ನಿಷೇಧಾಜ್ಞೆ ಜಾರಿ, ಖಾಕಿ ಬಿಗಿ ಭದ್ರತೆ!

Webdunia
ಮಂಗಳವಾರ, 22 ಫೆಬ್ರವರಿ 2022 (07:18 IST)
ಶಿವಮೊಗ್ಗ : ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ ಸಂಬಮಧಿಸಿದಂತೆ ಶಿವಮೊಗ್ಗ ನಗರ ಬೂದಿ ಮುಚ್ಚಿದ ಕೆಂಡದಂತಿದ್ದು, ಇದೀಗ ಪೊಳೀಸರ ಭದ್ರಕೋಟೆಯಾಗಿದೆ.
 
ಹರ್ಷನ ಹತ್ಯೆ ಬೆನ್ನಲ್ಲೇ ಖಾಕಿ ಫುಲ್ ಅಲರ್ಟ್ ಆಗಿದೆ. ಶಿವಮೊಗ್ಗ ನಗರದಾದ್ಯಂತ ನಾಳೆ ಬೆಳಗ್ಗೆ 6 ಗಂಟೆವರೆಗೂ ಸೆಕ್ಷನ್ 144 ಜಾರಿ ಮಾಡಲಾಗಿದೆ. ಮುನ್ನೆಚ್ಚರಿಕೆಗಾಗಿ ಶಾಲೆ-ಕಾಲೇಜಿಗೂ ರಜೆ ಘೋಷಣೆ ಮಾಡಲಾಗಿದೆ.

ಭಾನುವಾರ ರಾತ್ರಿ ಹರ್ಷ ಕೊಲೆ ನಡೆದಿತ್ತು. ಮೃತ ಯುವಕನ ಅಂತಿಮ ಮೆರವಣಿಗೆ ಸಾಗುತ್ತಿದ್ದ ಉದ್ರಿಕ್ತರಿಂದ ಕಟ್ಟಡ, ಅಂಗಡಿಗಳಿಗೆ ಕಲ್ಲುತೂರಾಟ ನಡೆದಿದೆ. ಮೆರವಣಿಗೆ ವೇಳೆ ಮುಸ್ಲಿಂ ಪತಾಕೆ ಹಾರಿಸಿದ್ದರಿಂದ ಯುವಕರು ಪ್ರಚೋದನೆ ಒಳಗಾಗಿ ಮೆರವಣಿಗೆ ವೇಳೆಯೇ ಹಿಂಸೆ, ಕಲ್ಲು ತೂರಾಟ ನಡೆದಿದೆ. 

ಜಲ್ಲಿಕಲ್ಲು ತುಂಬಿದ ಲಾರಿಯಿಂದ ಉದ್ರಿಕ್ತರು ಕಲ್ಲುಗಳನ್ನು ಎಸೆದಿದ್ದಾರೆ. ಮನೆಗೆ ನುಗ್ಗಿ ಅಟ್ಟಹಾಸ, ಫ್ರಿಡ್ಜ್, ಬೀರು ಜಖಂಗೊಂಡಿದ್ದು ಕಾರುಗಳ ಗಾಜುಗಳು ಪುಡಿಪುಡಿಯಾಗಿದೆ.

ಪೊಲೀಸರ ಮುಂದೆಯೇ ದೊಣ್ಣೆ ಪ್ರದರ್ಶನ ನೀಡಿದ್ದು ಮಚ್ಚು, ಲಾಂಗ್ ಹಿಡಿದು ಕೊಟ್ಟಿದ್ದಾರೆ. ಹಣ್ಣಿನ ತಳ್ಳುಗಾಡಿ ಧ್ವಂಸವಾಗಿದ್ದು ಕಲ್ಲುತೂರಾಟದ ವೇಳೆ ಐದಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉತ್ತರ ಭಾರತದಲ್ಲಿ ಪ್ರವಾಹ, ಭೂಕುಸಿತಕ್ಕೆ ಕನಿಷ್ಠ 25ಮಂದಿ ಬಲಿ, Video

ಮೋದಿ ವಿರುದ್ಧ ಪ್ರತಿಭಟನೆಗಿಳಿದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ, Video

ಸಿಜೆಪಿ ಪ್ರತಿಭಟನೆಯಲ್ಲಿ ಸುನೀತಾ ವಿಲಿಯಮ್ಸ್ ಪಾಲ್ಗೊಂಡಿದ್ದರೇ, ಅಸಲಿಯತ್ತೇನು

ಪತ್ನಿ, ಮಕ್ಕಳಿಬ್ಬರ ಬಾಯಿಗೆ ಪ್ಲಾಸ್ಟರ್ ಅಂಟಿಸಿ ಉಸಿರುಗಟ್ಟಿಸಿ ಕೊಂದ ಬಳಿಕ ಪತಿಯೂ ಸಾವಿಗೆ ಶರಣು, ಕರುಳು ಹಿಂಡುವ ಘಟನೆ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಮಹತ್ವದ ಮಾಹಿತಿ ಹಂಚಿಕೊಂಡ ಜಿ ಪರಮೇಶ್ವರ್‌

ಮುಂದಿನ ಸುದ್ದಿ
Show comments