Select Your Language

Notifications

webdunia
webdunia
webdunia
webdunia

ಮುಷ್ಕರ ವಾಪಸ್ ಪಡೆದ ಸರ್ಕಾರಿ ನೌಕರರು

ಮುಷ್ಕರ ವಾಪಸ್ ಪಡೆದ ಸರ್ಕಾರಿ ನೌಕರರು
ಬೆಂಗಳೂರು , ಗುರುವಾರ, 2 ಮಾರ್ಚ್ 2023 (07:34 IST)
ಬೆಂಗಳೂರು : ಸರ್ಕಾರದ ಅಧಿಕೃತ ಆದೇಶದ ಬೆನ್ನಲ್ಲೇ ಅನಿರ್ದಿಷ್ಟ ಮುಷ್ಕರವನ್ನು ವಾಪಸ್ ತೆಗೆದುಕೊಂಡಿದ್ದೇವೆ ಎಂದು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಏಪ್ರಿಲ್ 1ರಿಂದ ಶೇ.17ರಷ್ಟು ವೇತನ ಹೆಚ್ಚಿಸಿ ಎಂದು ಸರ್ಕಾರ ಆದೇಶ ನೀಡಿದೆ. ಈ ಸರ್ಕಾರದ ಆದೇಶವನ್ನು ಸಾಮೂಹಿಕವಾಗಿ ಒಪ್ಪಿಕೊಳ್ಳುತ್ತಿದ್ದೇವೆ.

ಮುಂದಿನ ದಿನಗಳಲ್ಲಿ ಇನ್ನಷ್ಟು ಭರವಸೆಗಳು ಸಿಗುತ್ತವೆ ಎಂಬ ನಿರೀಕ್ಷೆಯಲ್ಲಿದ್ದೇವೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅನಿರ್ದಿಷ್ಟ ಅವಧಿಯ ಮುಷ್ಕರವನ್ನು ವಾಪಸ್ ಪಡೆದಿದ್ದೇವೆ ಎಂದು ಮಾಹಿತಿ ನೀಡಿದರು.

Share this Story:

Follow Webdunia kannada

ಮುಂದಿನ ಸುದ್ದಿ

ನಾನು ರಾಜಕೀಯಕ್ಕೆ ಬಂದಿರುವುದೇ ಆಕಸ್ಮಿಕ : ಸುಮಲತಾ