Webdunia - Bharat's app for daily news and videos

Install App

ರಾಜ್ಯ ಹೈಕಮಾಂಡ್ ವಾರ್ನಿಂಗ್!

Webdunia
ಬುಧವಾರ, 8 ಜೂನ್ 2022 (11:01 IST)
ಬೆಂಗಳೂರು : ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ತಲೆದೋರಿರುವ ಧರ್ಮ ದಂಗಲ್ಗೆ ತೆರೆ ಎಳೆಯಲು ಹೈಕಮಾಂಡ್ ಮುಂದಾಗಿದೆ.

ಈ ಸಂಬಂಧ ಎಲ್ಲಾ ರಾಜ್ಯಗಳ ಬಿಜೆಪಿ ಘಟಕಗಳಿಗೆ ಬಿಜೆಪಿ ಹೈಕಮಾಂಡ್ ವಾರ್ನಿಂಗ್ ನೀಡಿದೆ. ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆ ಬಳಿಕ ರಾಷ್ಟ್ರೀಯ ಬಿಜೆಪಿ ಅಲರ್ಟ್ ಆಗಿದೆ. ಧರ್ಮ ದಂಗಲ್ಗೆ ತೆರೆ ಎಳೆಯಲು ಬಿಜೆಪಿಯಲ್ಲಿ ಪ್ರಯತ್ನ ನಡೆದಿದೆ.

ನೂಪುರ್ ಶರ್ಮಾ ಉಚ್ಚಾಟನೆ ಮೂಲಕ ರಾಜ್ಯಗಳ ಬಿಜೆಪಿ ಘಟಕಗಳಿಗೆ ಎಚ್ಚರಿಕೆ ಸಂದೇಶ ರವಾನಿಸಿದೆ. ಆ ಮೂಲಕ ಎಲ್ಲ ರಾಜ್ಯಗಳ ಬಿಜೆಪಿ ಘಟಕಗಳಿಗೆ ಹೈಕಮಾಂಡ್ ವಾರ್ನಿಂಗ್ ನೀಡಿದೆ. 

ಧರ್ಮ ದಂಗಲ್ ವಿಚಾರದ ಬಗ್ಗೆ ಮಾಧ್ಯಮಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ಅಭಿಪ್ರಾಯ ವ್ಯಕ್ತಪಡಿಸದಂತೆ ತಾಕೀತು ಮಾಡಿದೆ. ಮಸೀದಿ ಗಲಾಟೆ ಸೇರಿ ಇತರೆ ಧರ್ಮ ಸೂಕ್ಷ್ಮ ವಿಚಾರಗಳ ಕುರಿತು ಮಾತಾಡದಂತೆ ಹೈಕಮಾಂಡ್ ನಿರ್ದೇಶನ ನೀಡಿದೆ.

ಸಬ್ ಕಾ ಸಾತ್ ಸಬ್ ಕಾ ವಿಕಾಸ್ ನಿಲುವಿಗೆ ಧರ್ಮ ದಂಗಲ್ ಅಡ್ಡಿಯಾಗಿದೆ. ಇನ್ಮುಂದೆ ಧರ್ಮ ಸೂಕ್ಷ್ಮ ವಿಚಾರಗಳ ಬಗ್ಗೆ ಪಕ್ಷದ ಮುಖಂಡರು, ವಕ್ತಾರರು ಹೇಳಿಕೆಗಳನ್ನು ಕೊಡಬಾರದು. ಕೆಲವು ಪ್ರಕರಣಗಳಲ್ಲಿ ಹೇಳಿಕೆ, ಅಭಿಪ್ರಾಯ ಕೊಡಲೇಬೇಕಾದ ಅನಿವಾರ್ಯತೆ ಇದ್ದರೆ ಅದರ ಬಗ್ಗೆ ಮೊದಲೇ ಗಮನಕ್ಕೆ ತಂದು ಅನುಮತಿ ಪಡೆಯಬೇಕು ಎಂದು ಖಡಕ್ ಸೂಚನೆ ನೀಡಿದೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ರಾಜೀನಾಮೆ ಬದಲು ಜಾತಿಗಣತಿ, ಇದು ಹೈಕಮಾಂಡ್ ಪ್ಲ್ಯಾನ್: ಛಲವಾದಿ ನಾರಾಯಣಸ್ವಾಮಿ

Siddaramaiah: ರಾಜ್ಯಪಾಲರನ್ನು ಫೋನ್ ನಲ್ಲಿ ನಾನೇ ಕರೆದಿದ್ದೆ: ಗೊತ್ತಿಲ್ಲ ಎಂದಿದ್ದ ಸಿಎಂ ಸಿದ್ದರಾಮಯ್ಯ ಈಗ ಸ್ಪಷ್ಟನೆ

Meghalaya Honeymoon Case: ನೂರಕ್ಕೆ ನೂರು ಇದು ಆಕೆಯೇ ಮಾಡಿದ್ದು: ಸೋನಮ್‌ ವಿರುದ್ಧ ಕೆಂಡಕಾರಿದ ಸಹೋದರ

Kasargodu: ಬಾಲ್ಯದ ಘಟನೆಗೆ 50 ವರ್ಷಗಳ ಬಳಿಕ ಪ್ರತೀಕಾರ ತೀರಿಸಿಕೊಂಡ ವ್ಯಕ್ತಿ

ಸತ್ಯ ಹರಿಶ್ಚಂದ್ರರ ತುಂಡುಗಳ ಬಣ್ಣವೆಲ್ಲಾ ಬಯಲಾಗ್ತಿದೆ: ಬಿ ಶ್ರೀರಾಮುಲು

ಮುಂದಿನ ಸುದ್ದಿ
Show comments