Daily Horoscope

ಹೈಕಮಾಂಡ್ : ಆರಗ ಖಾತೆ ಬದಲಾವಣೆ?

Webdunia
ಶನಿವಾರ, 30 ಏಪ್ರಿಲ್ 2022 (08:07 IST)
ಬೆಂಗಳೂರು : ಪಿಎಸ್ಐ ಪರೀಕ್ಷಾ ಅಕ್ರಮದ ವಿಚಾರದಲ್ಲಿ ಬೊಮ್ಮಾಯಿ ಸರ್ಕಾರದ ಧೋರಣೆಗೆ ಅದರಲ್ಲೂ ಗೃಹ ಸಚಿವ ಆರಗ ಜ್ಞಾನೇಂದ್ರ ತೋರಿದ ನಡವಳಿಕೆಗಳಿಗೆ ಬಿಜೆಪಿ ಹೈಕಮಾಂಡ್ ಗರಂ ಆಗಿದೆ ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ.

ಮರು ಪರೀಕ್ಷೆ ನಡೆಸಲು ಸಿಐಡಿ ವರದಿ ಕೊಟ್ಟರೂ ಆದೇಶ ಹೊರಡಿಸಲು ಮೀನಾಮೇಷ ಎಣಿಸಿದ ಸರ್ಕಾರವನ್ನು ಅಮಿತ್ ಶಾ ತರಾಟೆಗೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಪರಿಣಾಮ ಇಂದು ತುರ್ತು ಸುದ್ದಿಗೋಷ್ಠಿ ನಡೆಸಿದ ಗೃಹ ಸಚಿವರು, ಮರು ಪರೀಕ್ಷೆ ಆದೇಶವನ್ನು ತರಾತುರಿಯಲ್ಲಿ ಹೊರಡಿಸಿದ್ದಾರೆ.

ಜೊತೆಗೆ ದಿವ್ಯಾ ಹಾಗರಗಿ ಬಂಧನದೊಂದಿಗೆ ರಾಜ್ಯ ಸರ್ಕಾರವೂ ನಿಟ್ಟುಸಿರುಬಿಟ್ಟಿದೆ.  ಈಗೇನಾದರೂ ಮರು ಪರೀಕ್ಷೆ ಆದೇಶ ಹೊರಡಿಸದಿದ್ದರೆ ದಿವ್ಯಾ ಹಾಗರಗಿ ಬಂಧನ ಆಗದಿದ್ದರೆ ಅಮಿತ್ ಶಾ ರಾಜ್ಯ ಪ್ರವಾಸದ ವೇಳೆ, ಅವರಿಗೆ ಮುಜುಗರದ ಸನ್ನಿವೇಶ ಎದುರಾಗುತ್ತಿತ್ತು.

ಗೃಹ ಇಲಾಖೆ ನಿಭಾಯಿಸಲಾಗದೇ ಒದ್ದಾಡುತ್ತಿರುವ ಆರಗ ಜ್ಞಾನೇಂದ್ರರನ್ನು ಬದಲಿಸಲು ಹೈಕಮಾಂಡ್ ಗಂಭೀರ ಚಿಂತನೆ ನಡೆಸಿದೆ ಎಂದು ಹೇಳಲಾಗ್ತಿದೆ. ಮೇ ಮೊದಲ ವಾರದ ಬಳಿಕ ಆರಗ ಜ್ಞಾನೇಂದ್ರರಿಂದ ಗೃಹ ಖಾತೆ ಹಿಂಪಡೆದು, ಅವರಿಗೆ ಬೇರೆ ಖಾತೆಯ ಹೊಣೆ ನೀಡುವ ಸಂಭವ ಇದೆ. ಆರಗ ಜ್ಞಾನೇಂದ್ರ ಕಾರ್ಯವೈಖರಿ ಬಗ್ಗೆ ಸ್ವತಃ ಬಿಜೆಪಿ ಪಕ್ಷದಲ್ಲೇ ಭಾರೀ ಅಸಮಾಧಾನವಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments