Webdunia - Bharat's app for daily news and videos

Install App

ಪಾಸಿಟಿವಿಟಿ ಭಾರಿ ಇಳಿಕೆ

Webdunia
ಶನಿವಾರ, 12 ಫೆಬ್ರವರಿ 2022 (09:16 IST)
ಬೆಂಗಳೂರು : ರಾಜ್ಯದ  ಕೋವಿಡ್-19ರ  ಪಾಸಿಟಿವಿಟಿ ದರದಲ್ಲಿ  ಭಾರಿ ಇಳಿಕೆ ದಾಖಲಾಗುತ್ತಿದೆ.
 
ಸತತ ಎರಡು ದಿನಗಳಿಂದ ಶೇ.5ರೊಳಗೆ ರಾಜ್ಯದ ಪಾಸಿಟಿವಿಟಿ ದರ ಬಂದಿದ್ದು ರಾಜ್ಯದಲ್ಲಿ ಕೋವಿಡ್ ಮೂರನೇ ಅಲೆ ನಿಯಂತ್ರಣಕ್ಕೆ ಬರುತ್ತಿರುವುದು ಖಚಿತವಾಗಿದೆ.

ಒಮಿಕ್ರೋನ್ ಪ್ರೇರಿತ ಮೂರನೇ ಅಲೆಯಲ್ಲಿ ಜನವರಿ 8 ರಂದು ಮೊದಲ ಬಾರಿಗೆ ಪಾಸಿಟಿವಿಟಿ ದರ ಶೇ.5 ದಾಟಿತ್ತು. ಅಲ್ಲಿಂದ ಬಳಿಕ ಏರುತ್ತ ಸಾಗಿದ್ದ ಪಾಸಿಟಿವಿಟಿ ದರ ಜನವರಿ 24ಕ್ಕೆ ಮೂರನೇ ಅಲೆಯ ಗರಿಷ್ಠ ಶೇ.32.95 ತಲುಪಿತ್ತು. ತದನಂತರ ಇಳಿಕೆ ಹಾದಿಯಲ್ಲಿ ಸಾಗಿದ ಪಾಸಿಟಿವಿಟಿ ದರ ಫೆ.9ಕ್ಕೆ ಮೊದಲ ಬಾರಿಗೆ ಶೇ.5 ರೊಳಗೆ ಬಂದಿದೆ.

ರಾಜ್ಯದಲ್ಲಿ ಸದ್ಯ ಐದಾರು ಜಿಲ್ಲೆಗಳಲ್ಲಿ ಮಾತ್ರ ಶೇ.5ಕ್ಕಿಂತ ಹೆಚ್ಚಿನ ಪಾಸಿಟಿವಿಟಿ ದರ ದಾಖಲಾಗುತ್ತಿದೆ. ಫೆ. 10ರ ಮಾಹಿತಿಯಂತೆ ಶಿವಮೊಗ್ಗ (ಶೇ.8.41), ತುಮಕೂರು (ಶೇ. 7.62), ಕೊಡಗು (ಶೇ.7.14), ಬಳ್ಳಾರಿ (ಶೇ. 6.65), ಮೈಸೂರು (ಶೇ.5.95), ಚಾಮರಾಜನಗರ ಜಿಲ್ಲೆ (ಶೇ. 5.6)ಯಲ್ಲಿ ಮಾತ್ರ ಶೇ. 5ಕ್ಕಿಂತ ಹೆಚ್ಚು ಪಾಸಿಟಿವಿಟಿ ದರ ವರದಿಯಾಗಿದೆ.

ಉಳಿದೆಲ್ಲ ಜಿಲ್ಲೆಗಳಲ್ಲಿ ಸೋಂಕು ನಿಯಂತ್ರಣಕ್ಕೆ ಬರುತ್ತಿದೆ. ಮಂಡ್ಯ (ಶೇ. 1.99), ರಾಯಚೂರು (ಶೇ. 1.86), ದಾವಣಗೆರೆ (ಶೇ. 1.8), ದಕ್ಷಿಣ ಕನ್ನಡ (ಶೇ. 1.75), ಕೊಪ್ಪಳ (ಶೇ. 1.68), ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ (ಶೇ. 1.56), ಪಾಸಿಟಿವಿಟಿ ದರ ಶೇ.2 ಕ್ಕಿಂತ ಕೆಳಕ್ಕಿಳಿದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments