Select Your Language

Notifications

webdunia
webdunia
webdunia
webdunia

ದಶಕಗಳ ಬೇಡಿಕೆಗೆ ಸರ್ಕಾರ ಅಸ್ತು : ಸುಧಾಕರ್

ದಶಕಗಳ ಬೇಡಿಕೆಗೆ ಸರ್ಕಾರ ಅಸ್ತು : ಸುಧಾಕರ್
ಬೆಂಗಳೂರು , ಗುರುವಾರ, 22 ಸೆಪ್ಟಂಬರ್ 2022 (10:05 IST)
ಬೆಂಗಳೂರು : ಉತ್ತರ ಕನ್ನಡ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನೇತೃತ್ವದ ನಮ್ಮ ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲೆಯ ಜನಪ್ರತಿನಿಧಿಗಳೊಂದಿಗಿನ ಸಭೆಯಲ್ಲಿ ಪಾಲ್ಗೊಂಡ ಬಳಿಕ, ಸಚಿವರು ಸುದ್ದಿಗಾರರೊಂದಿಗೆ ಮಾತನಾಡಿ ಸಿಹಿ ಸುದ್ದಿ ನೀಡಿದರು. ಈ ಮೂಲಕ ಜಿಲ್ಲೆಯ ಜನರ ಬಹುದಿನಗಳ ಬೇಡಿಕೆಗೆ ಮನ್ನಣೆ ದೊರೆತಿದೆ.

ಉತ್ತರ ಕನ್ನಡ ಜಿಲ್ಲೆಗೆ ಉತ್ಕೃಷ್ಟವಾದ ಆರೋಗ್ಯ ಸೇವೆ ನೀಡಲು ರಾಜ್ಯ ಸರ್ಕಾರ ಬದ್ಧವಾಗಿದೆ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಎಲ್ಲಿ ನಿರ್ಮಿಸಬೇಕು, ಹೇಗೆ ನಿರ್ಮಾಣ ಮಾಡಬೇಕು ಎಂಬೆಲ್ಲ ವಿಚಾರಗಳ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಲಾಗುವುದು.

ಈ ಪ್ರಸ್ತಾವ ಆರ್ಥಿಕ ಇಲಾಖೆಯವರೆಗೆ ಹೋಗಿದೆ. ಇನ್ನು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಸಚಿವ ಸಂಪುಟದಲ್ಲಿ ಪ್ರಸ್ತಾವ ಇರಿಸಲಾಗುವುದು ಎಂದು ಮಾಹಿತಿ ನೀಡಿದರು. 

Share this Story:

Follow Webdunia kannada

ಮುಂದಿನ ಸುದ್ದಿ

ಸ್ಪೈಸ್‌ ಜೆಟ್‌ನ 80 ಪೈಲಟ್ ಮನೆಗೆ !