Select Your Language

Notifications

webdunia
webdunia
webdunia
webdunia

ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶ ನಿಷೇಧ

ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶ ನಿಷೇಧ
ಮೈಸೂರು , ಮಂಗಳವಾರ, 5 ಅಕ್ಟೋಬರ್ 2021 (08:13 IST)
ಮೈಸೂರು, ಅ 05 : ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಅಕ್ಟೋಬರ್ 5ರಿಂದ  ಭಕ್ತರ ಪ್ರವೇಶವನ್ನು ನಿಷೇಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಅಕ್ಟೋಬರ್ 6ರಂದು ಮಹಾಲಯ ಅಮಾವಾಸ್ಯೆ ಹಿನ್ನೆಲೆಯಲ್ಲಿ ಹೊರ ರಾಜ್ಯ, ಹೊರ ಜಿಲ್ಲೆಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಚಾಮುಂಡಿ ಬೆಟ್ಟಕ್ಕೆ ಆಗಮಿಸುವ ನಿರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ.
ಇನ್ನು ಅಕ್ಟೋಬರ್ 7ರಂದು ವಿಶ್ವವಿಖ್ಯಾತ ಮೈಸೂರು ದಸರಾ 2021ರ ಉದ್ಘಾಟನಾ ಮಹೋತ್ಸವ ಉದ್ಘಾಟನೆಗೊಳ್ಳಲಿದೆ. ಮಾಜಿ ಸಿಎಂ ಎಸ್.ಎಂ. ಕೃಷ್ಣರವರು ಈ ಬಾರಿಯ ಮೈಸೂರು ದಸರಾಗೆ ಚಾಮುಂಡಿ ಬೆಟ್ಟದಲ್ಲಿ ಚಾಲನೆ ನೀಡಲಿದ್ದಾರೆ.
ಹೀಗಾಗಿ ಅಕ್ಟೋಬರ್ 05ರಂದು ಬೆಳಗಿನ ಜಾವ 4 ಗಂಟೆಯಿಂದ ಅಕ್ಟೋಬರ್ 07ರ ಮಧ್ಯಾಹ್ನದ ವರೆಗೂ ನಿರ್ಬಂಧ ಹೇರಲಾಗಿದೆ. ಆದರೆ ಧಾರ್ಮಿಕ ಪೂಜಾ ವಿಧಿ ವಿಧಾನಗಳು ಎಂದಿನಂತೆ ನಡೆಯಲಿದೆ. ಅಲ್ಲದೆ ಮೆಟ್ಟಿಲು ಮಾರ್ಗದಿಂದಲೂ ಚಾಮುಂಡಿ ದೇವಸ್ಥಾನಕ್ಕೆ ಭಕ್ತರ ನಿರ್ಬಂಧವಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಒಂದಿಡೀ ಕುಟುಂಬದ ನೆಮ್ಮದಿ ಕಿತ್ತುಕೊಂಡ ರಾಜಕಾಲುವೆ ನೀರು..!