Webdunia - Bharat's app for daily news and videos

Install App

ಕೇರಳದಲ್ಲಿ ಭಾರಿ ಮಳೆ!

Webdunia
ಶನಿವಾರ, 13 ನವೆಂಬರ್ 2021 (09:24 IST)
ತಮಿಳುನಾಡು ಜಲಾವೃತವಾಗಿದೆ. ಮುಂದಿನ ಐದು ದಿನಗಳು ಕರ್ನಾಟಕದಲ್ಲೂ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಈ ಮಧ್ಯೆ ಕೇರಳದಲ್ಲೂ ಕೂಡ ಮಳೆಯ ಮುನ್ಸೂಚನೆ ನೀಡಲಾಗಿದ್ದು, ಇಂದು ಒಟ್ಟು 6 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ನಾಳೆ (ನವೆಂಬರ್ 14) ಐದು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಇರಲಿದೆ. ಅಂದರೆ ವಿಪರೀತ ಮಳೆಯಾಗುವ ಸೂಚನೆ ಇದಾಗಿದೆ. 
ಇಂದು ತಿರುವನಂತಪುರಂ, ಕೊಲ್ಲಂ, ಪಥನಂತಿಟ್ಟ, ಕೊಟ್ಟಾಯಂ, ಇಡುಕ್ಕಿ, ಆಲಪ್ಪುಳ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಇರಲಿದ್ದು, ನಾಳೆ ಪಥನಂತಿಟ್ಟ, ಆಲಪ್ಪುಳ, ಕೊಟ್ಟಾಯಂ, ಎರ್ನಾಕುಲಂ ಮತ್ತು ಇಡುಕ್ಕಿಯಲ್ಲಿ ಆರೆಂಜ್ ಅಲರ್ಟ್ ಮುಂದುವರಿಯಲಿದೆ.  ಇಡುಕ್ಕಿಯಲ್ಲಿ ಮಳೆ ವಿಪರೀತವಾಗಿ ಬಿದ್ದರೆ ಇಂದು ಅಥವಾ ನಾಳೆ ಚೆರುತೋನಿ ಅಣೆಕಟ್ಟಿನ ಗೇಟ್ ತೆರೆಯಲಾಗುವುದು ಎಂದು ಇಡುಕ್ಕಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ. 
ತಮಿಳುನಾಡಿನಲ್ಲಂತೂ ಧಾರಾಕಾರ ಮಳೆ ಸುರಿಯಲು ಶುರುವಾಗಿ ವಾರವೇ ಆಯಿತು. ಇಲ್ಲಿ ಮಳೆಯಿಂದ ಆದ ಅನಾಹುತಕ್ಕೆ ಇದುವರೆಗೆ 14 ಮಂದಿ ಮೃತಪಟ್ಟಿದ್ದಾರೆ. ಮೃತರ ಕುಟುಂಬಕ್ಕೆ ರಾಜ್ಯ ಸರ್ಕಾರ ತಲಾ ನಾಲ್ಕು ಲಕ್ಷ ರೂಪಾಯಿ ಪರಿಹಾರವನ್ನೂ ಘೋಷಿಸಿದೆ. ಕರ್ನಾಟಕದಲ್ಲಿ ಕೆಲವೆಡೆ ಇಬ್ಬನಿ ಸಹಿತ, ಚಳಿಯ ವಾತಾವರಣ ಇದ್ದರೂ ರಾಜಧಾನಿ ಬೆಂಗಳೂರಿನಲ್ಲಿ ಮಳೆಯಾಗುತ್ತಿದೆ. ನಿನ್ನೆ ಕರ್ನಾಟಕದಲ್ಲಿ ವಿವಿಧೆಡೆ ಚದುರಿದ ಮಳೆಯಾಗಿದೆ. ಇದು ಇನ್ನೂ 5ದಿನಗಳ ಕಾಲ ಮುಂದುವರಿಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಕ್ಷಿಣ ಕನ್ನಡದಲ್ಲಿ 20 ನಕಲಿ ವೈದ್ಯರ ವಿರುದ್ಧ ಕೇಸ್‌, ಕ್ಲಿನಿಕ್‌ಗೆ ಬೀಗ

ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಬಿಗ್ ಶಾಕ್

ಎಂಥ ಪರಿಸ್ಥಿತಿಯಲ್ಲಿ ಕೂಡ ನಮ್ಮ ತಾಳ್ಮೆಯನ್ನು ಪರೀಕ್ಷೆ ಮಾಡೋಕೆ ಹೋಗಬೇಡಿ, Video

40ವರ್ಷದಿಂದ ಕಾಂಗ್ರೆಸ್‌ಗೆ ಮತ ಹಾಕಿದವರಿಗೆ ಶಿವಕುಮಾರ್‌ ಯಾರೆಂಬುದೇ ಗೊತ್ತಿಲ್ಲ: ಬಿಜೆಪಿ ಲೇವಡಿ

ಅಂಗಡಿ ಮುಂದೆ ಚಾಕಲೇಲ್‌ಗೆಂದು ನಿಂತಿದ್ದ ಇಬ್ಬರು ಮಕ್ಕಳು: ಟ್ರ್ಯಾಕ್ಟರ್ ಚಾಲಕನ ನಿರ್ಲ್ಯಕ್ಷಕ್ಕೆ ಪ್ರಾಣವೇ ಹೋಯ್ತು

ಮುಂದಿನ ಸುದ್ದಿ
Show comments