ಉತ್ತರ ಕನ್ನಡದಲ್ಲಿ ಭಾರೀ ಮಳೆ, ಗುಡ್ಡಕುಸಿತ!

Webdunia
ಮಂಗಳವಾರ, 27 ಜೂನ್ 2023 (11:03 IST)
ಬೆಂಗಳೂರು : ರಾಜ್ಯದಲ್ಲಿ ಇದೀಗ ಮುಂಗಾರು ಚುರುಕು ಪಡೆಯುತ್ತಿದೆ. ಆದರೆ ನಿರೀಕ್ಷೆಯಷ್ಟು ಪ್ರಮಾಣದಲ್ಲಿ ಮಳೆ ಎಲ್ಲಾ ಕಡೆ ವ್ಯಾಪಿಸಿಲ್ಲ. ಇಂದು ಉತ್ತರಕನ್ನಡದಲ್ಲಿ ಭಾರೀ ಮಳೆಯಾಗಿದೆ.

ಕಾರವಾರದ ಜನವಸತಿ ಪ್ರದೇಶಕ್ಕೆ ನೀರು ನುಗ್ಗಿದೆ. ಬಿಣಗಾ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ರಸ್ತೆ ಮೇಲೆ ಬೃಹತ್ ಬಂಡೆ ಉರುಳಿದೆ. ಪರಿಣಾಮ ಏಕ ಮುಖ ಸಂಚಾರ ಬಂದ್ ಮಾಡಲಾಗಿದೆ. ಅವಘಡಕ್ಕೆ ಅವೈಜ್ಞಾನಿಕ ಕಾಮಗಾರಿ ಕಾರಣ ಎನ್ನಲಾಗ್ತಿದೆ. ಹೊನ್ನಾವರದ ಕಡ್ನೀರ್ ಬಳಿ ರಸ್ತೆಗೆ ಮರ ಬಿದ್ದು ಸಂಚಾರ ಅಸ್ತವ್ಯಸ್ತವಾಗಿದೆ.

ಉಡುಪಿ, ದಕ್ಷಿಣ ಕನ್ನಡದಲ್ಲೂ ಮಳೆಯಾಗ್ತಿದೆ. ಬೆಳಗಾವಿಯಲ್ಲೂ ಒಂದಿಷ್ಟು ಮಳೆಯಾಗಿದೆ. ಆದರೆ ಇದು ಕೃಷಿಗೆ ಸಾಕಾಗ್ತಿಲ್ಲ. ಹೀಗಾಗಿ ಜನ ಕಪ್ಪೆ ಮದುವೆ, ಕತ್ತೆ ಮದುವೆಗಳಿಗೆ ಮೊರೆ ಹೋಗ್ತಿದ್ದಾರೆ. ವಿಜಯಪುರದ ಕಲಕೇರಿಯ ಜನ ಮಳೆಗಾಗಿ ಸಮಾಧಿಗಳಿಗೆ ನೀರುಣಿಸುವ ಶಾಸ್ತ್ರ ಮಾಡಿದ್ದಾರೆ. ಒಟ್ಟಾರೆ ರಾಜ್ಯದಲ್ಲಿ ಮಳೆ ಚಿತ್ರಣ ಆಶಾದಾಯಕವಾಗಿಲ್ಲ. ಕಳೆದ 26ದಿನದಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಒಟ್ಟಾರೆ 61%ರಷ್ಟು ಮಳೆ ಕೊರತೆಯಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಟ ವಿಜಯ್ ಟಿವಿಕೆ ಪಕ್ಷಕ್ಕೆ ಎಐಎಡಿಎಂಕೆ ನಾಯಕ ಸಂಪತ್ ಸೇರ್ಪಡೆ, ಪಕ್ಷದೊಳಗೆ ಭಾರೀ ಬೆಳವಣಿಗೆ

ಹಿಂದೂ ಹೆಣ್ಣುಮಕ್ಕಳಿಗೆ ಜಾಗೃತಿ ಮೂಡಿಸುವುದು ದ್ವೇಷ ಆಗುತ್ತಾ: ಪ್ರಮೋದ್ ಮುತಾಲಿಕ್

ರೋಡ್‌ನಲ್ಲಿ ಬಿಟ್ಟು ಹೋದ ರಾಟ್ ವೀಲರ್ ನಾಯಿಗಳ ದಾಳಿಗೆ ಮಹಿಳೆ ಬಲಿ, ಆಗಿದ್ದೇನು ಗೊತ್ತಾ

ಶಬರಿಮಲೆ ಚಿನ್ನ ಕಳವು ವಿಚಾರ, ಈಗ ಮಾತನಾಡುವುದು ಸರಿಯಲ್ಲ: ಪಿಣರಾಯಿ ವಿಜಯನ್

ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ವಿಚಾರ ವದಂತಿ ಬೇಡ: ಮಧು ಬಂಗಾರಪ್ಪ

ಮುಂದಿನ ಸುದ್ದಿ
Show comments