Select Your Language

Notifications

webdunia
webdunia
webdunia
webdunia

ಶುಂಠಿಗೆ ಬಂತು ಬಂಗಾರದ ಬೆಲೆ

ಶುಂಠಿಗೆ ಬಂತು ಬಂಗಾರದ ಬೆಲೆ
ಚಿಕ್ಕಮಗಳೂರು , ಶುಕ್ರವಾರ, 14 ಜುಲೈ 2023 (12:50 IST)
ಚಿಕ್ಕಮಗಳೂರು : ಈ ಬಾರಿ ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ದಿನಸಿ ಸೇರಿದಂತೆ ಕೆಲ ತರಕಾರಿ ದರ ಏರಿಕೆಯಾಗಿದೆ.
 
ಅದರಲ್ಲೂ ಮುಖ್ಯವಾಗಿ ಟೊಮೆಟೊ ದರ ಗಗನಕ್ಕೇರಿದೆ. ಇದರ ಮಧ್ಯೆ ಇತಿಹಾಸದಲ್ಲೇ ಮೊದಲ ಬಾರಿಗೆ ಶುಂಠಿಗೆ ಬಂಗಾರದ ಬೆಲೆ ಬಂದಿದೆ. ಹೌದು.. 100 ಕೆ.ಜಿ ಶುಂಠಿಗೆ 18 ರಿಂದ 20 ಸಾವಿರ ರೂ.ಗೆ ಏರಿಕೆಯಾಗಿದೆ.

ಕಳೆದ ವರ್ಷ ಇದೆ ಸಮಯದಲ್ಲಿ 100 ಕೆಜಿ ಶುಂಠಿಗೆ 900 ರೂ. ರಿಂದ 1200 ರೂಪಾಯಿ ಇತ್ತು. ಇದೀಗ ಶುಂಠಿ ಬೆಲೆ ಗಗನಕ್ಕೇರಿದ್ದು, ರೈತ ಪುಲ್ ಖುಷ್ ಆಗಿದ್ದಾನೆ. ಅಲ್ಲದೇ ಶುಂಠಿ ಬೆಳೆದ ರೈತ ಕುಬೇರನ ಮಗ ಎನ್ನುವಂತಾಗಿದೆ.

ಉತ್ತಮ ಬೆಲೆ ಸಿಗದೆ ಸಂಕಷ್ಟಕ್ಕೆ ಸಿಲುಕಿದ್ದ ಶುಂಠಿ ಬೆಳೆದ ರೈತರು ಇದೀಗ ಜಾಕ್ ಪಾಟ್ ಹೊಡೆದಿದ್ದಾರೆ. ಅದರಲ್ಲೂ ಹಳೆಯ ಶುಂಠಿಗೆ ಬೇಡಿಕೆ ಹೆಚ್ಚಾಗಿದೆ. ಹಳೆ ಶುಂಠಿಗೆ 18ರಿಂದ 20 ಸಾವಿರ ರೂ. ಇದ್ದು, ಈ ವರ್ಷ ಬೆಳೆದಿರುವ ಶುಂಠಿಗೆ 10 ರಿಂದ 12 ಸಾವಿರ ರೂ.ಇದೆ.

ಇದರಿಂದ ಕಳೆದ ವರ್ಷದ ಶುಂಠಿಯನ್ನ ಹೊಲದಲ್ಲಿ ಉಳಿಸಿಕೊಂಡ ರೈತರಿಗೆ ಬಂಪರ್ ಬೆಲೆ ಸಿಗುತ್ತಿದೆ. ದೆಹಲಿ ಮತ್ತು ಉತ್ತರ ಭಾರತದಲ್ಲಿ ಶುಂಠಿಗೆ ಬೇಡಿಕೆ ಹೆಚ್ಚಾಗಿದ್ದು, 2011 ರಿಂದ 2023 ರಲ್ಲಿ ಇದೆ ಮೊದಲಿ ಬಾರಿಗೆ ಶುಂಠಿ ಬೆಲೆ 20 ಸಾವಿರ ರೂ. ಗಡಿ ತಲುಪಿದೆ. ಹೀಗಾಗಿ ಒಂದು ಎಕರೆ ಶುಂಠಿ ಬೆಳೆದ ರೈತ 25 ಲಕ್ಷ ರೂ. ಲಾಭದ ನಿರೀಕ್ಷೆಯಲ್ಲಿದ್ದಾನೆ.

Share this Story:

Follow Webdunia kannada

ಮುಂದಿನ ಸುದ್ದಿ

ದೇಶವೇ ಎದುರು ನೋಡುತ್ತಿರೋ ಚಂದ್ರಯಾನ-3 ಯಾರು ಕೊಡುಗೆ ಗೊತ್ತ?