ವಿಜಯಪುರ ಬಿಜೆಪಿ ನಾಯಕರಲ್ಲಿ ಭಿನ್ನಮತ ಸ್ಫೋಟ

Webdunia
ಬುಧವಾರ, 28 ಮಾರ್ಚ್ 2018 (18:59 IST)
ಬಿಜೆಪಿ ರಾಜ್ಯ ನಾಯಕರ ವಿರುದ್ಧ ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಅಸಮಾಧಾನ ಹೊರಗೆ ಹಾಕಿದ್ದಾರೆ.  ಪಕ್ಷದಲ್ಲಿನ ಇತ್ತೀಚಿನ ಬೆಳವಣಿಗೆಗಳಿಂದ ನೋವಾಗಿದೆ. ಜಿಲ್ಲಾ ಬಿಜೆಪಿ  ಮುಖಂಡರ ಗಮನಕ್ಕೆ ಬಾರದಂತೆ, ನಮ್ಮ ಜೊತೆ ಚರ್ಚೆ ಮಾಡದೇ ನಮಗೆ ಮಾಹಿತಿಯೂ ಕೊಡದೇ ಯಾರ ಯಾರನ್ನೋ ಪಕ್ಷಕ್ಕೆ ಸೇರಿಸಿಕೊಳ್ಳುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
 ಮಾಧ್ಯಮದವರೊಂದಿಗೆ ಮಾತನಾಡಿದ ಅಪ್ಪಾಸಾಹೇಬ್ ಪಟ್ಟಣಶೆಟ್ಟಿ, ಕೇಂದ್ರ ಮಾಜಿ ಸಚಿವ ಹಾಗೂ ಹಾಲಿ ವಿಧಾನ ಪರಿಷತ್ ಸದಸ್ಯ ಬಸನಗೌಡ ಪಾಟೀಲ ಯತ್ನಾಳ ಪಕ್ಷ ಸೇರ್ಪಡೆ ವಿಷಯ ನನ್ನ ಗಮನಕ್ಕೆ ಬಂದಿಲ್ಲ. ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಪಕ್ಷ ಸೇರಿದ್ದನ್ನು ನಾನು ಮಾಧ್ಯಮದ ಮೂಲಕ ತಿಳಿದುಕೊಳ್ಳುವಂತಹ ಪರಿಸ್ಥಿತಿ ತಲೆ ದೋರಿದೆ. 
 
ಯತ್ನಾಳ ಪಕ್ಷ ಸೇರ್ಪಡೆ ಕುರಿತು ನನಗೆ ಮಾಹಿತಿ ಇಲ್ಲ. ಯತ್ನಾಳ ಬಿಜೆಪಿಗೆ ಬಂದರೂ ನಾನು ಪಕ್ಷ ಬಿಡುವದಿಲ್ಲ‌. ನಾನು ಯಾವುದೇ ಕಾರಣಕ್ಕೂ ಪಕ್ಷ ಬಿಡುವದಿಲ್ಲ. ಒಂದು ವೇಳೆ ಯತ್ನಾಳ ಸೇರ್ಪಡೆಗೊಂಡರೆ ಬಳಿಕ ಮಾಧ್ಯಮದವರನ್ನು ಕರೆದು ಮುಂದಿನ ನಡೆ ಕುರಿತು ಅಭಿಪ್ರಾಯ ತಿಳಿಸುತ್ತೇನೆ. ಅವರನ್ನು ಸೇರಿಸಿಕೊಳ್ಳುವ ಮುಂಚೆ ಜಿಲ್ಲಾ ನಾಯಕರ ಜೊತೆ ಚರ್ಚಿಸಿ ನಿರ್ಣಯ ಕೈಗೊಳ್ಳಬೇಕು ಎಂದು ಹೇಳಿ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಏನೂ ಅರಿಯದ 9ರ ಬಾಲಕಿ ಮೇಲೆ ಮೈಮುಟ್ಟಿ ವಿಕೃತಿ ಮೆರೆದ ಮುದುಕನ ಕತೆ ಮುಗಿಸಿದ ಸ್ಥಳೀಯರು, Video

Karnataka Weather: ರಾಜ್ಯದಲ್ಲಿ ಇಂದು ಈ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

ಪತಿ ಪ್ರಧಾನಿಯಾದರು ಬದಲಾಗದ ಚೆನ್ನಮ್ಮ ಸರಳತೆ, ದೇವೇಗೌಡರ ಕಷ್ಟಕ್ಕೆ ಚಿನ್ನವನ್ನು ಅಡವಿಟ್ಟಿದ್ದರಂತ್ತೆ

ಮುಂದಿನ ಸುದ್ದಿ
Show comments