Webdunia - Bharat's app for daily news and videos

Install App

ಹೊರಬಿತ್ತು ಸ್ಫೋಟಕ ಆಡಿಯೋ ! ಏನಿದು?

Webdunia
ಭಾನುವಾರ, 24 ಏಪ್ರಿಲ್ 2022 (09:02 IST)
ಕಲಬುರಗಿ : 545 ಪಿಎಸ್ಐ ಹುದ್ದೆಗಳ ನೋಟಿಫಿಕೇಶನ್ ಮುಗಿದಿದೆ.
 
402ರಲ್ಲಿ ಮಾಡೋಣ ಎಂಬ ಮಾತುಗಳ ಜೊತೆಗೆ ಪರೀಕ್ಷಾ ಕೇಂದ್ರವನ್ನೇ ಮೊದಲು ಬುಕ್ ಮಾಡಲು ಅರ್ಜಿ ಸಂಖ್ಯೆಯನ್ನು ಬೇಗನೇ ಕಳುಹಿಸಿ ಎಂಬ ಹಲವಾರು ಸಂಭಾಷಣೆಗಳನ್ನು ಹೊಂದಿರುವ ಸ್ಫೋಟಕ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಈ ಕುರಿತಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೆಪಿಸಿಸಿ ವಕ್ತಾರ, ಶಾಸಕ ಪ್ರಿಯಾಂಕ್ ಖರ್ಗೆ ಅವರು, ಪಿಎಸ್ಐ ನೇಮಕಾತಿಯ ಸಂಬಂಧ ಇಬ್ಬರು ಆರೋಪಿಗಳ ಸಂಭಾಷಣೆಯಿದೆ.

ಇದರಲ್ಲಿ ಓರ್ವ ವ್ಯಕ್ತಿ ಪಿಎಸ್ಐ ಆಗಿ ಆಯ್ಕೆಯಾಗಿದ್ದಾನೆ. ಇನ್ನೋರ್ವ ವ್ಯಕ್ತಿ ಮಧ್ಯವರ್ತಿಯಾಗಿದ್ದಾನೆ. ಈ ಪ್ರಕರಣದಲ್ಲಿ ಮೇಲಿಂದ ಕೆಳಗಿನವರೆಗೂ ಭ್ರಷ್ಟಾಚಾರ ನಡೆದಿದೆ ಎಂದು ಕಿಡಿಕಾರಿದ್ದಾರೆ.

ಈ ಆಡಿಯೋ ಮೂಲಕ ತಿಳಿಯುವುದೆನೆಂದರೆ, ಈ 545ರ ಅಕ್ರಮ ಜೊತೆ, ಜೊತೆಗೆ ಮುಂದಿನ 402 ಪೋಸ್ಟ್ಗಳನ್ನು ಸಹ ಬುಕ್ ಮಾಡಲಾಗಿದೆ. ಈ ಸಂಬಂಧ 371 ಜೆ ಸರಿಯಾಗಿ ಜಾರಿ ಆಗಿಲ್ಲ ಅಕ್ರಮ ನಡೆದಿದೆ ಎಂದು ಹೈದರಾಬಾದ್ ಕರ್ನಾಟಕದ ಅಭ್ಯರ್ಥಿಗಳು ಕೋರ್ಟ್ಗೆ ಹೋಗಿದ್ದಾರೆ.

