ಕನ್ನಡ ಮಾಧ್ಯಮದಲ್ಲಿ ಇಂಜಿನಿಯರಿಂಗ್ ಶಿಕ್ಷಣಕ್ಕೆ ನಾಲ್ಕು ಕಾಲೇಜುಗಳಿಗೆ ಅನುಮತಿ: ಬೊಮ್ಮಾಯಿ

Webdunia
ಮಂಗಳವಾರ, 12 ಅಕ್ಟೋಬರ್ 2021 (21:10 IST)
ಬೆಂಗಳೂರು : ಇಂಜಿಯರಿಂಗ್ ಕಾಲೇಜುಗಳಲ್ಲಿ 4 ವರ್ಷದ ಬಿಎಸ್ಸಿ ಆನರ್ಸ್ ಆರಂಭಿಸಲು ಅನುಮತಿ ಪತ್ರ ನೀಡಲಾಗಿದೆ.

ನೂತನ ಶಿಕ್ಷಣ ಪದ್ಧತಿ (NEP) ಅನುಸಾರ ಇಂಜಿನಿಯರಿಂಗ್ ಶಿಕ್ಷಣ ಅನುಷ್ಠಾನ ಮಾಡಲಾಗುವುದು ಎಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕನ್ನಡ ಮಾಧ್ಯಮದಲ್ಲಿ ಇಂಜಿನಿಯರಿಂಗ್ ಶಿಕ್ಷಣಕ್ಕೆ ಒಪ್ಪಿಗೆ ನೀಡಲಾಗಿದೆ. ಈ ಸಂಬಂಧ ನಾಲ್ಕು ಕಾಲೇಜುಗಳಿಗೆ ಅನುಮತಿ ಪತ್ರವನ್ನು ನೀಡಲಾಗಿದೆ. ಕನ್ನಡ ಭಾಷೆಯಲ್ಲಿ ಇಂಜಿನಿಯರಿಂಗ್ ಸಿಲಬಸ್ ಬಿಡುಗಡೆ ಮಾಡಿರುವುದು ಹೊಸ ಅಧ್ಯಾಯವಾಗಿದೆ. ಇದೊಂದು ಐತಿಹಾಸಿಕ ದಿನ ಎಂದು ಸಿಎಂ ಬೊಮ್ಮಾಯಿ ಸಂತಸ ಹಂಚಿಕೊಂಡಿದ್ದಾರೆ.
ಅತ್ಯಂತ ಪ್ರಗತಿಪರವಾಗಿ ಎನ್ಇಪಿ ಜಾರಿಗೊಳಿಸುವಲ್ಲಿ ಯಶಸ್ವಿ ಆಗಿದ್ದೇವೆ. ಸಚಿವ ಡಾ. ಅಶ್ವತ್ಥ್ ನಾರಾಯಣ ಯಶಸ್ವಿಯಾಗಿದ್ದಾರೆ. ಎನ್ಇಪಿ ಅನುಸಾರ ಇಂಜಿನಿಯರಿಂಗ್ ಶಿಕ್ಷಣ ಅನುಷ್ಠಾನ ಮಾಡುತ್ತೇವೆ ಎಂದು ಬೊಮ್ಮಾಯಿ ಮಾಹಿತಿ ನೀಡಿದ್ದಾರೆ. ರಾಷ್ಟ್ರೀಯ ಶಿಕ್ಷಣ ನೀತಿಯಿಂದ ದೊಡ್ಡ ಬದಲಾವಣೆ ಆಗಲಿದೆ. ಕರ್ನಾಟಕದ ತಾಂತ್ರಿಕ ಶಿಕ್ಷಣದಲ್ಲಿ ದೊಡ್ಡ ಬದಲಾವಣೆ ಆಗುತ್ತದೆ. ಇಷ್ಟು ದೊಡ್ಡ ಪ್ರಮಾಣದ ಬದಲಾವಣೆ ಯಾವತ್ತೂ ಆಗಿಲ್ಲ ಎಂದು ಅವರು ಹೇಳಿದ್ದಾರೆ.
ಉನ್ನತ ಶಿಕ್ಷಣದಲ್ಲಿ ದೊಡ್ಡ ಪ್ರಮಾಣದಲ್ಲಿ ತಯಾರಿ ಮಾಡಿ ರಾಷ್ಟ್ರೀಯ ಶಿಕ್ಷಣ ನೀತಿಗೊಳಪಡಿಸಲಾಗುತ್ತಿದೆ. ನಾನು ಕೂಡ ಇಂಜಿನಿಯರಿಂಗ್ ಸ್ಟೂಡೆಂಟ್ ಆಗಿದ್ದೆ. ನನ್ನ ವಿಷಯದ ಬಗ್ಗೆ ಹೊಸತನ ಕೊಡುವ ಪ್ರಯತ್ನ ಮಾಡಲಾಗಿದೆ. ಹೊಸತನ ಕೊಡುವ ಪ್ರಯತ್ನವನ್ನು ನಾನು ಉದ್ಘಾಟಿಸಿದ್ದೇನೆ. ನಾನೇ ಉದ್ಘಾಟನೆ ಮಾಡಿದ್ದು ತುಂಬಾ ಖುಷಿ ತಂದಿದೆ. ಬದಲಾವಣೆಗೆ ವಿದ್ಯಾರ್ಥಿಗಳು ತಯಾರಿ ಮಾಡಿಕೊಳ್ಳಬೇಕು ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಗೆ ಜೈಕಾರ ಹಾಕುತ್ತಿದ್ದ ಬೆಂಬಲಿಗರು: ಸಿಟ್ಟಾದ ಸಿದ್ದರಾಮಯ್ಯ ಮಾಡಿದ್ದೇನು video

ಕ್ಲೀನ್ ಮಾಡಿ, ಕಟ್‌ ಮಾಡಿದ್ದರು ಸಾಯದೆ ಚಡಪಡಿಸಿದ ಮೀನು, ಮಲ್ಪೆಯಲ್ಲಿ ಅಚ್ಚರಿ ಘಟನೆ

ಮನರೇಗಾ ಬಡವರ ಹಕ್ಕು, ಮರುಜಾರಿ ಆಗುವವರೆಗೂ ಹೋರಾಟ ಮಾಡ್ತೀವಿ: ಡಿಕೆ ಶಿವಕುಮಾರ್

ಹಾಲಿ ನ್ಯಾಯಾಧೀಶರು ಅಥವಾ ಸಿಬಿಐನಿಂದ ಅಬಕಾರಿ ಹಗರಣದ ತನಿಖೆಗೆ ವಿಜಯೇಂದ್ರ ಆಗ್ರಹ

6 ಸಾವಿರ ಕೋಟಿಯಲ್ಲಿ ಸಿದ್ದರಾಮಯ್ಯ, ಡಿಕೆಶಿ, ಸೋನಿಯಾ, ರಾಹುಲ್, ಖರ್ಗೆ ಪಾಲೆಷ್ಟು: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments