ಅಂತಿಮವಾಗಿ ಈ ದೇಶ ಕೆಟ್ಟ ಹೆಸರು ಪಡೆಯಲಿದೆ; ನಕಲಿ, ಕೋಮು ಸುದ್ದಿಯ ಬಗ್ಗೆ ಸುಪ್ರೀಂ ಆತಂಕ

Webdunia
ಗುರುವಾರ, 2 ಸೆಪ್ಟಂಬರ್ 2021 (14:11 IST)
ನವದೆಹಲಿ : ಸಾಮಾಜಿಕ ಜಾಲತಾಣಗಳು, ವೆಬ್ ಪೋರ್ಟಲ್ ಗಳಲ್ಲಿ ಕೋಮು ಧ್ವನಿಯ ಸುದ್ದಿಗಳು, ನಕಲಿ ಸುದ್ದಿಗಳು ಹೆಚ್ಚುತ್ತಿರುವುದರ ಬಗ್ಗೆ ಸುಪ್ರೀಂ ಕೋರ್ಟ್ ತೀವ್ರ ಆತಂಕ ವ್ಯಕ್ತಪಡಿಸಿದೆ. "ಕೆಲವು ಚಾನಲ್ ಗಳಲ್ಲಿ ತೋರಿಸಲಾಗುತ್ತಿರುವ ಸುದ್ದಿಗಳೂ ಸಹ ಕೋಮು ಧ್ವನಿಯನ್ನು ಹೊಂದಿರುತ್ತವೆ ಇದು ದೇಶಕ್ಕೆ ಕೆಟ್ಟ ಹೆಸರು ತರುವ ಸಾಧ್ಯತೆ ಇದೆ" ಎಂದು ಕೋರ್ಟ್ ಎಚ್ಚರಿಸಿದೆ.

ಸಿಜೆಐ ನ್ಯಾ. ಎನ್ ವಿ ರಮಣ ಅವರಿದ್ದ ಪೀಠ ಜಮೀಯತ್ ಉಲೆಮಾ-ಐ-ಹಿಂದ್ ಹಾಗೂ ಇನ್ನಿತರರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದಾಗ ಈ ಅಭಿಪ್ರಾಯ ವ್ಯಕ್ತಪಡಿಸಿದೆ. ಮರ್ಕಜ್ ನಿಜಾಮುದ್ದೀನ್ ನ ಧಾರ್ಮಿಕ ಸಮ್ಮೇಳನದ ಬಗ್ಗೆ ನಕಲಿ ಸುದ್ದಿಗಳನ್ನು ಪ್ರಸಾರ ಮಾಡುವುದಕ್ಕೆ ತಡೆ ನೀಡಲು ಹಾಗೂ ನಕಲಿ ಸುದ್ದಿಗಳ ಪ್ರಸಾರ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲು ಕೇಂದ್ರಕ್ಕೆ ನಿರ್ದೇಶನ ನೀಡಬೇಕೆಂದು ಅರ್ಜಿಯಲ್ಲಿ ಮನವಿ ಮಾಡಲಾಗಿತ್ತು.
"ಖಾಸಗಿ ಸುದ್ದಿ ಚಾನಲ್ ಗಳಲ್ಲಿ ಪ್ರಸಾರವಾಗುವ ಸುದ್ದಿಗಳು ಕೋಮು ಬಣ್ಣವನ್ನು ಹೊಂದಿರುತ್ತವೆ, ಕೊನೆಗೆ ಈ ದೇಶ ಕೆಟ್ಟ ಹೆಸರು ಪಡೆಯುವಂತಾಗುತ್ತದೆ. ಈ ಸುದ್ದಿ ವಾಹಿನಿಗಳನ್ನು ನಿಯಂತ್ರಿಸಲು ಯಾವುದಾದರೂ ಪ್ರಯತ್ನ ನಡೆದಿದಾ? ಎಂದು ಕೋರ್ಟ್ ಪ್ರಶ್ನಿಸಿದೆ. "ಸಾಮಾಜಿಕ ಜಾಲತಾಣ ಪ್ರಬಲ ಧ್ವನಿಗಳನ್ನು ಮಾತ್ರ ಆಲಿಸುತ್ತವೆ. ನ್ಯಾಯಾಧೀಶರ ವಿರುದ್ಧ, ಸಂಸ್ಥೆಯ ವಿರುದ್ಧ ಯಾವುದೇ ಹೊಣೆಗಾರಿಕೆ ಇಲ್ಲದೇ ಹಲವಾರು ವಿಷಯಗಳನ್ನು ಬರೆಯಲಾಗುತ್ತದೆ" ಎಂದು ನ್ಯಾ. ಸೂರ್ಯಕಾಂತ್ ಹಾಗೂ ಎಎಸ್ ಬೋಪಣ್ಣ ಅವರಿದ್ದ ಪೀಠ ಹೇಳಿದೆ.
ನಕಲಿ ಸುದ್ದಿಗಳ ಮೇಲೆ, ವೆಬ್ ಪೋರ್ಟಲ್ ಗಳಲ್ಲಿ ಅಪಪ್ರಚಾರದ ಮೇಲೆ, ಯೂಟ್ಯೂಬ್ ಚಾನಲ್ ಗಳ ಮೇಲೆ ನಿಯಂತ್ರಣವಿಲ್ಲ. ಯೂಟ್ಯೂಬ್ ಗೆ ಹೋದಲ್ಲಿ ಅಲ್ಲಿ ನಕಲಿ ಸುದ್ದಿಗಳು ಮುಕ್ತವಾಗಿ ಹಂಚಿಕೆಯಾಗುತ್ತಿರುತ್ತದೆ, ಯೂಟ್ಯೂಬ್ ನಲ್ಲಿ ಯಾರು ಬೇಕಾದರೂ ಚಾನಲ್ ಸೃಷ್ಟಿಸಬಹುದು ಎಂದು ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಮರದ ತಿಮ್ಮಕ್ಕನ ಹೆಸರಿನಲ್ಲಿ ಹೊಸ ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ

Viral video: ಗರ್ಭಿಣಿ ಮಹಿಳೆ ಮೇಲೆ ಮಾನವೀಯತೆ ಮರೆತು ಸ್ಕೂಟಿ ಹತ್ತಿಸಿದ ಪೊಲೀಸ್

ಶೂದ್ರರು ತಮ್ಮ ವಿರೋಧಿಯಾಗಿರುವ ಆರ್ ಎಸ್ಎಸ್ ಸೇರುತ್ತಾರಲ್ಲಾ ಏನು ಹೇಳೋದು: ಸಿದ್ದರಾಮಯ್ಯ

ಇಂದಿರಾ ಗಾಂಧಿ ದೇಶದ ಪ್ರೇಮದ, ಧೈರ್ಯದ ಪ್ರತೀಕ: ಡಿಕೆ ಶಿವಕುಮಾರ್

ಪಿಎಂ ಕಿಸಾನ್ ಸಮ್ಮಾನ್ ಯೋಜನೆ 21 ನೇ ಕಂತು ಬಿಡುಗಡೆ: ಇಂದೇ ಖಾತೆ ಚೆಕ್ ಮಾಡಿ

ಮುಂದಿನ ಸುದ್ದಿ
Show comments