Webdunia - Bharat's app for daily news and videos

Install App

ಸಾಧಕ ರೈತನಿಗೆ ಗೌರವ ಡಾಕ್ಟರೇಟ್

Webdunia
ಮಂಗಳವಾರ, 21 ಸೆಪ್ಟಂಬರ್ 2021 (13:50 IST)
ಬೆಂಗಳೂರು : ಕೃಷಿ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆ ಮಾಡಿದ ರೈತರೊಬ್ಬರಿಗೆ ಗೌರವ ಡಾಕ್ಟರೇಟ್ ನೀಡಲು ಸರ್ಕಾರ ನಿರ್ಧರಿಸಿದೆ. ರಾಜ್ಯದ ಇತಿಹಾಸದಲ್ಲೇ ಇಂಥದ್ದೊಂದು ಪ್ರಯೋಗ ನಡೆಯುತ್ತಿರುವುದು ಇದೇ ಮೊದಲು.

ಈ ವರ್ಷದಿಂದಲೇ ಇದನ್ನು ಚಾಲ್ತಿಯಲ್ಲಿ ತರಬೇಕಿತ್ತು. ಆದರೆ ಕರೊನಾ ಕಾರಣದಿಂದ ಇದನ್ನು ಮುಂದೂಡಲಾಗಿದೆ. ಸಾಧಕರನ್ನು ಗುರುತಿಸುವುದು ಈ ವರ್ಷ ಸ್ವಲ್ಪ ಕಷ್ಟವಾಯಿತು. ಆದ್ದರಿಂದ ಮುಂದಿನ ವರ್ಷದಿಂದ ಇದು ಜಾರಿಗೆ ಬರಲಿದೆ ಎಂದು ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.ಎಸ್. ರಾಜೇಂದ್ರ ಪ್ರಸಾದ್ ಹೇಳಿದ್ದಾರೆ. ಕೃಷಿ ಕ್ಷೇತ್ರದಲ್ಲಿ ಹೊಸ ಹೊಸ ಆವಿಷ್ಕಾರ ಮಾಡಿದ ಮಾದರಿ ರೈತರನ್ನು ಗುರುತಿಸಿ ಗೌರವಿಸುವುದು ಕೃಷಿ ವಿವಿಯ ಉದ್ದೇಶವಾಗಿದೆ. ಯಾವ ವಿವಿಯೂ ಇದುವರೆಗೆ ಇಂತಹ ನಿರ್ಧಾರ ಕೈಗೊಂಡಿರಲಿಲ್ಲ ಎಂದು ಅವರು ಮಾಹಿತಿ ನೀಡಿದ್ದಾರೆ.
ಪತ್ರಕರ್ತರ ಜತೆ ಮಾತನಾಡಿದ ರಾಜೇಂದ್ರ ಪ್ರಸಾದ್ ಈ ಮಾಹಿತಿ ಹಂಚಿಕೊಂಡಿದ್ದಾರೆ. ಕೃಷಿ ಕ್ಷೇತ್ರದಲ್ಲಿ ಹೊಸ ಆವಿಷ್ಕಾರ ಮಾಡುವ, ವರಮಾನ ಗಳಿಕೆಯ ಹೊಸ ಮಾರ್ಗ ತೋರಿಸುವ ಪ್ರಗತಿಪರ ರೈತರನ್ನು ಗುರುತಿಸಿ ಗೌರವ ಡಾಕ್ಟರೇಟ್ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಇದೇ ವೇಳೆ ಕೇಂದ್ರ ಸರಕಾರದ ಹೊಸ ಶೈಕ್ಷಣಿಕ ನೀತಿ ಕುರಿತೂ ಅವರು ಮಾಹಿತಿ ನೀಡಿದರು. ಇದರ ಕುರಿಂತೆ ಕೃಷಿ ವಿಶ್ವವಿದ್ಯಾನಿಲಯ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದೆ. ಕೃಷಿ ವಿಶ್ವವಿದ್ಯಾಲಯದಲ್ಲಿ ಶೇ.70ರಷ್ಟು ಹೊಸ ಶೈಕ್ಷಣಿಕ ರೀತಿಯಲ್ಲೆ ಚಟುವಟಿಕೆಗಳು ನಡೆಯುತ್ತಿವೆ. ಆ ಹಿನ್ನೆಲೆಯಲ್ಲಿ ಹೊಸ ಶೈಕ್ಷಣಿಕ ನೀತಿಗೆ ಯಾವುದೇ ರೀತಿಯ ತೊಂದರೆ ಉಂಟಾಗದು ಎಂದು ಮಾಹಿತಿ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore murder: ಹನಿಮೂನ್ ನಲ್ಲೇ ಗಂಡನಿಗೆ ಚಟ್ಟ ಕಟ್ಟಿದಳು: ಇಂಧೋರ್ ನಲ್ಲಿ ಪತ್ನಿಯ ಚಿಲ್ಲಿಂಗ್ ಮರ್ಡರ್ ಕತೆ

Siddaramaiah: ಕಮಿಷನರ್ ಭದ್ರತೆ ಕೊಡ್ಬೇಕಿತ್ತು, ನಂದೇನು ತಪ್ಪಿದೆ ಎಂದ ಸಿಎಂ: ಆರ್ಡರ್ ಕೊಟ್ಟಿದ್ದು ನೀವಲ್ವಾ ಎಂದ ಪಬ್ಲಿಕ್

Karnataka Weather: ಇಂದಿನಿಂದ ಈ ಜಿಲ್ಲೆಗಳಿಗೆ ಭಾರೀ ಮಳೆ, ಹೈ ಅಲರ್ಟ್ ಘೋಷಣೆ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಮುಂದಿನ ಸುದ್ದಿ
Show comments