Webdunia - Bharat's app for daily news and videos

Install App

ಸರ್ಕಾರದ ಸಮನ್ವಯ ಸೂತ್ರಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್

Webdunia
ಶನಿವಾರ, 24 ಸೆಪ್ಟಂಬರ್ 2022 (08:00 IST)
ಬೆಂಗಳೂರು : ಸಾಮಾನ್ಯ ಪ್ರವೇಶ ಪರೀಕ್ಷೆಗೆ ಸಂಬಂಧಿಸಿದಂತೆ ಸರ್ಕಾರದ ಸಮನ್ವಯ ಸೂತ್ರಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದ್ದು, ಈ ಮೂಲಕ ಬಿಕ್ಕಟ್ಟು ಶಮನಗೊಂಡಿದೆ.
 
ಹೈಕೋರ್ಟ್ ಗ್ರೀನ್ ಸಿಗ್ನಲ್ ಹಿನ್ನೆಲೆಯಲ್ಲಿ ಸೀಟು ಹಂಚಿಕೆ ಪ್ರಕ್ರಿಯೆಯನ್ನು ಸರ್ಕಾರ ಆರಂಭಿಸಿದೆ. ಸೆಪ್ಟೆಂಬರ್ 29ಕ್ಕೆ ಸಿಇಟಿ ಪರಿಷ್ಕೃತ ರಾಂಕಿಂಗ್ ಪಟ್ಟಿ ಕೆಇಎ ಬಿಡುಗಡೆ ಮಾಡಲಿದೆ.

ಅಕ್ಟೋಬರ್ 3 ರಿಂದ ಮೊದಲ ಹಂತದ ಸೀಟು ಹಂಚಿಕೆ ಪ್ರಕ್ರಿಯೆ ಪ್ರಾರಂಭ ಮಾಡುವುದಾಗಿ ಉನ್ನತ ಶಿಕ್ಷಣ ಸಚಿವ ಅಶ್ವಥ್ನಾರಾಯಣ್  ತಿಳಿಸಿದ್ದಾರೆ.   ಪುನಾರಾವರ್ತಿತರ 2021ನೇ ಸಾಲಿನ ಪಿಯುಸಿ ಅಂಕಗಳನ್ನು 2022ನೇ ಸಾಲಿನ ಸಿಇಟಿಗೆ ಪರಿಗಣಿಸುವ ವಿಚಾರದಲ್ಲಿ ಸಮಸ್ಯೆಯಾಗಿತ್ತು.

ಈ ಕುರಿತು ಸಿಇಟಿ ರ್ಯಾಂಕಿಂಗ್ನಲ್ಲಿ ಪುನರಾವರ್ತಿತ ವಿದ್ಯಾರ್ಥಿಗಳ ಪಿಯುಸಿ ಅಂಕ ಪರಿಗಣಿಸಲ್ಲವೆಂದು ಸರ್ಕಾರ ಜುಲೈ 30 ರಂದು ಆದೇಶ ಹೊರಡಿಸಿತ್ತು. ರಾಜ್ಯ ಸರ್ಕಾರದ ಈ ಆದೇಶವನ್ನು ಪ್ರಶ್ನಿಸಿ ಪುನರಾವರ್ತಿತ ವಿದ್ಯಾರ್ಥಿಗಳು ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ಪುನರಾವರ್ತಿತ ವಿದ್ಯಾರ್ಥಿಗಳ ಪಿಯುಸಿ ಅಂಕವನ್ನು ಪರಿಗಣಿಸುವಂತೆ ಆದೇಶ ನೀಡಿತ್ತು. 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments