ಹಿಜಾಬ್ : ಹಲವು ಜಿಲ್ಲೆಗಳಲ್ಲಿ 144 ಸೆಕ್ಷನ್ ಜಾರಿ!

Webdunia
ಸೋಮವಾರ, 14 ಫೆಬ್ರವರಿ 2022 (11:36 IST)
ಬೆಂಗಳೂರು : ಹಿಜಾಬ್, ಕೇಸರಿ ಶಾಲು ವಿವಾದ ಕೇವಲ ರಾಜ್ಯದಲ್ಲಿ ಮಾತ್ರವಲ್ಲ ಇಡೀ ದೇಶವನ್ನೇ ವ್ಯಾಪಿಸಿದೆ.

ಸದ್ಯ ಕೋರ್ಟ್ ತೀರ್ಮಾನಕ್ಕಾಗಿ ಕಾದು ಕುಳಿತಿದ್ದಾರೆ. ಸಮವಸ್ತ್ರ ಸಂಘರ್ಷದ ಹಿನ್ನೆಲೆ ಬಂದ್ ಆಗಿದ್ದ ಶಾಲೆಗಳು ಇಂದಿನಿಂದ ಆರಂಭಗೊಂಡಿವೆ. 9, 10ನೇ ತರಗತಿ ವಿದ್ಯಾರ್ಥಿಗಳು ಶಾಲೆಯತ್ತ ಮುಖ ಮಾಡಿದ್ದಾರೆ.

ಶಾಲೆಗಳಲ್ಲಿ ಅಹಿತಕರ ಘಟನೆ ನಡೆಯದಂತೆ ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ. ಸೂಕ್ಷ್ಮ ಪ್ರದೇಶಗಳಿಗೆ ಡಿಸಿ, ಎಸ್ಪಿ ಭೇಟಿ ನೀಡಬೇಕು. ಶಾಲಾ ಆಡಳಿತ ಮಂಡಳಿಗಳ ಜತೆ ಸಂಪರ್ಕದಲ್ಲಿರಬೇಕು. ಹೈಕೋರ್ಟ್ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು.

ಅಧಿಕಾರಿಗಳು ಮೇಲಿನ ಆದೇಶಗಳಿಗೆ ಕಾಯಬಾರದು. ಸಂದರ್ಭಕ್ಕೆ ತಕ್ಕಂತೆ ನೀವೇ ಕ್ರಮ ಕೈಗೊಳ್ಳಿ ಅಂತ ಜಿಲ್ಲಾಧಿಕಾರಿಗಳು, ಎಸ್ಪಿಗಳಿಗೆ ಸೂಚನೆ ನೀಡಿದ್ದಾರೆ.

ಇಂದಿನಿಂದ 9, 10ನೇ ತರಗತಿ ವಿದ್ಯಾರ್ಥಿಗಳಿಗೆ ಶಾಲೆ ಶುರುವಾಗಿದೆ. ಅಹಿತಕರ ಘಟನೆ ನಡೆಯದಂತೆ ಶಾಲೆಗಳ ಬಳಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ದಾವಣಗೆರೆ, ಉಡುಪಿ, ಶಿವಮೊಗ್ಗ, ಮೈಸೂರು, ತುಮಕೂರು ಬೆಂಗಳೂರು ಗ್ರಾಮಾಂತರ ಜಿಲ್ಲೆ ಸೇರಿದಂತೆ  ರಾಜ್ಯದ ಹಲವು ಜಿಲ್ಲೆಗಳಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿರುವ ಶಾಲೆಗಳ ಬಳಿ ಬಿಗಿಬಂದೋಬಸ್ತ್ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರಿನಲ್ಲಿ ಟ್ರಾಫಿಕ್ ಇರೋದು ಒಳ್ಳೇದು ಅನ್ನೋದಾ ಸಚಿವ ಪ್ರಿಯಾಂಕ್ ಖರ್ಗೆ

ಪೂರ್ವತಯಾರಿ ಇಲ್ಲದೇ ಆತುರಾತುರವಾಗಿ ಜಾತಿ ಗಣತಿ: ವಿಜಯೇಂದ್ರ

ಶಾಂತಿ ನೊಬೆಲ್‌ ಪ್ರಶಸ್ತಿಯ ನಿರೀಕ್ಷೆಯಲ್ಲಿದ್ದ ಡೊನಾಲ್ಡ್‌ ಟ್ರಂಪ್‌ಗೆ ನಿರಾಸೆ: ಸಿಕ್ಕಿದ್ದು ಯಾರಿಗೆ ಗೊತ್ತಾ

ಮೈಸೂರಿನಲ್ಲಿ ಕೆಲಸವಾಗಬೇಕಾದರೆ ಸಿಎಂ ಪುತ್ರ ಯತೀಂದ್ರನಿಗೆ ಕಪ್ಪ ಕೊಡಬೇಕು: ಪ್ರತಾಪ್ ಸಿಂಹ

ಬಿಹಾರ ಚುನಾವಣೆಗೆ ಕೈ ಹೈಕಮಾಂಡ್ ಗೆ 300 ಕೋಟಿ, ಸಚಿವ ಸ್ಥಾನಕ್ಕೆ ವೀರೇಂದ್ರ ಪಪ್ಪಿ ಆಫರ್: ಆರ್ ಅಶೋಕ್ ಟಾಂಗ್

ಮುಂದಿನ ಸುದ್ದಿ
Show comments