Webdunia - Bharat's app for daily news and videos

Install App

ರಾಜ್ಯಾದ್ಯಂತ 4ನೇ ದಿನವೂ ಭಾರೀ ಮಳೆ

Webdunia
ಭಾನುವಾರ, 17 ಏಪ್ರಿಲ್ 2022 (07:41 IST)
ಬೆಂಗಳೂರು : ನಿನ್ನೆ ಮೊನ್ನೆ ಮಳೆಯ ಅವಾಂತರಗಳಿಂದ ಜನ ಇನ್ನೂ ಚೇತರಿಸಿಕೊಂಡಿಲ್ಲ.

ಬಿಬಿಎಂಪಿ ಸಂಪೂರ್ಣವಾಗಿ ಎಚ್ಚೆತ್ತಿಲ್ಲ. ಈ ಮಧ್ಯೆ, ಸತತ ನಾಲ್ಕನೇ ದಿನವೂ ಸಂಜೆ ಮಳೆಗೆ ನಗರವು ತತ್ತರಿಸಿದೆ.

ಧೋ ಎಂದು ಒಂದೇ ಸಮನೆ ಸುರಿದ ಮಳೆಯಿಂದ ನಗರದ ರಸ್ತೆಗಳೆಲ್ಲಾ ಸಂಪೂರ್ಣ ಜಲಮಯವಾಗಿ ವಾಹನ ಸವಾರರು ಪರದಾಡಿದ್ದಾರೆ.

ವಸಂತನಗರದ ರಸ್ತೆಗಳಲ್ಲಿ ಮೊಳಕಾಲುದ್ದ ನೀರು ನಿಂತು, ವಾಹನಗಳು ಕೆಟ್ಟು ನಿಂತಿವೆ. ಎಂಜಿ ರೋಡ್, ಶಾಂತಿನಗರ, ಹಲಸೂರು, ಶಿವಾಜಿನಗರ ಸೇರಿ ಹಲವೆಡೆ ಭಾರೀ ಮಳೆ ಆಗಿದ್ದು, ತಗ್ಗು ಪ್ರದೇಶ ಮನೆಗಳಿಗೆ ಇವತ್ತು ನೀರು ನುಗ್ಗಿ, ಜನ ಕಂಗಾಲಾಗಿದ್ದಾರೆ.  

ಗದ್ದೆಗಳಿಗೆಲ್ಲಾ ನೀರು ನುಗ್ಗಿ ಅಪಾರ ಬೆಳೆಹಾನಿ ಸಂಭವಿಸಿದೆ. ಹಾವೇರಿಯಲ್ಲಿ ಸಿಡಿಲು ಹೊಡೆದು ತೆಂಗಿನ ಮರಧಗಧಗಿಸಿದೆ. ಶಿವಮೊಗ್ಗ, ಗದಗ, ಹಾಸನ ಜಿಲ್ಲೆಗಳಲ್ಲಿಯೂ ಭಾರೀ ಮಳೆ ಆಗಿದೆ. ನಾಳೆಯೂ ದಕ್ಷಿಣ ಒಳನಾಡಿನ ಹಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments