Webdunia - Bharat's app for daily news and videos

Install App

ಪ್ರಾಥಮಿಕ ಶಾಲೆ ಆರಂಭದ ಬಗ್ಗೆ ಪೂರ್ಣ ಮಾಹಿತಿ ಇಲ್ಲಿದೆ

Webdunia
ಸೋಮವಾರ, 25 ಅಕ್ಟೋಬರ್ 2021 (11:23 IST)
ಬೆಂಗಳೂರು : ಇಂದಿನಿಂದ 1 ರಿಂದ 5ನೇ ತರಗತಿವರೆಗಿನ ಶಾಲೆಗಳು 20 ತಿಂಗಳು ಬಳಿಕ ಆರಂಭಗೊಳ್ಳುತ್ತಿವೆ.
ಈಗಾಗಲೇ ಕಾಲೇಜು, ಪ್ರೌಢ ಮತ್ತು ಹಿರಿಯ ಪ್ರಾಥಮಿಕ ಶಾಲೆಗಳ ಆರಂಭಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿತ್ತು. ಲಸಿಕೆ ಬಂದರೂ ಕೊರೊನಾ ಆತಂಕ ಇನ್ನು ಕಡಿಮೆ ಆಗಿಲ್ಲ. ಕೊರೊನಾ ಹಿನ್ನೆಲೆ ಸರ್ಕಾರ ಸಹ ಎಲ್ಲ ಮುಂಜಾಗ್ರತ ಕ್ರಮಗಳೊಂದಿಗೆ ಶಾಲೆ ಆರಂಭಿಸೋದಾಗಿ ಹೇಳಿದೆ. ಹಾಗಾಗಿ ಭಾನುವಾರವೇ ಶಾಲೆಗಳನ್ನು ಶುಚಿಗೊಳಿಸಲಾಗಿತ್ತು. ಬೇಗ ಮಕ್ಕಳನ್ನ ಶಾಲೆಗೆ ವಾಪಸ್ ಕರೆಸಿಕೊಳ್ಳಬೇಕು. ಆನ್ ಲೈನ್  ತರಗತಿ ನಿಲ್ಲಿಸಿ, ಬೌತಿಕ ತರಗತಿಗಳನ್ನ ಶುರು ಮಾಡಬೇಕು ಎಂಬ ಒತ್ತಾಯ ಕೇಳಿ ಬಂದಿತ್ತು. ಹೀಗಾಗಿ ಇಂದಿನಿಂದ 1 ರಿಂದ 5ನೇ ತರಗತಿವೆರೆಗೆ ಶಾಲೆ ಆರಂಭವಾಗುತ್ತಿದೆ.
ಮಧ್ಯಾಹ್ನದವರೆಗೆ ಮಾತ್ರ ಕ್ಲಾಸ್
ಆರಂಭದಲ್ಲೇ ಮಕ್ಕಳಿಗೆ ಪೂರ್ಣಾವಧಿ ತರಗತಿಗಳು ಇರುವುದಿಲ್ಲ. ಈಗಾಗಲೇ ಕೊರೋನಾ ಹಾಗೂ ಇನ್ನಿತರ ವಿಚಾರಗಳಿಂದ ಮಕ್ಕಳು ಮಾನಸಿಕವಾಗಿ ಕುಗ್ಗಿ ಹೋಗಿದ್ದಾರೆ. ಹೀಗಾಗಿ ಏಕಾಏಕಿಯಾಗಿ ಪೂರ್ಣಾವಧಿ ತರಗತಿಗಳು ಮಾಡದೆ ಮಧ್ಯಾಹ್ನದವರೆಗೆ ಮಾತ್ರ ಕ್ಲಾಸ್ ನಡೆಸಲು ಇಲಾಖೆ ಮುಂದಾಗಿದೆ. ಮುಂದಿನ ದಿನಗಳಲ್ಲಿ ಮಕ್ಕಳ ಮನಸ್ಥಿತಿ ಅರಿತುಕೊಂಡು ತಜ್ಞರ ಅಭಿಪ್ರಾಯ ಪಡೆದು ತರಗತಿ ಅವಧಿ ವಿಸ್ತರಣೆ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಾಹಿತಿ ನೀಡಿದ್ದಾರೆ. ಜೊತೆಗೆ ಇಂದಿನಿಂದ ಬಿಸಿಯೂಟ ಕಾರ್ಯಕ್ರಮಕ್ಕೂ ಶಿಕ್ಷಣ ಇಲಾಖೆ ಚಾಲನೆ ನೀಡಲಾಗಿದೆ. ಕೊರೊನಾ ಹಿನ್ನೆಲೆ ಬಿಸಿಯೂಟ ಕಾರ್ಯಕ್ರಮ ನಿಲ್ಲಿಸಲಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mallikarjun Kharge: ಐಟಿ, ಇಡಿ ಬಿಟ್ಟು ಕಾಂಗ್ರೆಸ್ ಸರ್ಕಾರ ಬೀಳಿಸ್ತಾರೆ ಹುಷಾರ್: ಎಚ್ಚರಿಕೆ ಕೊಟ್ಟ ಖರ್ಗೆ

National Herald case ನಲ್ಲಿ ಸುಮ್ ಸುಮ್ನೇ ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರಿಗೆ ತೊಂದರೆ ಕೊಡ್ತಿದೆ ಕೇಂದ್ರ: ಮಲ್ಲಿಕಾರ್ಜುನ ಖರ್ಗೆ

Waqf Bill:ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರಿರುವಂತೆ ಹಿಂದೂ ಟ್ರಸ್ಟ್ ಗಳಲ್ಲಿ ಮುಸ್ಲಿಮರಿಗೆ ಅವಕಾಶ ಕೊಡ್ತೀರಾ: ಸುಪ್ರೀಂಕೋರ್ಟ್

Bengaluralli ಏನಾಗುತ್ತಿದೆ, ಮಹಿಳೆಗೆ ಮರ್ಮಾಂಗ ತೋರಿಸಿ ಯುವಕನಿಂದ ಅಸಭ್ಯ ವರ್ತನೆ

ಗಣತಿ ಸುನಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಕೊಚ್ಚಿ ಹೋಗುತ್ತಾರೆ: ಕುಮಾರಸ್ವಾಮಿ

ಮುಂದಿನ ಸುದ್ದಿ
Show comments