Webdunia - Bharat's app for daily news and videos

Install App

ಮುಂದಿನ 24 ಗಂಟೆ ಭಾರೀ ಮಳೆ ಸುರಿಯಲಿದೆ !

Webdunia
ಗುರುವಾರ, 28 ಅಕ್ಟೋಬರ್ 2021 (10:21 IST)
ಬೆಂಗಳೂರು :  ದಕ್ಷಿಣ ಕರ್ನಾಟಕ, ಕರಾವಳಿ ಭಾಗದಲ್ಲಿ ಮಳೆಯಾಗುವ ಸಾಧ್ಯತೆಗಳಿವೆ. ಕಳೆದ ನಾಲ್ಕೈದು ದಿನಗಳಿಂದ ವಿಶ್ರಾಂತಿ ನೀಡಿದ್ದ, ಮಳೆರಾಯ ಇವತ್ತಿನಿಂದ ಅಬ್ಬರಿಸಲು ಶುರು ಮಾಡಲಿದ್ದಾನೆ. 
ಇಂದಿನಿಂದ ಆರಂಭವಾಗುವ ಮಳೆ ಅಕ್ಟೋಬರ್ 30ರವೆರೆಗೆ ಸುರಿಯಲಿದೆ ಎಂದು  ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇವತ್ತು ಬೆಂಗಳೂರಿನಲ್ಲಿ ಗರಿಷ್ಠ 28 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ನಷ್ಟು ತಾಪಮಾನ ಇರಲಿದೆ. ಇಂದು ರಾತ್ರಿಯೇ ಬೆಂಗಳೂರಿಗೆ ಮಳೆರಾಯ ಎಂಟ್ರಿ ಕೊಡುವ ಸಾಧ್ಯತೆಗಳಿವೆ. ಶುಕ್ರವಾರ ಮತ್ತು ಶನಿವಾರ ಬೆಂಗಳೂರಿನಲ್ಲಿ ಮಳೆ ಸಾಧ್ಯತೆ ಹೆಚ್ಚಿದೆ. ಚಳಿಗಾಲ ಆರಂಭ ದಿನಗಳಾಗಿದ್ದರಿಂದ, ಬೆಳಗಿನ ಜಾವ ಮತ್ತು ಸಂಜೆ ಶೀತ ಗಾಳಿಯ ಅನುಭವ ಆಗಲಿದೆ.
ನದಿಪಾತ್ರದ ಜನಕ್ಕೆ ಎಚ್ಚರಿಕೆ
ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದೆ. ಇಂದು ಸಹ ರಾಜ್ಯದ ಹಲವೆಡೆ ಮಳೆ ಮುಂದುವರಿಯುವ ನಿರೀಕ್ಷೆ ಇದೆ. ಭಾರಿ ಮಳೆಗೆ ರಾಜ್ಯದಲ್ಲಿ ನದಿಗಳ ನೀರಿನ ಪ್ರಮಾಣ ಹೆಚ್ಚುತ್ತಿದೆ. ಬಹುತೇಕ ಡ್ಯಾಂಗಳು ಭರ್ತಿಯಾಗಿದ್ದು, ನದಿಗಳಿಗೆ ನೀರು ಬಿಡಲಾಗುತ್ತಿದೆ. ಅಕ್ಟೋಬರ್ ಅಂತ್ಯದ ವೇಳೆಗೆ ಸುರಿಯುತ್ತಿರುವ  ಮಳೆಗೆ ರಾಜ್ಯದ ಬಹುತೇಕ ಡ್ಯಾಂಗಳು ಭರ್ತಿಯಾಗುತ್ತುದ್ದ ನದಿ ಪಾತ್ರದ ಜನರಿಗೆ ಎಚ್ಚರಿಕೆ ಸಂದೇಶ ನೀಡಲಾಗಿದೆ. ಯಾವುದೇ ಕ್ಷಣದಲ್ಲಿ  ಡ್ಯಾಂ ಗೇಟ್ ತೆರೆಯುವ ಸಾಧ್ಯತೆಗಳಿದ್ದು, ನದಿ ತೀರಕ್ಕೆ  ತೆರಳದಂತೆ ಸೂಚನೆ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಪರೇಷನ್ ಸಿಂಧೂರ್‌ನಿಂದ ಪಾಕ್‌ ಗಡಿಯಲ್ಲಿ ಪ್ರತಿ ಹೆಜ್ಜೆಯಿಡುವಾಗಲೂ ಯೋಚಿಸುವಂತೆ ಮಾಡಿದೆ: ಶಶಿ ತರೂರ್‌

Karnataka Weather: ವಾರದ ಮಳೆಗೆಯೇ ಸುಸ್ತಾದ ದಕ್ಷಿಣ ಕನ್ನಡ ಜನತೆ

Dehli Rain: ವಿಮಾನ ಹಾರಾಟಗಳಲ್ಲೂ ವ್ಯತ್ಯಯ ಸಾಧ್ಯತೆ, ಪ್ರಯಾಣಿಕರಿಗೆ ಹೊಸ ಸಂದೇಶ

Covid 19: ಕೋವಿಡ್‌ಗೆ ರಾಜ್ಯದಲ್ಲಿ ಮೊದಲ ಬಲಿ, ಹೆಚ್ಚಿದ ಆತಂಕ

ಅವರೇ ಹೇಳಿರುವಂತೆ ನಾಯಿಯೇ ನಾರಾಯಣ, ಹಾಗಾದ್ರೆ ನಾರಾಯಣಸ್ವಾಮಿಯನ್ನು ಏನೆಂದು ಕರೆಯಬೇಕು: ಪ್ರಿಯಾಂಕ್ ಖರ್ಗೆ

ಮುಂದಿನ ಸುದ್ದಿ
Show comments