ಶಾಲಾ-ಕಾಲೇಜುಗಳಿಗೆ ರಜೆ

Webdunia
ಮಂಗಳವಾರ, 5 ಜುಲೈ 2022 (07:04 IST)
ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಳೆದ 2 ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ನದಿ-ಹಳ್ಳ-ಕೊಳ್ಳ-ತೊರೆಗಳು ಮೈದುಂಬಿ ಹರಿಯುತ್ತಿವೆ.
 
 ಈ ಹಿನ್ನೆಲೆ ಜಿಲ್ಲಾಡಳಿತ ಮುಂಜಾಗೃತ ಕ್ರಮವಾಗಿ ಜಿಲ್ಲೆಯ ಮಲೆನಾಡು ಭಾಗದ 3 ತಾಲೂಕಿಗೆ ರಜೆ ಘೋಷಿಸಿದೆ. ಜಿಲ್ಲೆಯ ಕಳಸ ಹಾಗೂ ಶೃಂಗೇರಿ ತಾಲೂಕಿನ ಎಲ್ಲಾ ಶಾಲೆಗಳು ಹಾಗೂ ಮೂಡಿಗೆರೆ ತಾಲೂಕಿನ ಬಾಳೂರು ಹೋಬಳಿ ವ್ಯಾಪ್ತಿಯ ಎಲ್ಲಾ ಶಾಲೆಗಳಿಗೆ ರಜೆ ನೀಡಲು ಆದೇಶಿಸಿದೆ.

ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಳೆದ 2 ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಭಾರೀ ಮಳೆಯಿಂದ ಕಳಸ ತಾಲೂಕಿನ ಕುದುರೆಮುಖದ ಘಟ್ಟ ಪ್ರದೇಶದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಭದ್ರಾ ನದಿ ಮೈದುಂಬಿ ಹರಿಯುತ್ತಿದೆ.

ಭದ್ರೆಯ ಅಬ್ಬರ ಜೋರಿರುವ ಕಾರಣ ಕಳಸ-ಹೊರನಾಡು ಸಂಪರ್ಕ ಸೇತುವೆ ಹೆಬ್ಬಾಳೆ ಸಂಪೂರ್ಣ ಜಲಾವೃತಗೊಂಡಿದೆ. ಸುಮಾರು 1 ಗಂಟೆಗೂ ಅಧಿಕ ಕಾಲ ಹೆಬ್ಬಾಳೆ ಸೇತುವೆ ಮುಳುಗಡೆಯಾಗಿದ್ದು, ವಾಹನಗಳು ನಿಂತಲ್ಲೇ ನಿಂತು ಪರದಾಡಬೇಕಾಯ್ತು.

ಶೃಂಗೇರಿ ತಾಲೂಕಿನ ಕೆರೆಕಟ್ಟೆ ಭಾಗದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ತುಂಗಾ ನದಿ ಕೂಡ ಮೈದುಂಬಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ತುಂಗಾ ನದಿಯ ಅಬ್ಬರ ಜೋರಾಗಿದ್ದು ತುಂಗೆಯ ನೀರು ಶೃಂಗೇರಿ ದೇವಸ್ಥಾನದ ವಾಹನಗಳ ಪಾರ್ಕಿಂಗ್ ಜಾಗ ಪ್ರವೇಶಿಸಿತ್ತು. ಪಾರ್ಕಿಂಗ್ ಜಾಗಕ್ಕೆ ಹೋಗುವ ಮಾರ್ಗ ಕೂಡ ಮಳೆ ನೀರಿನಿಂದ ಸಂಪೂರ್ಣ ಜಲಾವೃತಗೊಂಡಿತ್ತು. 

ಮೂಡಿಗೆರೆ, ಕೊಪ್ಪ ಹಾಗೂ ಎನ್.ಆರ್.ಪುರ ತಾಲೂಕಿನಲ್ಲೂ ಮಳೆ ಅಬ್ಬರ ಮುಂದುವರೆದಿದ್ದು ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಮಾಡಲು ನಿಜ ಕಾರಣವೇನು: ಶಾಕಿಂಗ್ ವಿಡಿಯೋ ಬಿಡುಗಡೆ ಮಾಡಿದ ದೆಹಲಿ ಪೊಲೀಸರು

ಟಾಟಾ ಸುಮೋ ಮೇಲೆ ಬಿದ್ದ ಬೃಹತ್ ಬಂಡೆಗಳು, 13ಮಂದಿ ಸಾವು

ಕಳೆದ ವರ್ಷ ಲಂಡನ್‌ನ ಸ್ನಾನಗೃಹದಲ್ಲಿ ಶವವಾಗಿ ಪತ್ತೆಯಾದ ಸೌದಿ ಯುವರಾಜಕುಮಾರನ ಸಾವಿಗೆ ಕಾರಣ ಏನ್ ಗೊತ್ತಾ

ವಿದ್ಯಾರ್ಥಿಗಳ ಮೇಲೆ ಪೊಲೀಸರ ಅತಿಯಾದ ಬಲಪ್ರಯೋಗ, ಜು.27ರಂದು ವಿಚಾರಣೆಗೆ ಸುಪ್ರೀಂ ಅಸ್ತು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕ್ ಕಾದಿದೆ, ಏನ್ ವಿಷಯ ಗೊತ್ತಾ

ಮುಂದಿನ ಸುದ್ದಿ
Show comments