Webdunia - Bharat's app for daily news and videos

Install App

9 ಜೀವಗಳಿಗೆ ಬೆಳಕಾದ ರಕ್ಷಿತಾ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ

Webdunia
ಶನಿವಾರ, 24 ಸೆಪ್ಟಂಬರ್ 2022 (10:59 IST)
ಚಿಕ್ಕಮಗಳೂರು : ಸಾವಿನಲ್ಲೂ ಸಾರ್ಥಕತೆ ಮೆರೆದ ಜಿಲ್ಲೆಯ ಕಡೂರು ತಾಲೂಕಿನ ಸೋಮನಹಳ್ಳಿ ತಾಂಡ್ಯಾದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ರಕ್ಷಿತ ಕುಟುಂಬಕ್ಕೆ ರಾಜ್ಯ ಸರ್ಕಾರ ಎಂಟು ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ.

ಚಿಕ್ಕಮಗಳೂರು ನಗರದ ಸರ್ಕಾರಿ ಬಾಲಿಕಾ ಪದವಿ ಪೂರ್ವ ಕಾಲೇಜಿನಲ್ಲಿ ಫಸ್ಟ್ ಪಿಯುಸಿ ಓದುತ್ತಿದ್ದ 18 ವರ್ಷದ ಯುವತಿ ರಕ್ಷಿತಾ, ಐದು ದಿನಗಳ ಹಿಂದೆ ಸರ್ಕಾರಿ ಬಸ್ನಿಂದ ಇಳಿಯುವಾಗ ಆಯಾ ತಪ್ಪಿ ಬಿದ್ದು ಮೆದುಳು ಸಂಪೂರ್ಣ ನಿಷ್ಕ್ರಿಯವಾಗಿತ್ತು.

ಕೂಡಲೇ ಆಸ್ಪತ್ರೆಗೆ ಸೇರಿಸಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಹಾಗಾಗಿ, ರಕ್ಷಿತಾ ಪೋಷಕರು ಆಕೆಯ ಸಾವಿನ ನೋವಿನಲ್ಲೂ ಆಕೆಯ ಅಂಗಾಂಗಗಳನ್ನು ದಾನ ಮಾಡಿದ್ದರು. 

ಆಕೆಯ ಒಂಬತ್ತು ಅಂಗಾಂಗಳಿಂದ 9 ಜನರ ಜೀವ ಉಳಿದಿದೆ. ಹಾಗಾಗಿ, ಸರ್ಕಾರ ಆಕೆಯ ಕುಟುಂಬಕ್ಕೆ ಪರಿಹಾರ ಎನ್ನುವುದಕ್ಕಿಂತ ಗೌರವಯುತವಾಗಿ ಎಂಟು ಲಕ್ಷ ರೂ. ಹಣವನ್ನು ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments