Webdunia - Bharat's app for daily news and videos

Install App

ದೇವೇಗೌಡರ ಮನವಿಯನ್ನು ಒಪ್ಪುತ್ತಾ ಹೈಕಮಾಂಡ್?

Webdunia
ಮಂಗಳವಾರ, 31 ಮೇ 2022 (10:02 IST)
ಬೆಂಗಳೂರು : ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನ.

3 ಪಕ್ಷಗಳಲ್ಲಿ ಭರ್ಜರಿ ರಾಜಕೀಯ ನಡೆಯುತ್ತಿದ್ದು ಕಾಂಗ್ರೆಸ್ 2ನೇ ಅಭ್ಯರ್ಥಿ ಬೆನ್ನಲ್ಲೇ ಬಿಜೆಪಿ 3ನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. 3ನೇ ಅಭ್ಯರ್ಥಿ ಆಗಿ ಲೆಹರ್ ಸಿಂಗ್ಗೆ ಟಿಕೆಟ್ ನೀಡಲಾಗಿದೆ. ನಿರ್ಮಲಾ ಸೀತಾರಾಮನ್, ಜಗ್ಗೇಶ್ ಬಳಿಕ ಲೆಹರ್ ಸಿಂಗ್ಗೆ ಬಿಜೆಪಿಯ ರಾಜ್ಯಸಭೆ ಟಿಕೆಟ್ ಘೋಷಿಸಲಾಗಿದೆ.

ಕಾಂಗ್ರೆಸ್ 2ನೇ ಅಭ್ಯರ್ಥಿ ಮನ್ಸೂರ್ ಖಾನ್ ಅಖಾಡದಲ್ಲಿದ್ದು, ಕಳೆದ ಬಾರಿಯಂತೆ ಈ ಬಾರಿಯೂ ಜೆಡಿಎಸ್ ಶಾಸಕರ ಕ್ರಾಸ್ ಓಟಿಂಗ್ ಲೆಕ್ಕಾಚಾರದಲ್ಲಿದೆ. 2016ರಲ್ಲಿ ಜಮೀರ್ ಸೇರಿದಂತೆ ಜೆಡಿಎಸ್ನ 8 ಶಾಸಕರು ಕ್ರಾಸ್ ಓಟಿಂಗ್ ಮಾಡಿದ್ದರು. ಈ ಬಾರಿ ಗುಬ್ಬಿ ಶ್ರೀನಿವಾಸ್ ಸೇರಿದಂತೆ ಐವರು ಜೆಡಿಎಸ್ ಶಾಸಕರು ತಮ್ಮ ಅಭ್ಯರ್ಥಿಗೆ ಮತ ಹಾಕಬಹುದು ಎಂಬ ಧೈರ್ಯದಲ್ಲಿ ಕಾಂಗ್ರೆಸ್ ಇದೆ ಎನ್ನಲಾಗುತ್ತಿದೆ. 

ಜೆಡಿಎಸ್ಗೆ ಪ್ರತಿಷ್ಠೆಯ ಕಣವಾಗಿರುವ ಕಾರಣ ಕುಪೇಂದ್ರ ರೆಡ್ಡಿಗೆ ಇಂದು ನಾಮಪತ್ರ ಸಲ್ಲಿಸಲು ಸಿದ್ಧವಾಗುವಂತೆ ದೇವೇಗೌಡ ಸೂಚಿಸಿದ್ದಾರೆ. ಕುಪೇಂದ್ರ ರೆಡ್ಡಿಗೆ ಗೆಲ್ಲಲು ಬೇಕಾದ ಮತಗಳನ್ನ ಕಾಂಗ್ರೆಸ್ನಿಂದ ಪಡೆಯಲು ಅಗತ್ಯ ಮಾತುಕತೆ ನಡೆಸುವಂತೆ ದೇವೇಗೌಡರು ಸೂಚನೆ ನೀಡಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೃಷ್ಣ ಭೈರೇಗೌಡ ಬಳಿಕ ಭೈರತಿ ಸುರೇಶ್ ಸರದಿ: ದಿಡೀರ್ ಬಿಎಂಟಿಸಿ ಬಸ್ ಸ್ಟ್ಯಾಂಡ್ ನಲ್ಲಿ ಸಚಿವರು ಪ್ರತ್ಯಕ್ಷ Video

ಸಾರ್ವಜನಿಕರ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ನೀಡಲು ಸರ್ಕಾರದಿಂದ ಪ್ರಜಾಸೇವಾ ಅಭಿಯಾನ: ಕಾರ್ಯನಿರ್ವಹಣೆ ಹೇಗೆ ಗಮನಿಸಿ

H-1B ಕಟ್ಟುಪಾಡು: ಭಾರತೀಯ ಐಟಿ ಮಂದಿಗೆ ಸವಾಲೋ, ಗ್ಲೋಬಲ್ ಆಫರ್ ಪಡೆಯುವ ಬಂಗಾರದ ಅವಕಾಶವೋ

ಉತ್ತರ ಪ್ರದೇಶದಲ್ಲಿ ಖಾಸಗಿ ಬಸ್ ಏರಿದ ಯುವತಿಗೆ ಇದೆಂಥಾ ಶಾಕ್: ಬಸ್ ನಲ್ಲೇ ನಡೆಯಿತು ರೇಪ್ Video

ಸಚಿವರೆಂದರೆ ಹೀಗಿರಬೇಕು…ಬೆಳ್ಳಂ ಬೆಳಿಗ್ಗೆ ಕಸದ ಗಾಡಿ ಪಕ್ಕ ಕೃಷ್ಣ ಭೈರೇಗೌಡ ನೋಡಿ ಜನರಿಗೆ ಶಾಕ್: Video

ಮುಂದಿನ ಸುದ್ದಿ
Show comments