ಉಚಿತ ಬಸ್ ಸಂಚಾರ : ಸಾರಿಗೆ ಇಲಾಖೆ ಲೆಕ್ಕ ಏನು?

Webdunia
ಬುಧವಾರ, 31 ಮೇ 2023 (06:35 IST)
ರಾಜ್ಯದ ಎಲ್ಲಾ ಹೆಣ್ಮಕ್ಕಳಿಗೂ ಷರತ್ತು ರಹಿತವಾಗಿ ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿಯ ಸಾಮಾನ್ಯ ಬಸ್ಗಳಲ್ಲಿ ಸಂಚಾರಕ್ಕೆ ಮುಕ್ತ ಅವಕಾಶ ನೀಡುವ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಘೋಷಣೆ ಮಾಡಿದ್ದಾರೆ.

* ನಿತ್ಯ ಸರ್ಕಾರಿ ಬಸ್ಗಳಲ್ಲಿ ಸಂಚಾರ – 85 ಲಕ್ಷ ಮಂದಿ (ಅಂದಾಜು)
* ನಿತ್ಯ ಸಂಚರಿಸುವ ಮಹಿಳೆಯರು – 43 ಲಕ್ಷ ಮಂದಿ (ಅಂದಾಜು)
* ಉಚಿತ ಸಂಚಾರ ಘೋಷಣೆಯಿಂದ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಬಹುದು

ಸಾರಿಗೆ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಎಲ್ಲಾ ಜಿಲ್ಲೆಗಳಲ್ಲಿ ಪ್ರಯಾಣಿಸುತ್ತಿರುವವರ ಅಂಕಿ-ಅಂಶ ವಿವರವನ್ನ ನೀಡಲಾಗಿದೆ. ಆಯಾ ನಿಗಮಗಳಲ್ಲಿ ಪ್ರಯಾಣಿಕರೆಷ್ಟು ಅನ್ನೋ ಅಂಕಿ-ಅಂಶಗಳ ಸಂಪೂರ್ಣ ಮಾಹಿತಿಯನ್ನು ಸಚಿವರು ಪಡೆದಿದ್ದಾರೆ.

ಸಾರಿಗೆ ನಿಗಮದಲ್ಲಿ ತೈಲಗಳಿಗೆ ಆಗುವ ವೆಚ್ಚಗಳ ಮಾಹಿತಿ, ಸಿಬ್ಬಂದಿಯ ವೇತನ ವೆಚ್ಚ ಹಾಗೂ ಆಗುವ ನಷ್ಟದ ಕುರಿತು ಸಚಿವರಿಗೆ ವಿವರವಾಗಿ ತಿಳಿಸಲಾಗಿದೆ. 4 ನಿಗಮಗಳು ಯಾವ ರೀತಿ ಕೆಲಸ ಮಾಡುತ್ತಿವೆ? ಯಾವ ಇಲಾಖೆಯ ಆದಾಯ ಹಾಗೂ ನಷ್ಟ ಎಷ್ಟು ಎಂಬ ಮಾಹಿತಿಯನ್ನು ಸಚಿವರು ಸಂಗ್ರಹಿಸಿದ್ದಾರೆ. 

ಇಂದು (ಬುಧವಾರ) ಸಿಎಂ ಹಾಗೂ ಸಚಿವರ ಸಭೆ ನಡೆಯಲಿದೆ. ಜೂನ್ 1ಕ್ಕೆ ಕ್ಯಾಬಿನೆಟ್ ಸಭೆ ನಡೆಯಲಿದ್ದು, ಅಂದು ಮಹಿಳೆಯರ ಉಚಿತ ಪ್ರಯಾಣದ ಗ್ಯಾರಂಟಿ ಅಧಿಕೃತವಾಗಿ ಘೋಷಣೆಯಾಗಲಿದೆ. ಪ್ರಣಾಳಿಕೆಯಲ್ಲಿ ಹೇಳಿದಂತೆ ಎಲ್ಲಾ ಮಹಿಳೆಯರಿಗೂ ಉಚಿತ ಪ್ರಯಾಣ ಅಂತ ಸಚಿವರೇನೋ ಹೇಳಿದ್ದಾರೆ. ಆದರೆ ಯಾವಾಗಿನಿಂದ ಅನ್ನೋದು ಕ್ಯಾಬಿನೆಟ್ ಸಭೆ ಬಳಿಕ ಸ್ಪಷ್ಟವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸಹಾಯಕರಾದ ಮಲ್ಲಿಕಾರ್ಜುನ ಖರ್ಗೆ: ಇನ್ನು ರಾಹುಲ್ ಗಾಂಧಿಯೇ ಬರಬೇಕು

ತಾಯಂದಿರ ಎದೆಹಾಲಿನಲ್ಲಿ ಯುರೇನಿಯಂ ಪತ್ತೆ, ಮಕ್ಕಳ ಮೇಲೆ ಪರಿಣಾಮವೇನು ಗೊತ್ತಾ

ದುಬೈ ಏರ್ ಶೋ ದುರಂತ, ತಾಯ್ನಾಡಿಗೆ ಪೈಲೆಟ್ ನಮನ್ಶ್‌ ಸಿಯಾಲ್ ಪಾರ್ಥಿವ ಶರೀರ

ಕರೂರು ಕಾಲ್ತುಳಿತ ಬೆನ್ನಲ್ಲೇ ಪಕ್ಷದ ಮುಖಂಡರ ಸಭೆ ಕರೆದ ನಟ ವಿಜಯ್

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್‌ ನಾಳೆ ಪ್ರಮಾಣ ಸ್ವೀಕಾರ

ಮುಂದಿನ ಸುದ್ದಿ
Show comments