Webdunia - Bharat's app for daily news and videos

Install App

ಜಿ20 ಸಭೆ : ಭದ್ರತೆಗಾಗಿ ಮೆಟ್ರೋ ನಿಲ್ದಾಣಗಳು ಬಂದ್

Webdunia
ಮಂಗಳವಾರ, 5 ಸೆಪ್ಟಂಬರ್ 2023 (08:10 IST)
ನವದೆಹಲಿ : ಸೆಪ್ಟೆಂಬರ್ 9 ಮತ್ತು 10 ರಂದು ಪ್ರಗತಿ ಮೈದಾನದಲ್ಲಿ ಹೊಸದಾಗಿ ನಿರ್ಮಿಸಲಾಗಿರುವ ಭಾರತ ಮಂಟಪದಲ್ಲಿ 18ನೇ ಜಿ20 ಶೃಂಗಸಭೆ ನಡೆಯಲಿದೆ. 25 ಕ್ಕೂ ಹೆಚ್ಚು ರಾಜ್ಯ ಮತ್ತು ಜಾಗತಿಕ ಸಂಸ್ಥೆಗಳ ಮುಖ್ಯಸ್ಥರು ಈ ಸಭೆಯಲ್ಲಿ ಭಾಗಿಯಾಗುತ್ತಿದ್ದು, ಭದ್ರತೆಯನ್ನು ಹೆಚ್ಚಿಸಲಾಗುತ್ತಿದೆ.
 
ಗಣ್ಯರ ಭದ್ರತಾ ದೃಷ್ಟಿಯಿಂದ ಕಾರ್ಯಕ್ರಮ ನಡೆಯುವ ಸ್ಥಳ ಮತ್ತು ಕೆಲವು ಮೆಟ್ರೋ ನಿಲ್ದಾಣಗಳನ್ನು ಎರಡು ದಿನಗಳ ಕಾಲ ಬಂದ್ ಮಾಡಲು ನಿರ್ಧರಿಸಿದ್ದಾರೆ. ಪೊಲೀಸರು ಹೊರಡಿಸಿರುವ ಆದೇಶದ ಪ್ರಕಾರ, ಮೋತಿ ಬಾಗ್, ಭಿಕಾಜಿ ಕಾಮಾ ಪ್ಲೇಸ್, ಮುನಿರ್ಕಾ, ಆರ್ಕೆ ಪುರಂ, ಐಐಟಿ ಮತ್ತು ಸದರ್ ಬಜಾರ್ ಕಂಟೇನ್ಮೆಂಟ್ ಮೆಟ್ರೋ ನಿಲ್ದಾಣಗಳಲ್ಲಿ ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ. ಪ್ರಯಾಣಿಕರು ಈ ಮೆಟ್ರೋ ನಿಲ್ದಾಣಗಳಿಗೆ ಪ್ರವೇಶಿಸಲು ಅಥವಾ ಹೊರಬರಲು ಸಾಧ್ಯವಿಲ್ಲ. 

ಧೌಲಾ ಕುವಾ, ಖಾನ್ ಮಾರ್ಕೆಟ್, ಜನಪಥ್, ಸುಪ್ರೀಂ ಕೋರ್ಟ್ ಮತ್ತು ಭಿಕಾಜಿ ಕಾಮಾ ಪ್ಲೇಸ್ ಮೆಟ್ರೋ ನಿಲ್ದಾಣಗಳನ್ನು ಸೂಕ್ಷ್ಮ ಸ್ಥಳಗಳ ಪಟ್ಟಿಯಲ್ಲಿ ಪೊಲೀಸರು ಇರಿಸಿದ್ದಾರೆ. ಇದರೊಂದಿಗೆ ಸುಪ್ರಿಂಕೋರ್ಟ್ ಮೆಟ್ರೋ ಸ್ಟೇಷನ್ ಸಂಪೂರ್ಣವಾಗಿ ಮುಚ್ಚಲ್ಪಡುತ್ತದೆ. ನಿಗದಿತ ಗೇಟ್ಗಳನ್ನು ಹೊರತುಪಡಿಸಿ, ದೆಹಲಿ ಮೆಟ್ರೋ ಎಂದಿನಂತೆ ಕಾರ್ಯನಿರ್ವಹಿಸುತ್ತದೆ.

ಸೆ.7ರ ರಾತ್ರಿಯಿಂದ ಸೆ.11ರ ಸಂಜೆವರೆಗೆ ದೆಹಲಿ ವಿಮಾನ ನಿಲ್ದಾಣದ ಕಡೆಗೆ ಹೋಗುವ ಪ್ರಯಾಣಿಕರು ಮೆಟ್ರೊ ಬಳಸುವಂತೆ ಸೂಚಿಸಲಾಗಿದೆ.  ಕಾಶ್ಮೀರ್ ಗೇಟ್, ಚಾಂದಿನಿ ಚೌಕ್, ಚಾವ್ರಿ ಬಜಾರ್, ನವದೆಹಲಿ, ರಾಜೀವ್ ಚೌಕ್, ಪಟೇಲ್ ಚೌಕ್, ಸೆಂಟ್ರಲ್ ಸೆಕ್ರೆಟರಿಯೇಟ್, ಉದ್ಯೋಗ್ ಭವನ, ಲೋಕ ಕಲ್ಯಾಣ ಮಾರ್ಗ ಮತ್ತು ಸುಪ್ರೀಂ ಕೋರ್ಟ್ ಮೆಟ್ರೋ ನಿಲ್ದಾಣ ಸೇರಿ 36 ನಿಲ್ದಾಣಗಳಲ್ಲಿ ಟೂರಿಸ್ಟ್ ಕಾರ್ಡ್ಗಳನ್ನು ವಿತರಿಸಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mallikarjun Kharge: ಐಟಿ, ಇಡಿ ಬಿಟ್ಟು ಕಾಂಗ್ರೆಸ್ ಸರ್ಕಾರ ಬೀಳಿಸ್ತಾರೆ ಹುಷಾರ್: ಎಚ್ಚರಿಕೆ ಕೊಟ್ಟ ಖರ್ಗೆ

National Herald case ನಲ್ಲಿ ಸುಮ್ ಸುಮ್ನೇ ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರಿಗೆ ತೊಂದರೆ ಕೊಡ್ತಿದೆ ಕೇಂದ್ರ: ಮಲ್ಲಿಕಾರ್ಜುನ ಖರ್ಗೆ

Waqf Bill:ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರಿರುವಂತೆ ಹಿಂದೂ ಟ್ರಸ್ಟ್ ಗಳಲ್ಲಿ ಮುಸ್ಲಿಮರಿಗೆ ಅವಕಾಶ ಕೊಡ್ತೀರಾ: ಸುಪ್ರೀಂಕೋರ್ಟ್

Bengaluralli ಏನಾಗುತ್ತಿದೆ, ಮಹಿಳೆಗೆ ಮರ್ಮಾಂಗ ತೋರಿಸಿ ಯುವಕನಿಂದ ಅಸಭ್ಯ ವರ್ತನೆ

ಗಣತಿ ಸುನಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಕೊಚ್ಚಿ ಹೋಗುತ್ತಾರೆ: ಕುಮಾರಸ್ವಾಮಿ

ಮುಂದಿನ ಸುದ್ದಿ
Show comments