ರಾಜ್ಯ ಹೈಕಮಾಂಡ್ ವಾರ್ನಿಂಗ್!

Webdunia
ಬುಧವಾರ, 8 ಜೂನ್ 2022 (11:01 IST)
ಬೆಂಗಳೂರು : ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ತಲೆದೋರಿರುವ ಧರ್ಮ ದಂಗಲ್ಗೆ ತೆರೆ ಎಳೆಯಲು ಹೈಕಮಾಂಡ್ ಮುಂದಾಗಿದೆ.

ಈ ಸಂಬಂಧ ಎಲ್ಲಾ ರಾಜ್ಯಗಳ ಬಿಜೆಪಿ ಘಟಕಗಳಿಗೆ ಬಿಜೆಪಿ ಹೈಕಮಾಂಡ್ ವಾರ್ನಿಂಗ್ ನೀಡಿದೆ. ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆ ಬಳಿಕ ರಾಷ್ಟ್ರೀಯ ಬಿಜೆಪಿ ಅಲರ್ಟ್ ಆಗಿದೆ. ಧರ್ಮ ದಂಗಲ್ಗೆ ತೆರೆ ಎಳೆಯಲು ಬಿಜೆಪಿಯಲ್ಲಿ ಪ್ರಯತ್ನ ನಡೆದಿದೆ.

ನೂಪುರ್ ಶರ್ಮಾ ಉಚ್ಚಾಟನೆ ಮೂಲಕ ರಾಜ್ಯಗಳ ಬಿಜೆಪಿ ಘಟಕಗಳಿಗೆ ಎಚ್ಚರಿಕೆ ಸಂದೇಶ ರವಾನಿಸಿದೆ. ಆ ಮೂಲಕ ಎಲ್ಲ ರಾಜ್ಯಗಳ ಬಿಜೆಪಿ ಘಟಕಗಳಿಗೆ ಹೈಕಮಾಂಡ್ ವಾರ್ನಿಂಗ್ ನೀಡಿದೆ. 

ಧರ್ಮ ದಂಗಲ್ ವಿಚಾರದ ಬಗ್ಗೆ ಮಾಧ್ಯಮಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ಅಭಿಪ್ರಾಯ ವ್ಯಕ್ತಪಡಿಸದಂತೆ ತಾಕೀತು ಮಾಡಿದೆ. ಮಸೀದಿ ಗಲಾಟೆ ಸೇರಿ ಇತರೆ ಧರ್ಮ ಸೂಕ್ಷ್ಮ ವಿಚಾರಗಳ ಕುರಿತು ಮಾತಾಡದಂತೆ ಹೈಕಮಾಂಡ್ ನಿರ್ದೇಶನ ನೀಡಿದೆ.

ಸಬ್ ಕಾ ಸಾತ್ ಸಬ್ ಕಾ ವಿಕಾಸ್ ನಿಲುವಿಗೆ ಧರ್ಮ ದಂಗಲ್ ಅಡ್ಡಿಯಾಗಿದೆ. ಇನ್ಮುಂದೆ ಧರ್ಮ ಸೂಕ್ಷ್ಮ ವಿಚಾರಗಳ ಬಗ್ಗೆ ಪಕ್ಷದ ಮುಖಂಡರು, ವಕ್ತಾರರು ಹೇಳಿಕೆಗಳನ್ನು ಕೊಡಬಾರದು. ಕೆಲವು ಪ್ರಕರಣಗಳಲ್ಲಿ ಹೇಳಿಕೆ, ಅಭಿಪ್ರಾಯ ಕೊಡಲೇಬೇಕಾದ ಅನಿವಾರ್ಯತೆ ಇದ್ದರೆ ಅದರ ಬಗ್ಗೆ ಮೊದಲೇ ಗಮನಕ್ಕೆ ತಂದು ಅನುಮತಿ ಪಡೆಯಬೇಕು ಎಂದು ಖಡಕ್ ಸೂಚನೆ ನೀಡಿದೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉತ್ತರ ಭಾರತದಲ್ಲಿ ಪ್ರವಾಹ, ಭೂಕುಸಿತಕ್ಕೆ ಕನಿಷ್ಠ 25ಮಂದಿ ಬಲಿ, Video

ಮೋದಿ ವಿರುದ್ಧ ಪ್ರತಿಭಟನೆಗಿಳಿದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ, Video

ಸಿಜೆಪಿ ಪ್ರತಿಭಟನೆಯಲ್ಲಿ ಸುನೀತಾ ವಿಲಿಯಮ್ಸ್ ಪಾಲ್ಗೊಂಡಿದ್ದರೇ, ಅಸಲಿಯತ್ತೇನು

ಪತ್ನಿ, ಮಕ್ಕಳಿಬ್ಬರ ಬಾಯಿಗೆ ಪ್ಲಾಸ್ಟರ್ ಅಂಟಿಸಿ ಉಸಿರುಗಟ್ಟಿಸಿ ಕೊಂದ ಬಳಿಕ ಪತಿಯೂ ಸಾವಿಗೆ ಶರಣು, ಕರುಳು ಹಿಂಡುವ ಘಟನೆ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಮಹತ್ವದ ಮಾಹಿತಿ ಹಂಚಿಕೊಂಡ ಜಿ ಪರಮೇಶ್ವರ್‌

ಮುಂದಿನ ಸುದ್ದಿ
Show comments