Webdunia - Bharat's app for daily news and videos

Install App

ದಶಕಗಳ ಬೇಡಿಕೆಗೆ ಸರ್ಕಾರ ಅಸ್ತು : ಸುಧಾಕರ್

Webdunia
ಗುರುವಾರ, 22 ಸೆಪ್ಟಂಬರ್ 2022 (10:05 IST)
ಬೆಂಗಳೂರು : ಉತ್ತರ ಕನ್ನಡ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನೇತೃತ್ವದ ನಮ್ಮ ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲೆಯ ಜನಪ್ರತಿನಿಧಿಗಳೊಂದಿಗಿನ ಸಭೆಯಲ್ಲಿ ಪಾಲ್ಗೊಂಡ ಬಳಿಕ, ಸಚಿವರು ಸುದ್ದಿಗಾರರೊಂದಿಗೆ ಮಾತನಾಡಿ ಸಿಹಿ ಸುದ್ದಿ ನೀಡಿದರು. ಈ ಮೂಲಕ ಜಿಲ್ಲೆಯ ಜನರ ಬಹುದಿನಗಳ ಬೇಡಿಕೆಗೆ ಮನ್ನಣೆ ದೊರೆತಿದೆ.

ಉತ್ತರ ಕನ್ನಡ ಜಿಲ್ಲೆಗೆ ಉತ್ಕೃಷ್ಟವಾದ ಆರೋಗ್ಯ ಸೇವೆ ನೀಡಲು ರಾಜ್ಯ ಸರ್ಕಾರ ಬದ್ಧವಾಗಿದೆ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಎಲ್ಲಿ ನಿರ್ಮಿಸಬೇಕು, ಹೇಗೆ ನಿರ್ಮಾಣ ಮಾಡಬೇಕು ಎಂಬೆಲ್ಲ ವಿಚಾರಗಳ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಲಾಗುವುದು.

ಈ ಪ್ರಸ್ತಾವ ಆರ್ಥಿಕ ಇಲಾಖೆಯವರೆಗೆ ಹೋಗಿದೆ. ಇನ್ನು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಸಚಿವ ಸಂಪುಟದಲ್ಲಿ ಪ್ರಸ್ತಾವ ಇರಿಸಲಾಗುವುದು ಎಂದು ಮಾಹಿತಿ ನೀಡಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಯೂಟ್ಯೂಬರ್‌ಗಳ ಮೇಲಿನ ಹಲ್ಲೆ ಪ್ರಕರಣದಲ್ಲಿ ಬಿಗ್‌ಟ್ವಿಸ್ಟ್‌

ಒಡಿಶಾ: 3 ಅಪ್ರಾಪ್ತರ ಮೇಲೆ ನಿರಂತರ ಅತ್ಯಾಚಾರ, ಕಾಮುಕನಿಗೆ ಕಠಿಣ ಶಿಕ್ಷೆ ವಿಧಿಸಿದ ಕೋರ್ಟ್‌

ಕ್ರಿಕೆಟಿಗ ಸಚಿನ್ ಮಗಳು ಸಾರಾಗೆ ಜಾಗತಿಕ ಮಟ್ಟದಲ್ಲಿ ಒಲಿಯಿತು ದೊಡ್ಡ ಅದೃಷ್ಟ

ನಾಯಿ ಬೊಗಳಿತೆಂದು ತೋಟಕ್ಕೆ ಹೋದ ರೈತ: ಆನೆ ದಾಳಿಯಿಂದ ಸಾವು

10 ವರ್ಷದ ಹಿಂದೆ ದೂರವಾದ ಪತ್ನಿ ಮುಗಿಸಲು ಸಾಧು ವೇಷ ಧರಿಸಿದ ಪತಿ, ಮುಂದೇ ಆಗಿದ್ದೆ ಭಯಾನಕ ಕೃತ್ಯ

ಮುಂದಿನ ಸುದ್ದಿ
Show comments