Select Your Language

Notifications

webdunia
webdunia
webdunia
webdunia

‘150 ಕ್ಷೇತ್ರಗಳಲ್ಲಿ ನಾನು ಹೇಳಿದವರಿಗೆ ಟಿಕೆಟ್ ಕೊಡಿ’; ಹೈಕಮಾಂಡ್ ಬಳಿ ಸಿಎಂ ಸಿದ್ದರಾಮಯ್ಯ ಮನವಿ

‘150 ಕ್ಷೇತ್ರಗಳಲ್ಲಿ ನಾನು ಹೇಳಿದವರಿಗೆ ಟಿಕೆಟ್ ಕೊಡಿ’; ಹೈಕಮಾಂಡ್ ಬಳಿ ಸಿಎಂ ಸಿದ್ದರಾಮಯ್ಯ ಮನವಿ
ಬೆಂಗಳೂರು , ಗುರುವಾರ, 12 ಏಪ್ರಿಲ್ 2018 (06:21 IST)
ಬೆಂಗಳೂರು : ‘150 ಕ್ಷೇತ್ರಗಳಲ್ಲಿ ನಾನು ಹೇಳಿದವರಿಗೆ ಟಿಕೆಟ್ ಕೊಡಿ’ ಎಂದು ಸಿಎಂ ಸಿದ್ದರಾಮಯ್ಯ ಅವರು ಹೈಕಮಾಂಡ್ ಅವರಲ್ಲಿ ಮನವಿ ಮಾಡಿಕೊಂಡಿದ್ದು, ಇದಕ್ಕೆ ಹೈಕಮಾಂಡ್ ಕೂಡ ಒಪ್ಪಿಕೊಂಡಿರುವುದಾಗಿ ತಿಳಿದುಬಂದಿದೆ.


ಸಿಎಂ ಸಿದ್ದರಾಮಯ್ಯ ಅವರು ಹೈಕಮಾಂಡ್ ಅವರಲ್ಲಿ,’ ಮುಂದಿನ ಚುನಾವಣೆಯಲ್ಲಿ ಸ್ವಯಂಬಲದ ಮೇಲೆ ಗೆಲ್ಲುವುದು ಅನಿವಾರ್ಯವಾಗಿರುವುದರಿಂದ ಮತ್ತು ರಾಜ್ಯದಲ್ಲಿ ಯಾರು ಯಾವ ಕ್ಷೇತ್ರದಲ್ಲಿ ಗೆಲ್ಲುತ್ತಾರೆ ಎಂಬ ಕುರಿತು ತಾವು ಸರ್ವೆಗಳನ್ನು ಮಾಡಿಸಿದ್ದು, ಈ ಹಿನ್ನೆಲೆಯಲ್ಲಿ 150 ಕ್ಷೇತ್ರಗಳಲ್ಲಿ ನಾನು ಹೇಳಿದವರಿಗೆ ಟಿಕೆಟ್ ಕೊಡಿ. ಸುಮಾರು ನೂರು ಮಂದಿ ಗೆಲ್ಲುವ ಪರಿಸ್ಥಿತಿಯಲ್ಲಿದ್ದಾರೆ. ಉಳಿದಂತೆ ಶ್ರಮ ವಹಿಸಿದರೆ ಇನ್ನೂ ಮೂವತ್ತು ಮಂದಿಗೆ ಗೆಲ್ಲುವ ಅವಕಾಶವಿದೆ. ಇದರೊಂದಿಗೆ 74 ಮಂದಿಯ ಪೈಕಿ ಎಷ್ಟು ಮಂದಿ ಗೆಲ್ಲುತ್ತಾರೆ ಎಂದು ನೋಡಿಕೊಂಡಿದ್ದೇನೆ ಎಂದು ಸಿದ್ದರಾಮಯ್ಯನವರು ರಾಷ್ಟ್ರ ನಾಯಕರಿಗೆ ವಿವರಿಸಿದ್ದಾರೆ. ಆದ ಕಾರಣ ಮುಂದಿನ ಚುನಾವಣೆಯ ಸಕಲ ಉಸ್ತುವರಿಯನ್ನು ಸಿಎಂ ಸಿದ್ದರಾಮಯ್ಯ ಅವರ ಹೆಗಲ ಮೇಲೆ ಹೊರಿಸಿರುವ ಹೈಕಮಾಂಡ್, ಅವರು ಹೇಳಿದ ರೀತಿಯಲ್ಲಿ ಪಕ್ಷ ಮುನ್ನಡೆಯಬೇಕು ಎಂದು ಇತರ ನಾಯಕರಿಗೂ ಸೂಚಿಸಿದೆ ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

‘2019ರ ಭಾರತದ ಚುನಾವಣೆಗೆ ಯಾವುದೇ ತೊಂದರೆ ಇಲ್ಲ-ಮಾರ್ಕ್ ಝುಕರ್ ಬರ್ಗ್