Webdunia - Bharat's app for daily news and videos

Install App

ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಗುಡ್‍ನ್ಯೂಸ್

Webdunia
ಶನಿವಾರ, 27 ನವೆಂಬರ್ 2021 (12:54 IST)
ಬೆಂಗಳೂರು : ಈ ಬಾರಿ ರಾಜ್ಯ ಸರ್ಕಾರ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ವೊಂದನ್ನು ನೀಡಿದೆ.
ಕೊರೊನಾ ಹಿನ್ನೆಲೆ ತರಗತಿಗಳು ತಡವಾಗಿ ಪ್ರಾರಂಭ ಆಗಿದ್ದವು. ಇದರಿಂದಾಗಿ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಪಠ್ಯವನ್ನು ಪೂರ್ಣಗೊಳಿಸಲು ಅನೇಕ ತೊಂದರೆಗಳು ಉಂಟಾಗುತ್ತಿದ್ದವು. ಈ ಹಿನ್ನೆಲೆಯಲ್ಲಿ ಈ ವರ್ಷ 20% ಪಠ್ಯ ಕಡಿತ ಮಾಡಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ.
ಈ ಬಾರಿ ಎಸ್ಎಸ್ಎಲ್ಸಿ ಪರೀಕ್ಷೆ ಮಾರ್ಚ್- ಏಪ್ರಿಲ್ ತಿಂಗಳಲ್ಲಿ ನಡೆಯಲಿದೆ. ಕಡಿಮೆ ಸಮಯದಲ್ಲಿ 100% ಪಠ್ಯ ಬೋಧನೆ ಮಾಡುವುದು ಕಷ್ಟವಾಗಿತ್ತು. ಹೀಗಾಗಿ ಪಠ್ಯ ಕಡಿತಕ್ಕೆ ಒತ್ತಡ ಕೇಳಿ ಬಂದಿತ್ತು.
ಇದನ್ನೆಲ್ಲವನ್ನು ಗಮನಿಸಿದ ಶಿಕ್ಷಣ ಇಲಾಖೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ 20% ಪಠ್ಯ ಕಡಿತಗೊಳಿಸುವ ಸಾಧ್ಯತೆಯಿದೆ. 80% ಮಾತ್ರ ಪಠ್ಯ ಬೋಧನೆಗೆ ನಿರ್ಧಾರವನ್ನು ತೆಗೆದುಕೊಂಡಿದೆ ಎಂದು ಮೂಲಗಳು ತಿಳಿಸಿವೆ. 
ಪ್ರಾರಂಭಿಕ ಹಂತದಲ್ಲಿ ಎಸ್ಎಸ್ಎಲ್ಸಿ ಪಠ್ಯ ಕಡಿತದ ಬಗ್ಗೆ ಅಷ್ಟೇ ಚಿಂತನೆ ನಡೆಸಿದ್ದು, ಬಳಿಕ ಉಳಿದ ತರಗತಿಗಳ ಪಠ್ಯ ಕಡಿತಗಳ ಬಗ್ಗೆ ಚಿಂತಿಸುವ ಸಾದ್ಯತೆಯಿದೆ ಶಿಕ್ಷಣ ಇಲಾಖೆ ತಿಳಿಸಿದೆ.ಈ ಬಗ್ಗೆ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿ, 20% ಕಡಿತಕ್ಕೆ ಚಿಂತನೆ ಮಾಡಿದ್ದೇವೆ. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಮನಸ್ಸಿನಲ್ಲಿ ಇಟ್ಟುಕೊಂಡು ಪಠ್ಯ ಕಡಿತಗೊಳಿಸಲಾಗುತ್ತದೆ.
ಪರೀಕ್ಷೆಯ ಕುರಿತು ಮಾತನಾಡಿ, ಮಾರ್ಚ್- ಏಪ್ರಿಲ್ನಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯಲಿದ್ದು, ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಈ ವರ್ಷ ಪಠ್ಯ ಕಡಿತ ಮಾಡಿದ್ದನ್ನು ಮುಂದಿನ ವರ್ಷ ಶಾಲೆ ಪ್ರಾರಂಭವಾದ ಕೂಡಲೇ ಪಠ್ಯ ಬೋಧನೆಗೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಮಾಹಿತಿ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಳ್ಳಾರಿ ಗಲಭೆ ಪ್ರಕರಣ, ಎಚ್‌ಡಿಕೆ ಆರೋಪಕ್ಕೆ ಪರಮೇಶ್ವರ್ ಪ್ರತಿಕ್ರಿಯೆ ಹೀಗಿತ್ತು

ಶಾಲಾ ಕಾಲೇಜು ಬೆನ್ನಲ್ಲೇ ಬೆಂಗಳೂರಿನ ಪಾಸ್‌ಪೋರ್ಟ್ ಕಚೇರಿಗೆ ಬಾಂಬ್‌ ಬೆದರಿಕೆ ಮೇಲ್

ದೀರ್ಘಕಾಲದ ಸಿಎಂ ಸಿದ್ದರಾಮಯ್ಯ ರಾಜ್ಯಕ್ಕೆ ನೀಡಿದ ಕೊಡುಗೆಯೇನು: ಬಿವೈ ವಿಜಯೇಂದ್ರ

ಬಳ್ಳಾರಿ ಶೂಟೌಟ್‌ನಲ್ಲಿ ಹತ್ಯೆಯಾದ ಕಾರ್ಯಕರ್ತನಿಗೆ ಪರಿಹಾರ ನೀಡಿ ಸಂಕಷ್ಟಕ್ಕೊಳಗಾದ ಜಮೀರ್, ಏನಿದು

ಗೋರಖ್‌ಪುರದಿಂದ ಮುಂಬೈಗ್ ಹೋಗುತ್ತಿದ್ದ ಕಾಶಿ ಎಕ್ಸ್‌ಪ್ರೆಸ್‌ ರೈಲಿಗೆ ಬಾಂಬ್ ಬೆದರಿಕೆ, ಮುಂದೇನಾಯ್ತು ಗೊತ್ತಾ

ಮುಂದಿನ ಸುದ್ದಿ
Show comments