Webdunia - Bharat's app for daily news and videos

Install App

ಇಂದಿನಿಂದ ಶಬರಿಮಲೆ ದೇಗುಲಕ್ಕೆ ಭಕ್ತರಿಗೆ ಪ್ರವೇಶಾವಕಾಶ

Webdunia
ಭಾನುವಾರ, 17 ಅಕ್ಟೋಬರ್ 2021 (15:22 IST)
ತಿರುವನಂತಪುರಂ : ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಇಂದು ಮುಂಜಾನೆಯಿಂದ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ.

ದೇವಸ್ಥಾನದ ಬಾಗಿಲು ನಿನ್ನೆಯೇ ತುಲಾ ಮಾಸದ ಪೂಜೆ ನಿಮಿತ್ತ ತೆರೆಯಲಾಗಿದೆ. ಆದರೆ ನಿನ್ನೆ ಸಂಜೆ ಭಕ್ತರಿಗೆ ಪ್ರವೇಶ ಇರಲಿಲ್ಲ.ಇಂದು ಬೆಳಗ್ಗೆಯಿಂದ ಭಕ್ತರೂ ದೇಗುಲಕ್ಕೆ ಪ್ರವೇಶ ಮಾಡಬಹುದಾಗಿದೆ.  ಇಂದು ಮುಂಜಾನೆ 5 ಗಂಟೆಯಿಂದಲೇ ದೇಗುಲದ ಬಾಗಿಲು ತೆರೆದಿದ್ದು, ಅಕ್ಟೋಬರ್ 21ರವರೆಗೂ ಭಕ್ತರಿಗೆ ಪ್ರವೇಶಾವಕಾಶ ಇದ್ದು, ಪೂಜೆ ಸಲ್ಲಿಸಬಹುದಾಗಿದೆ. 
ಇಂದಿನಿಂದ ಬಾಗಿಲು ತೆರೆದಿದ್ದರೂ ಭಕ್ತರು ಆನ್ಲೈನ್ ಮೂಲಕ ಬುಕ್ ಮಾಡಿಕೊಂಡೇ ಬರಬೇಕಾಗಿದೆ. https://www.onlinetdb.com/tdbweb/dist/ ಮೂಲಕ ಲಾಗಿನ್ ಆಗಿ ಹೆಸರು ನೋಂದಾಯಿಸಿಕೊಳ್ಳಬಹುದು. ಹಾಗೇ ಬರುವವರು ಇತ್ತೀಚೆಗೆ ಆರ್​ಟಿ-ಪಿಸಿಆರ್ ಟೆಸ್ಟ್ ಮಾಡಿಸಿ ನೆಗೆಟಿವ್ ಬಂದ ರಿಪೋರ್ಟ್ ಮತ್ತು ಕೊವಿಡ್ 19 ಲಸಿಕೆ ಎರಡೂ ಡೋಸ್ ಆಗಿರುವ ಸರ್ಟಿಫಿಕೇಟ್ ತರುವುದು ಕಡ್ಡಾಯ ದೇಗುಲ ಪ್ರವೇಶಕ್ಕೂ ಮೊದಲು ಇವೆರಡೂ ಪ್ರಮಾಣಪತ್ರವನ್ನು ಸಲ್ಲಿಸಬೇಕಾಗುತ್ತದೆ.  ಹಾಗೇ, ಕೊವಿಡ್ 19 ಕಾರಣದಿಂದ ದೇಗುಲದಲ್ಲಿ ಒಂದು ದಿನಕ್ಕೆ 15000 ಭಕ್ತರಿಗೆ ಮಾತ್ರ ಅವಕಾಶ ಇದೆ.  ಶಬರಿಮಲೆ ದೇಗುಲ ಅತ್ಯಂತ ಪ್ರಸಿದ್ಧ ಪಡೆದ ದೇವಾಲಯ. ಆದರೆ ಇದು ಉಳಿದ ದೇವಸ್ಥಾನಗಳಂತೆ ಪ್ರತಿದಿನ ಬಾಗಿಲು ತೆರೆಯುವುದಿಲ್ಲ. ತಿಂಗಳಲ್ಲಿ 5 ದಿನಗಳು ಮಾತ್ರ ಬಾಗಿಲು ತೆರೆಯಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy Stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಾವನ್ನಪ್ಪಿದವರ ಸಂಖ್ಯೆ ಬಗ್ಗೆ ಸಿಎಂ ನಿಖರ ಮಾಹಿತಿ

Chinnaswamy Stampede: ಸ್ಥಳದಲ್ಲಿದ್ದವರು ಪ್ರಾಣ ಉಳಿಸಲು ಯತ್ನಿಸಿದರು: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ನಿಜ ಕಾರಣವೇನು video

Animal Attack: MPಯ ಬರ್ವಾನಿಯಲ್ಲಿ 6ಮಂದಿ ಸಾವು, ಹಲವರಿಗೆ ಗಾಯ

Pakistan: ಗನ್‌ ಜತೆ 200 ಕೈದಿಗಳು ಪರಾರಿ, ಜೈಲಿನಲ್ಲೇ ಹೀಗಾದ್ರೇ ಇನ್ನೇನ್ ಕತೆ

RCB Victory Parade: ಕಾಲ್ತುಳಿತದಲ್ಲಿ ಮೂವರು ಫ್ಯಾನ್ಸ್ ಸಾವು, ಹಲವು ಮಂದಿಗೆ ಗಾಯ

ಮುಂದಿನ ಸುದ್ದಿ
Show comments