Webdunia - Bharat's app for daily news and videos

Install App

ಶುಂಠಿಗೆ ಬಂತು ಬಂಗಾರದ ಬೆಲೆ

Webdunia
ಶುಕ್ರವಾರ, 14 ಜುಲೈ 2023 (12:50 IST)
ಚಿಕ್ಕಮಗಳೂರು : ಈ ಬಾರಿ ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ದಿನಸಿ ಸೇರಿದಂತೆ ಕೆಲ ತರಕಾರಿ ದರ ಏರಿಕೆಯಾಗಿದೆ.
 
ಅದರಲ್ಲೂ ಮುಖ್ಯವಾಗಿ ಟೊಮೆಟೊ ದರ ಗಗನಕ್ಕೇರಿದೆ. ಇದರ ಮಧ್ಯೆ ಇತಿಹಾಸದಲ್ಲೇ ಮೊದಲ ಬಾರಿಗೆ ಶುಂಠಿಗೆ ಬಂಗಾರದ ಬೆಲೆ ಬಂದಿದೆ. ಹೌದು.. 100 ಕೆ.ಜಿ ಶುಂಠಿಗೆ 18 ರಿಂದ 20 ಸಾವಿರ ರೂ.ಗೆ ಏರಿಕೆಯಾಗಿದೆ.

ಕಳೆದ ವರ್ಷ ಇದೆ ಸಮಯದಲ್ಲಿ 100 ಕೆಜಿ ಶುಂಠಿಗೆ 900 ರೂ. ರಿಂದ 1200 ರೂಪಾಯಿ ಇತ್ತು. ಇದೀಗ ಶುಂಠಿ ಬೆಲೆ ಗಗನಕ್ಕೇರಿದ್ದು, ರೈತ ಪುಲ್ ಖುಷ್ ಆಗಿದ್ದಾನೆ. ಅಲ್ಲದೇ ಶುಂಠಿ ಬೆಳೆದ ರೈತ ಕುಬೇರನ ಮಗ ಎನ್ನುವಂತಾಗಿದೆ.

ಉತ್ತಮ ಬೆಲೆ ಸಿಗದೆ ಸಂಕಷ್ಟಕ್ಕೆ ಸಿಲುಕಿದ್ದ ಶುಂಠಿ ಬೆಳೆದ ರೈತರು ಇದೀಗ ಜಾಕ್ ಪಾಟ್ ಹೊಡೆದಿದ್ದಾರೆ. ಅದರಲ್ಲೂ ಹಳೆಯ ಶುಂಠಿಗೆ ಬೇಡಿಕೆ ಹೆಚ್ಚಾಗಿದೆ. ಹಳೆ ಶುಂಠಿಗೆ 18ರಿಂದ 20 ಸಾವಿರ ರೂ. ಇದ್ದು, ಈ ವರ್ಷ ಬೆಳೆದಿರುವ ಶುಂಠಿಗೆ 10 ರಿಂದ 12 ಸಾವಿರ ರೂ.ಇದೆ.

ಇದರಿಂದ ಕಳೆದ ವರ್ಷದ ಶುಂಠಿಯನ್ನ ಹೊಲದಲ್ಲಿ ಉಳಿಸಿಕೊಂಡ ರೈತರಿಗೆ ಬಂಪರ್ ಬೆಲೆ ಸಿಗುತ್ತಿದೆ. ದೆಹಲಿ ಮತ್ತು ಉತ್ತರ ಭಾರತದಲ್ಲಿ ಶುಂಠಿಗೆ ಬೇಡಿಕೆ ಹೆಚ್ಚಾಗಿದ್ದು, 2011 ರಿಂದ 2023 ರಲ್ಲಿ ಇದೆ ಮೊದಲಿ ಬಾರಿಗೆ ಶುಂಠಿ ಬೆಲೆ 20 ಸಾವಿರ ರೂ. ಗಡಿ ತಲುಪಿದೆ. ಹೀಗಾಗಿ ಒಂದು ಎಕರೆ ಶುಂಠಿ ಬೆಳೆದ ರೈತ 25 ಲಕ್ಷ ರೂ. ಲಾಭದ ನಿರೀಕ್ಷೆಯಲ್ಲಿದ್ದಾನೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

79ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದಲ್ಲಿರುವ ದೇಶಕ್ಕೆ ಬಾರೀ ಭದ್ರತೆ

ಮಹಾರಾಷ್ಟ್ರ ಭೀಕರ ಅಪಘಾತ: ದೇವಸ್ಥಾನಕ್ಕೆ ಹೊರಟು ಮಸಣ ಸೇರಿದ 7ಮಂದಿ

ಎಐ ತಂತ್ರವಲ್ಲ, ಮೆಟ್ರೋ ಹಳದಿ ಮಾರ್ಗದಲ್ಲೂ ಕೇಳಿಬರುತ್ತಿದೆ ಅಪರ್ಣಾ ಧ್ವನಿ, ಹೇಗೆ ಗೊತ್ತಾ

ಕಾಂಗ್ರೆಸ್‌ನಲ್ಲಿ ಸತ್ಯವಂತರಿಗೆ ಕಾಲವಲ್ಲ: ಶೋಭಾ ಕರಂದ್ಲಾಜೆ

ಕೆಎನ್‌ ರಾಜಣ್ಣ ರಾಜೀನಾಮೆ: ಸಂಚಲನ ಸೃಷ್ಟಿಸುತ್ತಿದೆ ಡಿಕೆಶಿ ಆಪ್ತನ ಹೇಳಿಕೆ

ಮುಂದಿನ ಸುದ್ದಿ
Show comments