Webdunia - Bharat's app for daily news and videos

Install App

ಆರ್‌ವಿ ರಸ್ತೆ, ಬೊಮ್ಮಸಂದ್ರ ಪ್ರಯಾಣಿಕರಿಗೆ ಗುಡ್ ನ್ಯೂಸ್

Webdunia
ಬುಧವಾರ, 24 ಮೇ 2023 (08:47 IST)
ಆರ್ವಿ ರಸ್ತೆ-ಬೊಮ್ಮಸಂದ್ರ ನಡುವಿನ ಮಾರ್ಗವು ಅತ್ಯಧಿಕ ವಾಹನ ದಟ್ಟಣೆಯಿಂದ ಕೂಡಿದೆ. ಇದರಿಂದ ವಾಹನ ಸವಾರರು ಬಹುಪಾಲು ಸಮಯವನ್ನು ರಸ್ತೆಯಲ್ಲಿಯೇ ಕಳೆಯುವಂತಾಗಿದೆ.
 
ಈ ಮಾರ್ಗದಲ್ಲಿ ಮೆಟ್ರೋ ರೈಲು ಸಂಚಾರ ಶುರುವಾದರೆ ಸಾಕಷ್ಟು ಉದ್ಯೋಗಿಗಳಿಗೆ ಅನುಕೂಲವಾಗಲಿದೆ. ಬೊಮ್ಮಸಂದ್ರ ಕೈಗಾರಿಕಾ ಪ್ರದೇಶಕ್ಕೆ ಪ್ರಮುಖ ಸಂಪರ್ಕ ಸೇತುವೆಯಾಗಲಿದೆ.

ಆರ್ವಿ ರಸ್ತೆಯಿಂದ ಬೊಮ್ಮಸಂದ್ರವರೆಗಿನ ಮೆಟ್ರೋ ಮಾರ್ಗ ನಿರ್ಮಾಣಕ್ಕೆ 4,255 ಕೋಟಿ ರೂ. ವೆಚ್ಚವಾಗಿದೆ ಎಂದು ಅಂದಾಜಿಸಲಾಗಿದೆ. ಸದ್ಯ ಶೇ.50 ಕ್ಕೂ ಅಧಿಕ ಕಾಮಗಾರಿ ಮುಗಿದಿದ್ದು, ಉಳಿದಂತೆ ಬಾಕಿ ಇರುವ ಕಾಮಗಾರಿಯನ್ನು ಮುಂದಿನ 6 ತಿಂಗಳಲ್ಲಿ ಪೂರೈಸಿಕೊಳ್ಳಲು ಬಿಎಂಆರ್ಸಿಎಲ್ ಮುಂದಾಗಿದೆ. 

ನಿಲ್ದಾಣಗಳು:

ಆರ್ವಿ ರಸ್ತೆಯಿಂದ ಬೊಮ್ಮಸಂದ್ರವರೆಗೆ ಬರುವ ಮೆಟ್ರೋ ನಿಲ್ದಾಣಗಳೆಂದರೆ, ಆರ್ವಿ ರಸ್ತೆ, ರಾಗಿಗುಡ್ಡ, ಜಯದೇವ ಆಸ್ಪತ್ರೆ, ಬಿಟಿಎಂ ಲೇಔಟ್, ಸೆಂಟ್ರಲ್ ಸಿಲ್ಕ್ ಬೋರ್ಡ್, ಬೊಮ್ಮನಹಳ್ಳಿ, ಹೊಂಗಸಂದ್ರ, ಕೂಡ್ಲುಗೇಟ್, ಸಿಂಗಸಂದ್ರ, ಬೆರಟೇನ ಅಗ್ರಹಾರ, ಎಲೆಕ್ಟ್ರಾನಿಕ್ ಸಿಟಿ, ಇನ್ಫೋಸಿಸ್ ಫೌಂಡೇಶನ್, ಕೋನಪ್ಪನ ಅಗ್ರಹಾರ, ಹೊಸೂರು ರಸ್ತೆ, ಹೆಬ್ಬಗೋಡಿ ಮತ್ತು ಬೊಮ್ಮಸಂದ್ರ.

ಐಟಿ-ಬಿಟಿ ಕಂಪನಿಗಳಿಗೆ ಸಂಪರ್ಕ ಕಲ್ಪಿಸುವ ಮಾರ್ಗ ಇದಾಗಿದ್ದು, ನಮ್ಮ ಮೆಟ್ರೋ ಉತ್ತಮ ಆದಾಯವನ್ನೂ ತಂದುಕೊಡಲಿದೆ. ಈ ಮಾರ್ಗದಲ್ಲಿ ಸುಮಾರು 3.70 ಲಕ್ಷ ಮಂದಿ ಪ್ರಯಾಣಿಸಬಹುದೆಂದು ಅಂದಾಜಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹುಬ್ಬಳ್ಳಿ- ಧಾರವಾಡದ 65 ಪೊಲೀಸ್ ಅಧಿಕಾರಿಗಳಿಗೆ ಬೊಜ್ಜು ಕರಗಿಸುವ ಟ್ರೈನಿಂಗ್,4ರಿಂದ 11ಕೆಜಿ ಇಳಿಕೆ

ಗೋಣಿಕೊಪ್ಪಲು: ಕಾಡಾನೆ ದಾಳಿಗೆ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು, ಸೈಕಲ್‌ನಲ್ಲಿದ್ದವ ಪಾರಾಗಿದ್ದೆ ಪವಾಡ

ಹೆಚ್ಚುತ್ತಿರುವ ಹುಲಿಗಳ ಸಂತತಿ: ಮಲೆ ಮಹದೇಶ್ವರ ಬೆಟ್ಟವನ್ನು ಹುಲಿ ಸಂರಕ್ಷಿತ ಪ್ರದೇಶಕ್ಕೆ ಸರ್ಕಾರ ಚಿಂತನೆ, ಅಭಿಪ್ರಾಯ ಸಂಗ್ರಹಕ್ಕೆ ಸೂಚನೆ

ಮೋದಿ ಸರ್ಕಾರ ರೈತರ ಜೀವ ಹಿಂಡುತ್ತಿದೆ: ರಣದೀಪ್ ಸುರ್ಜೇವಾಲ

ವಿಶ್ವಮಟ್ಟದಲ್ಲಿ ದಾಖಲೆ ಪುಟ ಸೇರಿದ ದೆಹಲಿ ಇಂದಿರಾಗಾಂಧಿ ವಿಮಾನ ನಿಲ್ದಾಣ

ಮುಂದಿನ ಸುದ್ದಿ
Show comments