Select Your Language

Notifications

webdunia
webdunia
webdunia
webdunia

ಲಿಫ್ಟ್‌ನೊಳಗೆ ಸಿಲುಕಿಕೊಂಡ ಲೋಕೋಪಯೋಗಿ ಸಚಿವ ಎಚ್‌.ಡಿ. ರೇವಣ್ಣ

ಲಿಫ್ಟ್‌ನೊಳಗೆ ಸಿಲುಕಿಕೊಂಡ ಲೋಕೋಪಯೋಗಿ ಸಚಿವ ಎಚ್‌.ಡಿ. ರೇವಣ್ಣ
ಬೆಂಗಳೂರು , ಶುಕ್ರವಾರ, 12 ಅಕ್ಟೋಬರ್ 2018 (12:11 IST)
ಬೆಂಗಳೂರು : ಲೋಕೋಪಯೋಗಿ ಸಚಿವ ಎಚ್‌.ಡಿ. ರೇವಣ್ಣ ಹಾಗೂ ಇತರ ಶಾಸಕರು ಲಿಫ್ಟ್‌ನೊಳಗೆ ಸಿಲುಕಿಕೊಂಡ ಘಟನೆ ಹಾಸನ ಜಿಲ್ಲಾ ಪಂಚಾಯ್ತಿಯಲ್ಲಿ ಗುರುವಾರ ನಡೆದಿದೆ. 


ಸಚಿವ ಎಚ್‌.ಡಿ.ರೇವಣ್ಣ, ಶಾಸಕರಾದ ಸಿ.ಎನ್‌.ಬಾಲಕೃಷ್ಣ, ಕೆ.ಎಂ.ಶಿವಲಿಂಗೇಗೌಡ ಮತ್ತು ಕೆ.ಎಸ್‌.ಲಿಂಗೇಶ್‌, ಜಿಪಂ ಸಿಇಒ ಪುಟ್ಟಸ್ವಾಮಿ, ಹಾಸನ ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಗೋಪಾಲಯ್ಯ ಹಾಗೂ ಸಚಿವರ ಆಪ್ತ ಸಹಾಯಕ ರವಿ  ಒಟ್ಡು ಏಳು ಮಂದಿ ಗುರುವಾರ ಸಂಜೆ ಪ್ರಗತಿ ಪರಿಶೀಲನಾ ಸಭೆ ಮುಗಿದ ಲಿಫ್ಟ್‌ನಲ್ಲಿ ಕೆಳಗಿಳಿಯುತ್ತಿದ್ದಾಗ ಲಿಫ್ಟ್ ಓವರ್ ಲೋಡ್ ಆಗಿ ಅರ್ಧದಲ್ಲೆ  ನಿಂತಿದೆ.


ಇದರಿಂದ ಸಚಿವರು ಕಂಗಲಾಗಿದ್ದರು. ನಂತರ ಪೊಲೀಸ್‌ ಅಧಿಕಾರಿಗಳು ಮತ್ತು ಸಿಬ್ಬಂದಿ ಲಿಫ್ಟ್‌ ಬಾಗಿಲನ್ನು ಬಲವಂತವಾಗಿ ತೆರೆದು ಲಿಫ್ಟ್‌ನೊಳಗೆ ಸಿಲುಕಿಕೊಂಡವರನ್ನು ಹೊರಗೆ ಕರೆತಂದಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಸಚಿವ ಸ್ಥಾನಕ್ಕೆ ಮಹೇಶ್ ರಾಜೀನಾಮೆ: ರೇವಣ್ಣ ಹೇಳಿದ್ದೇನು ಗೊತ್ತಾ?