Webdunia - Bharat's app for daily news and videos

Install App

'ಶಾಲಾ ಮಕ್ಕಳಿಗೆ' ಗುಡ್ ನ್ಯೂಸ್

Webdunia
ಸೋಮವಾರ, 4 ಅಕ್ಟೋಬರ್ 2021 (09:09 IST)
ಬೆಂಗಳೂರು : ರಾಜ್ಯದಲ್ಲಿ ಶಾಲಾ-ಕಾಲೇಜು ಆರಂಭಗೊಂಡಿದ್ದರೂ, ಬಿಸಿಯೂಟ ಯೋಜನೆ ಮಾತ್ರ ಪುನರಾರಂಭಗೊಂಡಿಲ್ಲ. ಶೇ.65ರಷ್ಟು ಮಕ್ಕಳ ಹಾಜರಾತಿಯೊಂದಿಗೆ 25 ರಿಂದ 30 ಲಕ್ಷ ಮಕ್ಕಳು ಶಾಲೆಗಳಿಗೆ ಹಾಜರಾಗುತ್ತಿದರೂ ಬಿಸಿಯೂಟದ ಇಲ್ಲದ ಕಾರಣ ಎಲ್ಲಾ ಮಕ್ಕಳು ಶಾಲೆಗೆ ಹಾಜರಾಗುತ್ತಿಲ್ಲ.
Photo Courtesy: Google

ಈ ಹಿನ್ನಲೆಯಲ್ಲಿ ದಸರಾ ರಜೆಯ ಬಳಿಕ ಶಾಲೆಗಳಲ್ಲಿ ಬಿಸಿಯೂಟ ಪುನಾರಾರಂಭಗೊಳ್ಳೋದಾಗಿ ತಿಳಿದು ಬಂದಿದೆ.
ಈ ಕುರಿತಂತೆ ಈಗಾಗಲೇ ಸಾರ್ವಜನಿಕ ಶಿಕ್ಷಣ ಇಲಾಖೆ ಎಲ್ಲಾ ಉಪ ನಿರ್ದೇಶಕರಿಗೆ ಪತ್ರ ಕೂಡ ಬರೆದಿದ್ದು, ಯಾವುದಾದರೂ ಸಲಹೆ, ಸೂಚನೆಗಳಿದ್ದರೇ ಇಂದಿನ ಒಳಗಾಗಿ ತಿಳಿಸುವಂತೆ ಕೋರಿಕೊಂಡಿದೆ.
ಅಂದಹಾಗೇ ಅಕ್ಟೋಬರ್ 10 ರಿಂದ 20ರವರೆಗೆ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆಯನ್ನು ಘೋಷಿಸಲಾಗಿದೆ. ಈ ರಜೆ ಮುಗಿದು ಶಾಲೆಗಳು ಆರಂಭವಾದ ನಂತ್ರ ಅಕ್ಟೋಬರ್ 21ರಿಂದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ 1 ರಿಂದ 10ನೇ ತರಗತಿವರೆಗಿನ ಮಕ್ಕಳಿಗೂ ಬಿಸಿಯೂಟ ಪುನರಾರಂಭಿಸುವ ಚಿಂತನೆ ನಡೆಸಿದೆ. ಈ ಮೂಲಕ ವಿದ್ಯಾರ್ಥಿಗಳಿಗೆ ಸದ್ಯದಲ್ಲೇ ಗುಡ್ ನ್ಯೂಸ್ ನೀಡಲಿದೆ.
ಇನ್ನೂ ರಾಜ್ಯದಲ್ಲಿ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಸುಮಾರು 60 ಲಕ್ಷ ಮಕ್ಕಳು ಬಿಸಿಯೂಟ ಫಲಾನುಭವಿಗಳಾಗಿದ್ದಾರೆ. ಪ್ರಸ್ತುತ ಶಾಲೆ ಆರಂಭವಾಗಿರುವಂತ 6 ರಿಂದ 10ನೇ ತರಗತಿಗಳಿಗೆ ಶೇ.55ರಿಂದ 65ರಷ್ಟು ಮಕ್ಕಳು ಹಾಜರಾತಿಯೊಂದಿಗೆ 25 ರಿಂದ 30 ಲಕ್ಷ ಮಕ್ಕಳು ಶಾಲೆಗೆ ಬರುತ್ತಿದ್ದಾರೆ. ಬಿಸಿಯೂಟ ಪುನಾರಾರಂಭಿಸಿದ್ರೇ.. ಇನ್ನಷ್ಟು ಮಕ್ಕಳು ಶಾಲೆಗೆ ಹಾಜರಾಗಲಿದ್ದಾರೆ. ಹೀಗಾಗಿ ಆದಷ್ಟು ಬೇಗ ಬಿಸಿಯೂಟವನ್ನು ಪುನರಾರಂಭಿಸಬೇಕು ಎನ್ನುವಂತ ಚಿಂತೆಯನ್ನು ಸರ್ಕಾರ ನಡೆಸಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments