Webdunia - Bharat's app for daily news and videos

Install App

ನಾಳೆಯಿಂದ 3 ದಿನ ರಾಜ್ಯದಲ್ಲಿ ಭಾರೀ ಮಳೆ!

Webdunia
ಗುರುವಾರ, 25 ನವೆಂಬರ್ 2021 (13:06 IST)
ಬಂಗಾಳ ಕೊಲ್ಲಿಯಿಂದ ಆರಂಭಗೊಂಡಿದ್ದ ಮೇಲ್ಮೈ ಸುಳಿಗಾಳಿ ದುರ್ಬಲಗೊಂಡ ಹಿನ್ನೆಲೆ ರಾಜ್ಯದಲ್ಲಿ ಒಂದು ವಾರದಿಂದ ಸುರಿಯುತ್ತಿರುವ ಅಕಾಲಿಕ ಮಳೆಗೆ ಬ್ರೇಕ್ ಬಿದಿತ್ತು.
ಈಗಾಗಲೇ ಮಳೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಹವಾಮಾನ ಇಲಾಖೆ ಮತ್ತೊಂದು ಶಾಕ್ ನೀಡಿದ್ದು, ನವೆಂಬರ್ 26 ರಿಂದ  ರಾಜ್ಯದಲ್ಲಿ ಮತ್ತೆ ಭಾರೀ ಮಳೆಯಾಗಲಿದೆ ಎಂದು ಮಾಹಿತಿ ನೀಡಿದೆ. ಇಂದು ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಶಿವಮೊಗ್ಗ, ಹಾಸನ. ದಾವಣಗೆರೆ, ಚಿಕ್ಕಬಳ್ಳಾಪುರ, ಮೈಸೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಗಳಿವೆ. ಇನ್ನುಳಿದಂತೆ ಚಳಿ  ಸಹ ರಾಜ್ಯದಲ್ಲಿ ಆರಂಭವಾಗಲಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಚಳಿ ಮತ್ತು ಸುಳಿ ಗಾಳಿಯ ಜೊತೆ ಒಣ ಹವೆ ಇರಲಿದೆ. ಹವಾಮಾನ ಇಲಾಖೆಯ ಪ್ರಕಾರ ಬೆಂಗಳೂರು, ಬೆಂ.ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ಚಾಮರಾಜನಗರ ಮತ್ತು ತುಮಕೂರಿನಲ್ಲಿ ನ.26ರಿಂದ ಮುಂದಿನ 3 ದಿನ ಭಾರಿ ಮಳೆಯಾಗಲಿದೆ ಅಂತ ತಿಳಿಸಿದೆ.
ಚಂಡಮಾರುತದ ಕೇಂದ್ರ ಬಿಂದು ನೈಋತ್ಯ ಮತ್ತು ಪಕ್ಕದ ಆಗ್ನೇಯ ಬಂಗಾಳ ಕೊಲ್ಲಿಯಲ್ಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಇದರ ಪ್ರಭಾವದಿಂದ ಮುಂದಿನ 24 ಗಂಟೆಗಳಲ್ಲಿ ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಪ್ರದೇಶವಾಗಿ ರೂಪಾಂತರಗೊಳ್ಳುವ ಸಾಧ್ಯತೆಯಿದೆ ಸಾಧ್ಯತೆಯಿದೆ. ಇದು ಶ್ರೀಲಂಕಾ ಮತ್ತು ದಕ್ಷಿಣ ತಮಿಳುನಾಡು ಕರಾವಳಿಯ ಕಡೆಗೆ ಚಲಿಸುವ ಸಾಧ್ಯತೆಯಿದೆ” ಎಂದು ಹವಾಮಾನ ಇಲಾಖೆ ಹೇಳಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಕ್ಷಣೆ ನೀಡಬೇಕಿದ್ದ ಕೈಯಿಂದಲೇ 10ರ ಬಾಲಕಿ ಮೇಲೆ ರೇಪ್ ಆಂಡ್ ಮರ್ಡರ್‌, ಕಾನ್ಸ್‌ಟೇಬಲ್ ಅರೆಸ್ಟ್‌

ಬಟ್ಟೆ ನೆನೆಯಲು ಹಾಕಿದ್ದ ಬಕೆಟ್‌ಗೆ ಬಿದ್ದು 8 ತಿಂಗಳ ಕಂದಮ್ಮ ಸಾವು

ಪ್ರಧಾನಿ ಮೋದಿಗೆ ಬೈದಿದ್ದ ವೈರಲ್ ಹುಡುಗಿ ನಿಶೂ ಮನೆ ಖಾಲಿ ಮಾಡಿಸಿದ ಮಾಲಿಕ Video

ಜಂತರ್ ಮಂತರ್‌ನಲ್ಲಿ ಭಾಗಿಯಾದ ಪ್ರತಿಭಟನಕಾರರಿಗೆ ಬಿಗ್ ರಿಲೀಫ್

Karnataka Weather: ಭಾರೀ ಮಳೆ, ಇದೇ 31ರ ವರೆಗೆ ರಾಜ್ಯದ ಈ 15ಜಿಲ್ಲೆಗಳಲ್ಲಿ ಆರೆಂಜ್ ಆಲರ್ಟ್‌

ಮುಂದಿನ ಸುದ್ದಿ
Show comments