Webdunia - Bharat's app for daily news and videos

Install App

ಗಣೇಶ ಚತುರ್ಥಿ ಹಬ್ಬ : ಖಾಸಗಿ ಬಸ್ಗಳ ಟಿಕೆಟ್ ದರದಲ್ಲಿ ಭಾರೀ ಹೆಚ್ಚಳ

Webdunia
ಶನಿವಾರ, 16 ಸೆಪ್ಟಂಬರ್ 2023 (08:42 IST)
ಬೆಂಗಳೂರು : ಗಣೇಶ ಚತುರ್ಥಿ ಹಬ್ಬವನ್ನು ವಿಜ್ರಂಭಣೆಯಿಂದ ಆರಚಿಸಲು ಇಡೀ ದೇಶವೇ ಸಜ್ಜಾಗುತ್ತಿದೆ. ಈ ನಡುವೆ ಕರ್ನಾಟಕದಲ್ಲಿ ಖಾಸಗಿ ಬಸ್ ಮಾಲೀಕರು ಟಿಕೆಟ್ ದರಗಳಲ್ಲಿ ಭಾರೀ ಹೆಚ್ಚಳ ಮಾಡಿದ್ದಾರೆ.
 
ಬೆಂಗಳೂರಿನಿಂದ ಬಳ್ಳಾರಿ, ಶಿವಮೊಗ್ಗ, ಬೆಳಗಾವಿ, ವಿಜಯಪುರ ಸೇರಿದಂತೆ ರಾಜ್ಯದ ಪ್ರಮುಖ ನಗರಗಳಿಗೆ ತೆರಳುವ ಬಸ್ಗಳ ದರ ಹೆಚ್ಚಿಸಲಾಗಿದೆ. ಪ್ರತಿ ಬಾರಿ ಹಬ್ಬ ಹರಿದಿನಗಳಲ್ಲಿ ಖಾಸಗಿ ಬಸ್ಗಳು ಪ್ರಯಾಣಿಕರಿಗೆ ದುಪಟ್ಟು ಹಣ ವಸೂಲಿ ಮಾಡುತ್ತವೆ. ಹೀಗಾಗಿ ದುಪ್ಪಟ್ಟು ಹಣ ಪಡೆಯದಂತೆ ಟಿಕೆಟ್ ಬುಕ್ಕಿಂಗ್ ಕಂಪನಿಗಳಿಗೆ ಸಾರಿಗೆ ಇಲಾಖೆ ಆಯುಕ್ತರು ಎಚ್ಚರಿಕೆ ನೀಡಿದ್ದರು.

ಗಣೇಶ ಹಬ್ಬ ಸಮೀಪಿಸುತ್ತಿದ್ದಂತೆ ಸಾಮಾನ್ಯ ದಿನಗಳಲ್ಲಿ 500-700 ರೂಪಾಯಿ ಇದ್ದ ಟಿಕೆಟ್ ದರವನ್ನು 1500- 2500 ರೂಪಾಯಿಗೆ ಹೆಚ್ಚಳ ಮಾಡಿದೆ. ಗಣೇಶ ಹಬ್ಬದ ಹಿಂದಿನ ದಿನ ಊರಿಗೆ ಹೊಗ್ಬೇಕಂದರೆ ಎರಡು-ಮೂರು ಪಟ್ಟು ಹೆಚ್ಚು ಹಣ ಕೊಟ್ಟು ತೆರಳಬೇಕು.

ಖಾಸಗಿ ಬಸ್ ದರ ಹೆಚ್ಚಳ ಏಕೆ?
•             ಸೆಪ್ಟೆಂಬರ್ 18-19 ಗಣೇಶ ಹಬ್ಬ
•             ಸೆಪ್ಟೆಂಬರ್ 17 ಭಾನುವಾರ
•             ಸೆಪ್ಟೆಂಬರ್ 16 ರಂದು ಕೆಲಸ ಮಾಡಿ ಊರಿಗೆ ಹೋಗಲಿರುವ ಸರಕಾರಿ, ಖಾಸಗಿ ಕಂಪನಿ ನೌಕರರು
ಈ ಕಾರಣಕ್ಕೆ ಶನಿವಾರದಿಂದಲ್ಲೇ ಜನ ತಮ್ಮ ತಮ್ಮ ಊರಿಗೆ ತೆರಳಲು ಸಿದ್ಧತೆ ನಡೆಸುತ್ತಿದ್ದಾರೆ. ಇದನ್ನೇ ನೆಪ ಮಾಡಿಕೊಂಡು ಖಾಸಗಿ ಬಸ್ ಟಿಕೆಟ್ ದರಗಳನ್ನು ದುಪ್ಪಟ್ಟು ಹೆಚ್ಚಳ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments