Webdunia - Bharat's app for daily news and videos

Install App

ರಾಜ್ಯದಲ್ಲಿ ಪ್ರವಾಹದ ಭೀತಿ !

Webdunia
ಸೋಮವಾರ, 8 ಆಗಸ್ಟ್ 2022 (11:16 IST)
ಬೆಂಗಳೂರು : ರಾಜ್ಯದಲ್ಲಿ ಇನ್ನೂ 4 ದಿನ ಮಳೆ ಅಬ್ಬರ ಮುಂದುವರೆಯಲಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಅಬ್ಬರಕ್ಕೆ ಜನ ತತ್ತರಿಸಿದ್ದು, ನೂರಾರು ಮನೆಗಳಿಗೆ ನೀರು ನುಗ್ಗಿದೆ. ತೋಟ, ಭತ್ತದ ಗದ್ದೆಗಳಿಗೆ, ಮೀನುಗಾರರ ದೋಣಿಗಳಿಗೂ ನೀರು ನುಗ್ಗಿ ಸಾಕಷ್ಟು ಹಾನಿ ಮಾಡಿದೆ.

ಅಂದಾಜು 40 ಕೋಟಿಗೂ ಅಧಿಕ ಹಾನಿಯಾಗಿದ್ದು ಜನ ಪರಿಹಾರಕ್ಕೆ ಆಗ್ರಹಿಸಿದ್ದಾರೆ. ಹಾಸನ ಜಿಲ್ಲೆ ಸಕಲೇಶಪುರ, ಆಲೂರು ಹಾಗೂ ಪಕ್ಕದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಹೇಮಾವತಿ ನದಿಗೆ ಒಳಹರಿವು ಹೆಚ್ಚಾಗಿದೆ. 39,500 ಕ್ಯೂಸೆಕ್ ನೀರನ್ನು ಆರು ಕ್ರಸ್ಟ್ ಗೇಟ್ಗಳ ಮೂಲಕ ಹೊರ ಬಿಡಲಾಗುತ್ತಿದೆ.

ಹಾಸನ ಜಿಲ್ಲೆಯಲ್ಲಿ ಒಂದು ವಾರದಿಂದ ಪ್ರತಿನಿತ್ಯ ಸರಾಸರಿ 25 ರಿಂದ 30 ಮಿಮಿ ಮಳೆಯಾಗುತ್ತಿದ್ದು, ಮಳೆಗೆ ಈವರೆಗೆ ಜಿಲ್ಲೆಯಲ್ಲಿ 350 ಮನೆಗಳು ಕುಸಿತಗೊಂಡಿದೆ. 450 ಕೋಟಿಗೂ ಹೆಚ್ಚು ನಷ್ಟವಾಗಿದೆ. ಕೃಷ್ಣ ನದಿ ಆರ್ಭಟಕ್ಕೆ ರಾಯಚೂರು ಜಿಲ್ಲೆಯಲ್ಲಿ ಹಲವು ಗ್ರಾಮಗಳು ಸಂಕಷ್ಟಕ್ಕೆ ಸಿಲುಕಿವೆ.

ನದಿ ತಟದಲ್ಲಿರುವ ಬೂರ್ದಿಪಾಡ ಗ್ರಾಮ ಪ್ರತೀ ಬಾರಿ ಪ್ರವಾಹದ ಭೀತಿ ಎದುರಿಸುತ್ತಿದೆ. ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ನಿಡಗುಂದಿ ಗ್ರಾಮದಲ್ಲಿ ಮಳೆಯಿಂದ ರಸ್ತೆಗಳೇ ಗದ್ದೆಯಂತಾಗಿದೆ. ಇಲ್ಲಿನ ವಿಠ್ಠಲ ನಗರದಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಯ ರಸ್ತೆ ಸಂಪೂರ್ಣ ಹಾಳಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮತಗಳ್ಳತನ: ರಾಹುಲ್ ನೇತೃತ್ವದಲ್ಲಿ ಆ.5 ರಂದು ಪ್ರತಿಭಟನೆ, ಡಿಕೆ ಶಿವಕುಮಾರ್

ತಮಿಳುನಾಡು ಬಿಜೆಪಿ ಉಪಾಧ್ಯಕ್ಷೆತಾಗಿ ನಟಿ ಖುಷ್ಬು ಸುಂದರ್‌ ಜವಾಬ್ದಾರಿ

ಆರಾಮಾಗಿ ನಡೆದುಕೊಂಡು ಹೋಗುತ್ತಿರುವಾಗಲೇ ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಸೂಸೈಡ್‌, ಭಯಾನಕ ವಿಡಿಯೋ

ಅಕ್ಟೋಬರ್‌ನಲ್ಲಿ ಸಿಎಂ ಬದಲಾವಣೆ ಪಕ್ಕಾ, ಖರ್ಗೆ ಸರಿಯಾದ ಸಮಯಕ್ಕೆ ಕಲ್ಲು ಹೊಡೆದಿದ್ದಾರೆ: ಆರ್‌ ಅಶೋಕ್‌

ಇಂಜೆಕ್ಷನ್ ಕೊಡಲು ಗೊತ್ತಿರುವ ಕೆ ಸುಧಾಕರ್‌ಗೆ ದುಡ್ಡು ಹೊಡೆಯುವುದು ಗೊತ್ತು: ಚಲುವರಾಯಸ್ವಾಮಿ ವ್ಯಂಗ್ಯ

ಮುಂದಿನ ಸುದ್ದಿ
Show comments