ಬೆಂಗಳೂರು(ಸೆ.22) : ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಕಾರಣ ಹಾಗೂ ಮುಂಗಾರಿನ ಪ್ರಭಾವದಿಂದ ರಾಜ್ಯದಲ್ಲಿ ಕಳೆದ 2 ವಾರಗಳಿಗೂ ಹೆಚ್ಚು ಕಾಲದಿಂದ ಭಾರೀ ಮಳೆಯಾಗುತಿತ್ತು,ಆದರೆ ಕೆಲ ದಿನಗಳಿಂದ ಕೊಚ ಬಿಡುವು ನೀಡಿದ್ದ ಮಳೆ ಮತ್ತೆ ಆರಂಭವಾಗಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 24ರ ತನಕ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.