ಆದರೂ ಏನು ಆಗಲ್ಲ ಅಂತ ಆಯ್ಕೆಯಾದ ಪಿಎಸ್ಐ ಹೇಳುತ್ತಾನೆ. ಈ ಸರ್ಕಾರದಲ್ಲಿ ನಮ್ಮ ಭಾಗದವರ ಪರಿಸ್ಥಿತಿ ನೋಡಿ. ಈ ಪ್ರಕರಣದಲ್ಲಿ ಸರ್ಕಾರ, ಪರೀಕ್ಷಾ ಕೇಂದ್ರ, ಸಿಬ್ಬಂದಿ ಎಲ್ಲರೂ ಶಾಮಿಲಾಗಿದ್ದಾರೆ. ಅಭ್ಯರ್ಥಿಯ ಎಕ್ಸಾಂ ಸೆಂಟರ್ ಬುಕ್ ಮಾಡುವುದರಿಂದ ಹಿಡಿದು ಎಲ್ಲಾ ಕೂಡ ನೇಮಕಾತಿ ಪರೀಕ್ಷೆಯಲ್ಲಿ ಬುಕ್ ಆಗುತ್ತವೆ ಎಂದು ತಿಳಿಸಿದ್ದಾರೆ.

57 ಸಾವಿರ ಯುವಕರ ನೌಕರಿಯ ಭವಿಷ್ಯವಿದೆ. ತನಿಖಾಧಿಕಾರಿ ಚೇಂಜ್ ಮಾಡುವುದು ಸರಿಯಲ್ಲ. ಈ ಪರೀಕ್ಷೆಯಲ್ಲಿ ಸಾಕಷ್ಟು ಜನ ಅಕ್ರಮದಿಂದ ನೇಮಕವಾಗಿದ್ದಾರೆ. ಹೀಗಾಗಿ ಈ ಪರೀಕ್ಷೆ ಬಗ್ಗೆ ಸರ್ಕಾರ ಕೂಡಲೇ ಸೂಕ್ತ ನಿರ್ಧಾರ ಕೈಗೊಳ್ಳಬೇಕು.

ಈ ಆಡಿಯೋದಲ್ಲಿರುವ ಓರ್ವ ವ್ಯಕ್ತಿ ಯಾರು ಅಂತ ನನಗೆ ಗೊತ್ತಿದೆ. ನನಗೆ ಸಿಕ್ಕ ಆಡಿಯೋ ಪೊಲೀಸರಿಗೆ ಸಿಗಲ್ವಾ ಎಂದು ಪ್ರಶ್ನಿಸಿದ್ದಾರೆ.

ಈ ಆಡಿಯೋದಲ್ಲಿ ಆಯ್ಕೆಯಾದವರು ನಾನು ಎಚ್.ಕೆ ಭಾಗದವರು ಸಿಂದಗಿಯಲ್ಲಿ ಇದ್ದಿನಿ ಅಂತ ಹೇಳಿದ್ದಾರೆ. ಅಕ್ರಮದಲ್ಲಿ ಭಾಗಿಯಾದ ಮಹಾಂತೇಷ್ ಪಾಟೀಲ್ 2019ರಲ್ಲಿ ರಾಜೀನಾಮೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Raja Raguvamshi murder: ಗಂಡನನ್ನು ಕೊಲೆ ಬಗ್ಗೆ ಶಾಕಿಂಗ್ ವಿಚಾರ ಬಾಯ್ಬಿಟ್ಟ ಸೋನಮ್: ತಂದೆ ಫುಲ್ ಸಪೋರ್ಟ್

Siddaramaiah: ಚಿನ್ನಸ್ವಾಮಿ ದುರಂತದ ಬಗ್ಗೆ ಜೊತೆಯಲ್ಲಿದ್ದವರೂ ಹೇಳಲೇ ಇಲ್ವಲ್ಲಪ್ಪಾ.. ಸಿದ್ದರಾಮಯ್ಯ ಅಳಲು

Kerala cargo Ship fire: ಬೇಪೂರ್ ಹಡಗು ಅಗ್ನಿ ದುರಂತ 18 ಮಂದಿ ರಕ್ಷಣೆ video

Karnataka Weather: ಇಂದು ಈ ಜಿಲ್ಲೆಗಳಿಗೆ ಭಾರೀ ಮಳೆ, ಹವಾಮಾನ ಇಲಾಖೆಯ ಎಚ್ಚರಿಕೆ ಗಮನಿಸಿ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಮುಂದಿನ ಸುದ್ದಿ
Show comments