ಎರಡು ಡೋಸ್ ಲಸಿಕೆ ಪಡೆದವರಿಗೆ ಗುಡ್ ನ್ಯೂಸ್

Webdunia
ಸೋಮವಾರ, 6 ಡಿಸೆಂಬರ್ 2021 (12:10 IST)
ಬೆಂಗಳೂರು : ಮೊದಲ ಡೋಸ್ ಶೇ.93, ಎರಡನೇ ಡೋಸ್ ಶೇ.64 ಜನರು ಕೊರೊನಾ ಲಸಿಕೆಯನ್ನು ತೆಗೆದುಕೊಂಡಿದ್ದಾರೆ.
ಎರಡು ಡೋಸ್ ಲಸಿಕೆ ಪಡೆದವರಿಗೆ ಓಮಿಕ್ರಾನ್ ತೀವ್ರತೆ ಇರಲ್ಲ ಎಂದು ಸಚಿವ ಕೆ.ಸುಧಾಕರ್ ತಿಳಿಸಿದರು.
ಹೆಚ್ಚುತ್ತಿರುವ ಸೋಂಕಿನ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 5 ಜನರ ರಿಪೋರ್ಟ್ ಇನ್ನೂ ಬಂದಿಲ್ಲ. ರಿಪೋರ್ಟ್ ಬಂದ ಕೂಡಲೇ ಮಾಹಿತಿ ಕೊಡ್ತೀವಿ. ನಮ್ಮ ರಾಜ್ಯದಲ್ಲಿ ಓಮಿಕ್ರಾನ್ ಬಂದ ಸಂಪರ್ಕದಲ್ಲಿ ಯಾವುದೇ ಸಮಸ್ಯೆ ಇಲ್ಲ. ಸಂಪರ್ಕಿತರು ಎರಡು ಡೋಸ್ ತೆಗೆದುಕೊಂಡಿದ್ದಾರೆ ಎಂದು ಮಾಹಿತಿ ನೀಡಿದರು. 
ಎರಡು ಡೋಸ್ ಪಡೆದವರಿಗೆ ತೀವ್ರತೆ ಇರೋದಿಲ್ಲ. ಸಂಪೂರ್ಣ ರೋಗ ನಿರೋಧಕ ಬರಬೇಕಾದ್ರೆ ಎರಡು ಡೋಸ್ ಪಡೆಯಬೇಕು. ಕೇಂದ್ರದಿಂದ ಯಾವುದೇ ಮಾರ್ಗಸೂಚಿ ಬಂದಿಲ್ಲ. ಡೆಲ್ಟಾವನ್ನು ನಾವು ಎದುರಿಸಿದ್ದೇವೆ. ಓಮಿಕ್ರಾನ್ ಹರಡುವಿಕೆ ಇದೆ. ಆದ್ರೆ ತೀವ್ರತೆ ಇಲ್ಲ. ಆತಂಕ ಪಡೋ ಅಗತ್ಯ ಇಲ್ಲ. ಮುಂಜಾಗ್ರತೆ ತೆಗೆದುಕೊಳ್ಳಿ ಎಂದು ಜನರಲ್ಲಿ ಮನವಿಯನ್ನು ಮಾಡಿಕೊಂಡರು.
ನಮ್ಮಲ್ಲಿ 70 ಲಕ್ಷ ಲಸಿಕೆ ದಾಸ್ತಾನು ಇದೆ. ಆದಷ್ಟು ಬೇಗ ಜನರು ಲಸಿಕೆ ಪಡೆಯಬೇಕು ಎಂದು ತಿಳಿಸಿದ ಅವರು ಅಂತರಾಷ್ಟ್ರೀಯ ವಿಮಾನ ಸ್ಥಗಿತ ವಿಚಾರವಾಗಿ ಮಾತನಾಡಿದ್ದು, ಈ ಕುರಿತು ಕೇಂದ್ರ ಸರ್ಕಾರ ನಿರ್ಧಾರ ಮಾಡುತ್ತೆ. ಕೇಂದ್ರ ಈ ಬಗ್ಗೆ ಅಧ್ಯಯನ ಮಾಡ್ತಿದೆ. ಸಮಗ್ರ ವರದಿ ಬಂದ ಮೇಲೆ ಕೇಂದ್ರ ಕ್ರಮ ತೆಗೆದುಕೊಳ್ಳುತ್ತೆ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ನೆರೆಹೊರೆಯವರಿಗೆ ಈಗ್ಲೇ ಮೆಣಶಿನಕಾಯಿ ಇಟ್ಟಂಗೆ ಆಗಿರ್ಬೇಕು: ಪ್ರಿಯಾಂಕ್ ಖರ್ಗೆಗೆ ನಾರಾ ಲೋಕೇಶ್ ಟಾಂಗ್

ಶಾಲೆಗಳಲ್ಲಿ ಸಂಘಟನೆಗಳ ಚಟುವಟಿಕೆ ಇರಬಾರದು ಎಂದು ಹೇಳಿದ್ದೇ ಬಿಜೆಪಿಯವರು: ಪ್ರಿಯಾಂಕ್ ಖರ್ಗೆ ಬಾಂಬ್

ರಾಹುಲ್ ಗಾಂಧಿ, ಪ್ರಧಾನಿ ಮೋದಿ, ಡೊನಾಲ್ಡ್ ಟ್ರಂಪ್

ಕಾಂಗ್ರೆಸ್ ನಲ್ಲಿ ಅಧಿಕಾರಿಗಳ ಸಾವಿಗೂ ಗ್ಯಾರಂಟಿ: ಆರ್ ಅಶೋಕ್

ಪ್ರಿಯಾಂಕ್ ಖರ್ಗೆಯನ್ನು ನಿಂದಿಸುವುದು ಸಭ್ಯತೆಯಲ್ಲ, ಅವರ ಜೊತೆ ನಾವಿದ್ದೇವೆ: ಕೃಷ್ಣಭೈರೇಗೌಡ

ಮುಂದಿನ ಸುದ್ದಿ
Show comments