ಮಹಿಳೆಯರಿಗೆ ಉಚಿತ ಪ್ರಯಾಣ : ಮಾರ್ಗಸೂಚಿಯಲ್ಲಿ ಏನಿದೆ?

Webdunia
ಶನಿವಾರ, 27 ಮೇ 2023 (14:29 IST)
ಬೆಂಗಳೂರು : ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಮಹಿಳೆಯರಿಗೆ ಫ್ರೀ ಬಸ್ ಯೋಜನೆ ಜಾರಿ ಸಂಬಂಧ ಸಾರಿಗೆ ಇಲಾಖೆ ಕೆಲಸ ಮಾಡುತ್ತಿದೆ. ಇನ್ನೆರಡು ದಿನದಲ್ಲಿ ಯೋಜನೆಯ ಖರ್ಚು, ವೆಚ್ಚದ ಸಂಪೂರ್ಣ ವರದಿಯನ್ನು ಸರ್ಕಾರದ ಮುಂದಿಡಲಿದೆ.

ಮೂರು ದಿನದ ಹಿಂದೆ ಗ್ಯಾರಂಟಿಗಳ ಜಾರಿ ವಿಚಾರವಾಗಿ ಆಯಾ ಇಲಾಖೆ ಹಣಕಾಸು ಮುಖ್ಯ ಅಧಿಕಾರಿಗಳ ಜೊತೆ ಸಿಎಂ, ಡಿಸಿಎಂ ಸಭೆ ಮಾಡಿದ್ದಾರೆ. ಸಭೆಯಲ್ಲಿ ಈಗಾಗಲೇ ಯೋಜನೆ ಜಾರಿಗೆ ತಗಲುವ ವೆಚ್ಚ, ಅನುಷ್ಠಾನ, ಕ್ರಮಗಳ ಬಗ್ಗೆ ಮಾಹಿತಿ ಕೇಳಿರುವ ಸರ್ಕಾರ ಈ ಬಗ್ಗೆ ವರದಿ ಸಿದ್ದಪಡಿಸುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿತ್ತು.

ಸಾರಿಗೆ ಇಲಾಖೆ ಅಧಿಕಾರಿಗಳು, ಸಾರಿಗೆ ಇಲಾಖೆಗೆ ಸದ್ಯ ಸ್ಕೀಂನಿಂದ ತಗಲುವ ವೆಚ್ಚ, ಜಿಲ್ಲೆ, ತಾಲೂಕುವಾರು ಪ್ರತಿನಿತ್ಯ ಸಂಚರಿಸುವ ಮಹಿಳೆಯರ ಸಂಖ್ಯೆ, ಈ ಎಲ್ಲ ಅಂಶಗಳ ಆಧಾರದ ಮೇಲೆ ವರದಿ ಸಿದ್ದಪಡಿಸುತ್ತಿದ್ದಾರೆ.   2-3  ದಿನದ ಒಳಗಡೆ ಸಂಪೂರ್ಣ ವರದಿ ಸಿದ್ದರಾಮಯ್ಯ ಅವರ ಕೈಸೇರಲಿದೆ.

ಮಾರ್ಗಸೂಚಿಯಲ್ಲಿ ಏನಿರಬಹುದು?

ಐಷಾರಾಮಿ ಬಸ್ಗಳಲ್ಲಿ ಫ್ರೀ ಓಡಾಟಕ್ಕೆ ನಿರ್ಬಂಧ ವಿಧಿಸಲಾಗಿದ್ದು ಸರ್ಕಾರಿ ಬಸ್ನಲ್ಲಿ ಸಂಚರಿಸುವ ಮಹಿಳೆಯರಿಗೆ ಪ್ರತ್ಯೇಕ ಪಾಸ್ ನೀಡಲು ಚಿಂತನೆ ನಡೆದಿದೆ.

ಉಚಿತ ಪ್ರಯಾಣ ಯೋಜನೆಗೆ ಅರ್ಜಿ ಸಲ್ಲಿಸುವ ಅಗತ್ಯ ಇಲ್ಲ. ಉಚಿತ ಬಸ್ ಬಳಸಲು ಮಹಿಳಾ ಫಲಾನುಭವಿಗಳಿಗೆ ಆಧಾರ್ ಕಾರ್ಡ್ ಕಡ್ಡಾಯ. ಎಲ್ಲಾ ಪ್ರೀಮಿಯಂ ಬಸ್ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡುವ ಸಾಧ್ಯತೆಯಿದೆ. 

ಬಿಎಂಟಿಸಿಯಲ್ಲಿ ಕೇವಲ ದುಡಿಯುವ ವರ್ಗದ ಮಹಿಳೆಯರಿಗಷ್ಟೇ ಉಚಿತ ಇರಲಿದ್ದು ಇತರೇ ಬಸ್ಗಳಲ್ಲಿ ಇಂತಿಷ್ಟು ಕಿಲೋ ಮೀಟರ್ ಒಳಗಡೆ ಸಂಚಾರ ನಿಯಮ ಬರುವ ಸಾಧ್ಯತೆಯಿದೆ. ಬಿಎಂಟಿಸಿ, ಕೆಎಸ್ಆರ್ಟಿಸಿ, ವಾಯುವ್ಯ ಹಾಗೂ ಕಲ್ಯಾಣ ಕರ್ನಾಟಕ ಸಾರಿಗೆ ನಿಗಮಕ್ಕೆ ತಗುಲುವ ಹೊರೆಯನ್ನು ಸರ್ಕಾರ ಭರಿಸಲು ನಿರ್ಧಾರ ತೆಗೆದುಕೊಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ನಿವಾಸಿಗಳಿಗೆ ಗುಡ್‌ನ್ಯೂಸ್‌: ನ.1ರಿಂದಲೇ ಬಿಖಾತಾದಿಂದ ಎ ಖಾತಾ ಪರಿವರ್ತನೆ ಅಭಿಯಾನ

ಜಾತಿವಾರು ಸಮೀಕ್ಷೆಗೆ ಮಾಹಿತಿ ನೀಡಲು ನಾರಾಯಣಮೂರ್ತಿ ಕುಟುಂಬ ಹಿಂದೇಟು: ಕಾರಣ ಏನು ಗೊತ್ತಾ

ಕೊಪ್ಪಳದಲ್ಲಿ ರೈತರಿಗೆ ಸಲಹೆ ನೀಡಿದ ಸಚಿವೆ ನಿರ್ಮಲಾ ಸೀತಾರಾಮನ್, ಹೇಳಿದ್ದೇನು ಗೊತ್ತಾ

ಕೇದಾರನಾಥ ಯಾತ್ರಿಗಳಿಗೆ ಗುಡ್‌ನ್ಯೂಸ್‌ ಕೊಟ್ಟ ಅದಾನಿ ಸಮೂಹ, ಇಲ್ಲಿದೆ ಮಾಹಿತಿ

ನನ್ನನ್ನು ಸರ್ ಎಂದು ಕರೆಯಬೇಡಿ, ಬಿಹಾರದ ಮಹಿಳಾ ಕಾರ್ಯಕರ್ತೆಗೆ ಮೋದಿ ಹೀಗೇ ಹೇಳೋದಾ

ಮುಂದಿನ ಸುದ್ದಿ
Show comments