Webdunia - Bharat's app for daily news and videos

Install App

‘150 ಕ್ಷೇತ್ರಗಳಲ್ಲಿ ನಾನು ಹೇಳಿದವರಿಗೆ ಟಿಕೆಟ್ ಕೊಡಿ’; ಹೈಕಮಾಂಡ್ ಬಳಿ ಸಿಎಂ ಸಿದ್ದರಾಮಯ್ಯ ಮನವಿ

Webdunia
ಗುರುವಾರ, 12 ಏಪ್ರಿಲ್ 2018 (06:21 IST)
ಬೆಂಗಳೂರು : ‘150 ಕ್ಷೇತ್ರಗಳಲ್ಲಿ ನಾನು ಹೇಳಿದವರಿಗೆ ಟಿಕೆಟ್ ಕೊಡಿ’ ಎಂದು ಸಿಎಂ ಸಿದ್ದರಾಮಯ್ಯ ಅವರು ಹೈಕಮಾಂಡ್ ಅವರಲ್ಲಿ ಮನವಿ ಮಾಡಿಕೊಂಡಿದ್ದು, ಇದಕ್ಕೆ ಹೈಕಮಾಂಡ್ ಕೂಡ ಒಪ್ಪಿಕೊಂಡಿರುವುದಾಗಿ ತಿಳಿದುಬಂದಿದೆ.


ಸಿಎಂ ಸಿದ್ದರಾಮಯ್ಯ ಅವರು ಹೈಕಮಾಂಡ್ ಅವರಲ್ಲಿ,’ ಮುಂದಿನ ಚುನಾವಣೆಯಲ್ಲಿ ಸ್ವಯಂಬಲದ ಮೇಲೆ ಗೆಲ್ಲುವುದು ಅನಿವಾರ್ಯವಾಗಿರುವುದರಿಂದ ಮತ್ತು ರಾಜ್ಯದಲ್ಲಿ ಯಾರು ಯಾವ ಕ್ಷೇತ್ರದಲ್ಲಿ ಗೆಲ್ಲುತ್ತಾರೆ ಎಂಬ ಕುರಿತು ತಾವು ಸರ್ವೆಗಳನ್ನು ಮಾಡಿಸಿದ್ದು, ಈ ಹಿನ್ನೆಲೆಯಲ್ಲಿ 150 ಕ್ಷೇತ್ರಗಳಲ್ಲಿ ನಾನು ಹೇಳಿದವರಿಗೆ ಟಿಕೆಟ್ ಕೊಡಿ. ಸುಮಾರು ನೂರು ಮಂದಿ ಗೆಲ್ಲುವ ಪರಿಸ್ಥಿತಿಯಲ್ಲಿದ್ದಾರೆ. ಉಳಿದಂತೆ ಶ್ರಮ ವಹಿಸಿದರೆ ಇನ್ನೂ ಮೂವತ್ತು ಮಂದಿಗೆ ಗೆಲ್ಲುವ ಅವಕಾಶವಿದೆ. ಇದರೊಂದಿಗೆ 74 ಮಂದಿಯ ಪೈಕಿ ಎಷ್ಟು ಮಂದಿ ಗೆಲ್ಲುತ್ತಾರೆ ಎಂದು ನೋಡಿಕೊಂಡಿದ್ದೇನೆ ಎಂದು ಸಿದ್ದರಾಮಯ್ಯನವರು ರಾಷ್ಟ್ರ ನಾಯಕರಿಗೆ ವಿವರಿಸಿದ್ದಾರೆ. ಆದ ಕಾರಣ ಮುಂದಿನ ಚುನಾವಣೆಯ ಸಕಲ ಉಸ್ತುವರಿಯನ್ನು ಸಿಎಂ ಸಿದ್ದರಾಮಯ್ಯ ಅವರ ಹೆಗಲ ಮೇಲೆ ಹೊರಿಸಿರುವ ಹೈಕಮಾಂಡ್, ಅವರು ಹೇಳಿದ ರೀತಿಯಲ್ಲಿ ಪಕ್ಷ ಮುನ್ನಡೆಯಬೇಕು ಎಂದು ಇತರ ನಾಯಕರಿಗೂ ಸೂಚಿಸಿದೆ ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments