Webdunia - Bharat's app for daily news and videos

Install App

ಬಡವರಿಗೆ ಉಚಿತ ಆಹಾರ, ಕೇಂದ್ರವೇ ಸಂಪೂರ್ಣ ವೆಚ್ಚ ಭರಿಸಲಿದೆ : ಸೀತಾರಾಮನ್

Webdunia
ಬುಧವಾರ, 1 ಫೆಬ್ರವರಿ 2023 (11:40 IST)
ನವದೆಹಲಿ : ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯ ಅಡಿ ಬಡವರಿಗೆ ಇನ್ನೂ ಒಂದು ವರ್ಷಗಳ ಕಾಲ ಉಚಿತ ಆಹಾರ ನೀಡಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಘೋಷಿಸಿದ್ದಾರೆ.

ತಮ್ಮ ಬಜೆಟ್ ಭಾಷಣದಲ್ಲಿ, ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ, 28 ತಿಂಗಳ ಕಾಲ 80 ಕೋಟಿಗೂ ಹೆಚ್ಚು ಜನರಿಗೆ ಉಚಿತ ಆಹಾರ ಧಾನ್ಯಗಳನ್ನು ವಿತರಿಸಿದ್ದೇವೆ ಎಂದು ತಿಳಿಸಿದರು.

ಕೋವಿಡ್ ಕಾಲದಲ್ಲಿ ಹಸಿವನ್ನು ನೀಗಿಸಿದ ಈ ಯೋಜನೆಯನ್ನು ಇನ್ನೂ ಒಂದು ವರ್ಷಗಳ ಕಾಲ ವಿಸ್ತರಿಸುತ್ತಿದ್ದೇವೆ. ಈ ಯೋಜನೆ ಜಾರಿಗೆ ಸರ್ಕಾರಕ್ಕೆ 2 ಲಕ್ಷ ಕೋಟಿ ರೂ.  ಅಗತ್ಯವಿದ್ದು, ಸಂಪೂರ್ಣ ವೆಚ್ಚವನ್ನು ಕೇಂದ್ರ ಸರ್ಕಾರವೇ ಭರಿಸಲಿದೆ ಎಂದು ಹೇಳಿದರು.

ಭಾರತದ ಆರ್ಥಿಕತೆಯು ಸರಿಯಾದ ಹಾದಿಯಲ್ಲಿದೆ, ಉಜ್ವಲ ಭವಿಷ್ಯದತ್ತ ಸಾಗುತ್ತಿದೆ. 10 ವರ್ಷಗಳಲ್ಲಿ ಭಾರತ ವಿಶ್ವದ ಐದನೇ ಅತಿ ದೊಡ್ಡ ಆರ್ಥಿಕತೆಯಾಗಿ ಹೊರ ಹೊಮ್ಮಿದೆ ಎಂದು ಸರ್ಕಾರದ ಸಾಧನೆಯನ್ನು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments