಬಲ್ಕ್‌ಎಸ್.ಎಂ.ಎಸ್ ಹಾಗೂ ವಾಯ್ಸ್‌ಎಸ್.ಎಂ.ಎಸ್. ಕಳುಹಿಸಿದ್ದರು. 
 
ಜಿಲ್ಲಾಧಿಕಾರಿ ಹಾಗೂ ಜಿಲ್ಲಾಚುನಾವಣಾಧಿಕಾರಿ ವಿ.ವಿ.ಜ್ಯೋತ್ಸ್ನಾರವರು  ಎಂ.ಸಿ.ಎಂ.ಸಿ. ಸಮಿತಿ ಅಧ್ಯಕ್ಷರಾಗಿದ್ದುಅನುಮತಿ ಪಡೆಯದೇ ಬಲ್ಕ್‌ಎಸ್.ಎಂ.ಎಸ್., ವಾಯ್ಸ್ ಮೆಜೇಸ್ ಕಳುಹಿಸಿರುವ ಬಗ್ಗೆ ದೂರನ್ನು ಆಧರಿಸಿ ಅಭ್ಯರ್ಥಿಗೆ ನೋಟಿಸ್ ನೀಡಿ ಈ ಬಗ್ಗೆ ವಿವರಣೆ ಪಡೆದುಕೊಳ್ಳಲು ಸೂಚನೆ ನೀಡಿದ್ದರು. 
 
  ಜಿಲ್ಲಾ ಚುನಾವಣಾಧಿಕಾರಿಯವರ ನಿರ್ದೇಶನದ ಮೇರೆಗೆ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಯವರು ಅಭ್ಯರ್ಥಿಗೆ ನೋಟಿಸ್ ನೀಡಿದ 24 ಗಂಟೆಯೊಳಗಾಗಿ ಅನುಮತಿ ಪತ್ರ ಹಾಗೂ ಲೆಕ್ಕಪತ್ರವನ್ನು ಹಾಜರುಪಡಿಸಲು ತಿಳಿಸಿ ಇದನ್ನು ಉಲ್ಲಂಘಿಸಿದಲ್ಲಿ ಪ್ರಜಾಪ್ರತಿನಿಧಿ ಕಾಯ್ದೆಯನ್ವಯ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ನೋಟಿಸ್‌ನಲ್ಲಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಳ್ಳಾರಿ ಗಲಭೆ ಪ್ರಕರಣ, ಎಚ್‌ಡಿಕೆ ಆರೋಪಕ್ಕೆ ಪರಮೇಶ್ವರ್ ಪ್ರತಿಕ್ರಿಯೆ ಹೀಗಿತ್ತು

ಶಾಲಾ ಕಾಲೇಜು ಬೆನ್ನಲ್ಲೇ ಬೆಂಗಳೂರಿನ ಪಾಸ್‌ಪೋರ್ಟ್ ಕಚೇರಿಗೆ ಬಾಂಬ್‌ ಬೆದರಿಕೆ ಮೇಲ್

ದೀರ್ಘಕಾಲದ ಸಿಎಂ ಸಿದ್ದರಾಮಯ್ಯ ರಾಜ್ಯಕ್ಕೆ ನೀಡಿದ ಕೊಡುಗೆಯೇನು: ಬಿವೈ ವಿಜಯೇಂದ್ರ

ಬಳ್ಳಾರಿ ಶೂಟೌಟ್‌ನಲ್ಲಿ ಹತ್ಯೆಯಾದ ಕಾರ್ಯಕರ್ತನಿಗೆ ಪರಿಹಾರ ನೀಡಿ ಸಂಕಷ್ಟಕ್ಕೊಳಗಾದ ಜಮೀರ್, ಏನಿದು

ಗೋರಖ್‌ಪುರದಿಂದ ಮುಂಬೈಗ್ ಹೋಗುತ್ತಿದ್ದ ಕಾಶಿ ಎಕ್ಸ್‌ಪ್ರೆಸ್‌ ರೈಲಿಗೆ ಬಾಂಬ್ ಬೆದರಿಕೆ, ಮುಂದೇನಾಯ್ತು ಗೊತ್ತಾ

ಮುಂದಿನ ಸುದ್ದಿ
Show comments