ಪ್ರವಾಹ : ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತ!

Webdunia
ಗುರುವಾರ, 19 ಮೇ 2022 (08:30 IST)
ಗುವಾಹಟಿ : ಅಸ್ಸಾಂನಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ರಣಮಳೆಗೆ ರಸ್ತೆ, ರೈಲು ಹಳಿ ಸೇರಿದಂತೆ ಹಲವು ಭಾಗಗಳಲ್ಲಿ ಗುಡ್ಡ ಕುಸಿತಗೊಂಡು 4 ಲಕ್ಷಕ್ಕೂ ಅಧಿಕ ಮಂದಿಗೆ ಹಾನಿಯಾಗಿರುವ ಬಗ್ಗೆ ವರದಿಯಾಗಿದೆ.
 
ಅಸ್ಸಾಂನಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದ್ದು, ತೀವ್ರ ಪ್ರಮಾಣದ ಸಾರ್ವಜನಿಕ ಆಸ್ತಿ ಪಾಸ್ತಿಗಳಿಗೆ ಹಾನಿಯಾಗಿದೆ.

26 ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ತಲೆದೂರಿದ್ದು, ಜನ ನೀರಿನ ಮಧ್ಯೆ ಜೀವ ಭಯದಿಂದ ರಕ್ಷಣೆಗಾಗಿ ಅಂಗಲಾಚುತ್ತಿದ್ದಾರೆ. ಪ್ರವಾಹದಿಂದಾಗಿ ಹಾಫ್ಲಾಂಗ್ ನಿಲ್ದಾಣದಲ್ಲಿ ರೈಲು ಉರುಳಿ ಬಿದ್ದಿದ್ದು, ಈಗಾಗಲೇ ಹಲವು ಸೇತುವೆಗಳು, ರೈಲ್ವೇ ಹಳಿಗಳು, ರಸ್ತೆಗಳು ಪ್ರವಾಹಕ್ಕೆ ಕೊಚ್ಚಿ ಹೋಗಿದೆ. 

ಮುಖ್ಯವಾಗಿ ಹೊಜಯ್, ಕಚಾರ್ ಜಿಲ್ಲೆಗಳಲ್ಲಿ ಜಲ ವಿಲಯ ಹೆಚ್ಚಿದೆ. ಬ್ರಹ್ಮಪುತ್ರ, ಬರಾಕ್, ಕೊಪಿಲಿ ಮತ್ತಿತರ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ತ್ರಿಪುರ, ಮಿಜೋರಾಂ, ಮಣಿಪುರಕ್ಕೆ ರೈಲು ಸೇವೆಯೇ ಸ್ಥಗಿತಗೊಂಡಿದೆ.

ದಿಮಾ ಹೊಸವೋ ಜಿಲ್ಲೆಯ ಲುಮ್ದಿಂಗ್-ಬದರ್ಪುರ್ ನಡುವೆ ಕಳೆದ ಎರಡು ದಿನಗಳಿಂದ ರೈಲಲ್ಲಿ ಸಿಲುಕಿದ್ದ 2,800 ಪ್ರಯಾಣಿಕರನ್ನು ವಾಯುಸೇನೆ ಸಹಕಾರದಿಂದ ಸುರಕ್ಷಿತ ಪ್ರಾಂತ್ಯಗಳಿಗೆ ಶಿಫ್ಟ್ ಮಾಡಲಾಗಿದೆ. ಈಗಾಗಲೇ 1,900ಕ್ಕೂ ಆಧಿಕ ಮನೆಗಳಿಗೆ ಹಾನಿಯಾಗಿದ್ದು, 39,558 ಮಂದಿಯನ್ನು ಸುರಕ್ಷಿತ ಸ್ಥಳಗಳಿಗೆ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಶಿಫ್ಟ್ ಮಾಡಿದೆ. ಪ್ರವಾಹ ಪೀಡಿತ ಜಾಗಗಳಲ್ಲಿ 89 ಅಧಿಕ ಸಂತ್ರಸ್ಥರ ಕೇಂದ್ರ ತೆರೆಯಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್ ಎಸ್ಎಸ್ ನಲ್ಲಿದ್ದ ಅಶೋಕ್ ರೈ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದು ಯಾಕೆ: ಅವರೇ ಹೇಳಿದ್ದು ಹೀಗೆ

ಅಪ್ಪ ಅನಂತ್ ಕುಮಾರ್ ಸುದ್ದಿಗೆ ಬಂದಿದ್ದಕ್ಕೆ ಪ್ರಿಯಾಂಕ್ ಖರ್ಗೆಗೆ ಬೆಂಡೆತ್ತಿದ ಪುತ್ರಿ ಐಶ್ವರ್ಯಾ

ಬಾಡೂಟ ತಿಂದ ಬಳಿಕ ನಿಮ್ಮ ಡಯಟ್ ಹೀಗಿರಬೇಕು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಚಿತ್ರದುರ್ಗದ ಸಂಸ್ಕೃತ ಶಿಕ್ಷಕ ವೀರೇಶ್ ಪ್ರಕರಣಕ್ಕೆ ಟ್ವಿಸ್ಟ್

ಮುಂದಿನ ಸುದ್ದಿ
Show comments