ನಿಷೇಧಾಜ್ಞೆ ಜಾರಿ, ಖಾಕಿ ಬಿಗಿ ಭದ್ರತೆ!

Webdunia
ಮಂಗಳವಾರ, 22 ಫೆಬ್ರವರಿ 2022 (07:18 IST)
ಶಿವಮೊಗ್ಗ : ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ ಸಂಬಮಧಿಸಿದಂತೆ ಶಿವಮೊಗ್ಗ ನಗರ ಬೂದಿ ಮುಚ್ಚಿದ ಕೆಂಡದಂತಿದ್ದು, ಇದೀಗ ಪೊಳೀಸರ ಭದ್ರಕೋಟೆಯಾಗಿದೆ.
 
ಹರ್ಷನ ಹತ್ಯೆ ಬೆನ್ನಲ್ಲೇ ಖಾಕಿ ಫುಲ್ ಅಲರ್ಟ್ ಆಗಿದೆ. ಶಿವಮೊಗ್ಗ ನಗರದಾದ್ಯಂತ ನಾಳೆ ಬೆಳಗ್ಗೆ 6 ಗಂಟೆವರೆಗೂ ಸೆಕ್ಷನ್ 144 ಜಾರಿ ಮಾಡಲಾಗಿದೆ. ಮುನ್ನೆಚ್ಚರಿಕೆಗಾಗಿ ಶಾಲೆ-ಕಾಲೇಜಿಗೂ ರಜೆ ಘೋಷಣೆ ಮಾಡಲಾಗಿದೆ.

ಭಾನುವಾರ ರಾತ್ರಿ ಹರ್ಷ ಕೊಲೆ ನಡೆದಿತ್ತು. ಮೃತ ಯುವಕನ ಅಂತಿಮ ಮೆರವಣಿಗೆ ಸಾಗುತ್ತಿದ್ದ ಉದ್ರಿಕ್ತರಿಂದ ಕಟ್ಟಡ, ಅಂಗಡಿಗಳಿಗೆ ಕಲ್ಲುತೂರಾಟ ನಡೆದಿದೆ. ಮೆರವಣಿಗೆ ವೇಳೆ ಮುಸ್ಲಿಂ ಪತಾಕೆ ಹಾರಿಸಿದ್ದರಿಂದ ಯುವಕರು ಪ್ರಚೋದನೆ ಒಳಗಾಗಿ ಮೆರವಣಿಗೆ ವೇಳೆಯೇ ಹಿಂಸೆ, ಕಲ್ಲು ತೂರಾಟ ನಡೆದಿದೆ. 

ಜಲ್ಲಿಕಲ್ಲು ತುಂಬಿದ ಲಾರಿಯಿಂದ ಉದ್ರಿಕ್ತರು ಕಲ್ಲುಗಳನ್ನು ಎಸೆದಿದ್ದಾರೆ. ಮನೆಗೆ ನುಗ್ಗಿ ಅಟ್ಟಹಾಸ, ಫ್ರಿಡ್ಜ್, ಬೀರು ಜಖಂಗೊಂಡಿದ್ದು ಕಾರುಗಳ ಗಾಜುಗಳು ಪುಡಿಪುಡಿಯಾಗಿದೆ.

ಪೊಲೀಸರ ಮುಂದೆಯೇ ದೊಣ್ಣೆ ಪ್ರದರ್ಶನ ನೀಡಿದ್ದು ಮಚ್ಚು, ಲಾಂಗ್ ಹಿಡಿದು ಕೊಟ್ಟಿದ್ದಾರೆ. ಹಣ್ಣಿನ ತಳ್ಳುಗಾಡಿ ಧ್ವಂಸವಾಗಿದ್ದು ಕಲ್ಲುತೂರಾಟದ ವೇಳೆ ಐದಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಹವಾಮಾನದಲ್ಲಿ ಭಾರೀ ವ್ಯತ್ಯಯ, ಸಿಲಿಕಾನ್ ಸಿಟಿ ಮಂದಿ ಹುಷಾರು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಇವಳೆಂಥಾ ಹೆಂಡತಿ.. ಗಂಡನ ಎದೆ ಮೇಲೆ ಕೂತು ಹೀಗೆ ಮಾಡೋದಾ: ರಹಸ್ಯ ಕ್ಯಾಮರಾದಲ್ಲಿ ಎಲ್ಲವೂ ಸೆರೆ Video

ಪಂಚೆ ಕಟ್ಟಿಕೊಂಡು ಡಿಕೆ ಶಿವಕುಮಾರ್ ಹುಡುಗರೂ ನಾಚುವಂತೆ ವಾಲಿಬಾಲ್ ಆಡ್ತಾರೆ Video ನೋಡಿ

ಕೇಂದ್ರ ಬಜೆಟ್ ರೈತರ ಆದಾಯವನ್ನು ಹೆಚ್ಚಿಸುತ್ತದೆ: ಪ್ರಧಾನಿ ಮೋದಿ ವಿಶ್ವಾಸ

ಮುಂದಿನ ಸುದ್ದಿ
Show comments