Webdunia - Bharat's app for daily news and videos

Install App

ರಾಜಸ್ಥಾನದಲ್ಲಿ ಭಾರೀ ಮಳೆ : 2 ದಿನದಲ್ಲಿ 13 ಬಲಿ!

Webdunia
ಸೋಮವಾರ, 29 ಮೇ 2023 (10:23 IST)
ಜೈಪುರ : ಕಳೆದ ಎರಡು ದಿನಗಳಲ್ಲಿ ರಾಜಸ್ಥಾನದಲ್ಲಿ ಮಳೆ ಮತ್ತು ಚಂಡಮಾರುತದ ಹೊಡೆತಕ್ಕೆ ಒಟ್ಟು 13 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಗಳು ತಿಳಿಸಿವೆ.
 
ಪೂರ್ವ ರಾಜಸ್ಥಾನದ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗಿದ್ದು, ರಾಜ್ಯದ ವಿವಿಧೆಡೆ ಗುಡುಗು ಸಹಿತ ಬಿರುಗಾಳಿ ಬೀಸಿ ಮಳೆಯಾಗಿತ್ತು. ಕಳೆದ ಎರಡು ದಿನಗಳಲ್ಲಿ 13 ಮಂದಿ ಮಳೆಗೆ ಸಾವನ್ನಪ್ಪಿದ್ದು, 10 ಮಂದಿ ಟೋಂಕ್ನಲ್ಲಿ ಸಾವನ್ನಪ್ಪಿದ್ದಾರೆ.

ಉಳಿದ ಮೂವರು ಅಲ್ವಾರ್, ಜೈಪುರ ಮತ್ತು ಬಿಕಾನೇರ್ನಲ್ಲಿ ಮೃತಪಟ್ಟಿದ್ದಾರೆ ಎಂದು ವಿಪತ್ತು ನಿರ್ವಹಣಾ ಮತ್ತು ಪರಿಹಾರ ಇಲಾಖೆ ತಿಳಿಸಿದೆ.  ಭಿಲ್ವಾರದ ಮಂಡಲ್ನಲ್ಲಿ 11 ಸೆಂ.ಮೀ ಮಳೆಯಾಗಿದ್ದು, ಹನುಮಾನ್ಗಢದ ರಾವತ್ಸರ್ನಲ್ಲಿ 6 ಸೆಂ.ಮೀ ಮಳೆ ದಾಖಲಾಗಿದೆ.

ಅಷ್ಟೇ ಅಲ್ಲದೇ ಉಳಿದ ಪ್ರದೇಶಗಳಲ್ಲಿ ಸರಾಸರಿ 3 ಸೆಂ.ಮೀ ಮಳೆಯಾಗಿದೆ. ಜೂನ್ನಿಂದ ಸೆಪ್ಟೆಂಬರ್ವರೆಗಿನ ಮುಂಗಾರು ಋತುವಿನಲ್ಲಿ ಸರಾಸರಿ 96% ಮಳೆಯಾಗುತ್ತದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments