ರಾಜ್ಯದಲ್ಲಿ ಹೂ ದರ ಭಾರೀ ಇಳಿಕೆ

Webdunia
ಮಂಗಳವಾರ, 5 ಸೆಪ್ಟಂಬರ್ 2023 (07:02 IST)
ಚಿಕ್ಕಬಳ್ಳಾಪುರ : ರಾಜ್ಯದ ಬಹುತೇಕ ಕಡೆ ಬರದ ವಾತಾವರಣ, ಬರದ ನಡುವೆಯೂ ಚಿಕ್ಕಬಳ್ಳಾಪುರ ಜಿಲ್ಲೆಯ ರೈತರು ಹಗಲು ರಾತ್ರಿ ಎನ್ನದೇ  ಪಾತಾಳದಿಂದ ಅಂರ್ತಜಲ ಬಗೆದು ಹನಿ ಹನಿ ನೀರುಣಿಸಿ ಬಂಗಾರದಂತಹ ಹೂಗಳನ್ನ ಬೆಳೆದಿದ್ದಾರೆ.

ಬರದ ನಡುವೆ ಕಳೆದ ಮೂರು ದಿನಗಳಿಂದ ಬಂದ ಮಳೆ ಈಗ ಆ ಜಿಲ್ಲೆಯ ಹೂ ಬೆಳೆಗಾರರಿಗೆ ಬರೆ ಹಾಕುವಂತೆ ಮಾಡಿದೆ. ರಾಶಿ ರಾಶಿ ಹೂ ಬಿಕರಿಯಾಗದೇ ರೈತರು ಸುಖಾಸುಮ್ಮನೆ ಬಿಸಾಡಿ ಹೋಗುವಂತಹ ಘಟನೆ ಚಿಕ್ಕಬಳ್ಳಾಪುರ ಹೂವಿನ ಮಾರುಕಟ್ಟೆಯಲ್ಲಿ ನಡೆದಿದೆ.

ಹೂವಿನ ಬೆಲೆಯಲ್ಲಿ ಭಾರೀ ಕುಸಿತ ಕಂಡಿದ್ದು, ಹೂ ಮಾರಾಟ ಮಾಡಲು ಮಾರುಕಟ್ಟೆಗೆ ಹೂ ತಂದ ರೈತರು ಹೂ ಕೇಳುವವರಿಲ್ಲದೇ, ಖರೀದಿ ಮಾಡುವವರಿಲ್ಲದೇ  ಎಸೆದು ಹೋಗಿದ್ದಾರೆ.

ಕಳೆದ 1 ತಿಂಗಳು ಸೇರಿದಂತೆ ಅದರಲ್ಲೂ ವರಮಹಾಲಕ್ಷ್ಮೀ ಹಬ್ಬಕ್ಕೆ ಭಾರೀ ಏರಿಕೆ ಕಂಡಿದ್ದ ಹೂವಿನ ದರ ಈಗ ಪಾತಾಳಕ್ಕೆ ಕುಸಿದಿದೆ. ವರಮಹಾಲಕ್ಷ್ಮೀ ಹಬ್ಬದಂದು 1 ಕೆಜಿ ಚೆಂಡು ಹೂ 40 ರಿಂದ 70 ರೂ.ಗೆ ಮಾರಾಟವಾಗಿತ್ತು. ಆದರೆ ಈಗ ಚೆಂಡು ಹೂ ಖರೀದಿ ಮಾಡುವವರೇ ಇಲ್ಲ. ಈಗ 1 ಕೆಜಿ ಚೆಂಡು ಹೂ 1 ರೂ., 2 ರೂ.ಗೆ ಮಾರಾಟವಾಗುತ್ತಿದೆ. ಹೀಗಾಗಿ ರೈತರು ಮಾರಾಟಕ್ಕೆ ತಂದಿದ್ದ ಹೂವನ್ನ ಮಾರುಕಟ್ಟೆಯಲ್ಲೇ  ಬಿಸಾಡಿ ಹೋಗುತ್ತಿದ್ದಾರೆ. 

ವರಮಹಾಲಕ್ಷ್ಮೀ ಹಬ್ಬದ ಸಮಯದಲ್ಲಿ ಸೇವಂತಿಗೆ 300 ರಿಂದ 600 ರೂಪಾಯಿಗೂ ಮಾರಾಟವಾಗಿತ್ತು. ಈಗ 5 ರೂ. 10 ರೂ.ಗೆ ಇಳಿದಿದೆ. ಮಳೆಯಿಂದ ನೆನೆದು ಹೋದ ಒದ್ದೆಯಾದ ಹೂಗಳನ್ನ ಖರೀದಿ ಮಾಡುವವರೇ ಇಲ್ಲ. ಹೀಗಾಗಿ ಸೇವಂತಿಗೆ ಹೂಗಳನ್ನ ಸಹ ರೈತರು ಎಲ್ಲಂದರಲ್ಲಿ ಎಸೆಯುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೂರು ವರ್ಷಗಳಿಂದ ನಾನು ಟೀಕೆ ಮಾಡಿದ್ದೇನೆ. ಈಗ ಅದಕ್ಕೆ ಸಮಯವಲ್ಲ

ಹಾಸನ ಜಿಲ್ಲೆಯ ಏಕೈಕ ಕೈ ಶಾಸಕ ಕೆಎಂ ಶಿವಲಿಂಗೇಗೌಡಗೆ ಸಚಿವ ಸ್ಥಾನ ನೀಡಲು ರಾಹುಲ್‌ಗೆ ಪತ್ರ

ಸಿದ್ದರಾಮಯ್ಯ ಈ ಮಾತು ಡಿಕೆ ಶಿವಕುಮಾರ್‌ಗೆ ಎಚ್ಚರಿಕೆ ಗಂಟೆ: ಡಿಕೆ ಸುಧಾಕರ್‌

ಡೇಟ್ ಫಿಕ್ಸ್ ಆಗದಿದ್ದರೂ ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ನಡೆಯುತ್ತಿದೆ ಭಾರೀ ಸಿದ್ಧತೆ

ಮಹಾರಾಷ್ಟ್ರ ನಕಲಿ ಮದ್ಯ ಸೇವನೆ ಪ್ರಕರಣ: 48ಗಂಟೆಯಲ್ಲಿ ಮೃತರ ಸಂಖ್ಯೆ 18ಕ್ಕೆ ಏರಿಕೆ

ಮುಂದಿನ ಸುದ್ದಿ
Show comments