ಟೊಮೆಟೊ ಬೆಲೆಯಲ್ಲಿ ಭಾರೀ ಕುಸಿತ !

Webdunia
ಬುಧವಾರ, 23 ಮಾರ್ಚ್ 2022 (13:42 IST)
ಚಿಕ್ಕಬಳ್ಳಾಪುರ : ಒಂದು ಕಡೆ ಅಗತ್ಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೇರುತ್ತಿದ್ದು ಜನಸಾಮಾನ್ಯರು ಹೈರಾಣಾಗುವಂತಾಗಿದೆ. ಮತ್ತೊಂದೆಡೆ ಲಕ್ಷ ಲಕ್ಷ ಖರ್ಚು ಮಾಡಿ ರೈತರು ಬೆಳೆದ ಬೆಳೆಗಳ ಬೆಲೆ ಪಾತಾಳಕ್ಕಿಳಿಯುವಂತಾಗಿದೆ.
 
ಲಕ್ಷ ಲಕ್ಷ ಖರ್ಚು ಮಾಡಿ ರೈತ ಬೆಳೆದ ಟೊಮೆಟೊ ಬೆಲೆ ಈಗ ಪಾತಾಳಕ್ಕಿಳಿದಿದ್ದು, ಅನ್ನದಾತ ಅಕ್ಷರಶಃ ನಲುಗಿ ಹೋಗುವಂತಾಗಿದೆ. ಒಂದು ಕೆಜಿ ಟೊಮೆಟೊ 1 ರೂ.ಗೂ ಕಡಿಮೆ ದರಕ್ಕೆ ಬಿಕರಿಯಾಗುತ್ತಿದ್ದು, ರೈತ ಸಾಲದ ಶೂಲಕ್ಕೆ ಸಿಲುಕುವಂತಾಗಿ ದಿಕ್ಕು ತೋಚದಂತಾಗಿದ್ದಾನೆ. 

ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಗರದ ಟೊಮೆಟೊ ಮಾರುಕಟ್ಟೆಗೆ ರೈತರೇನೋ ಹಗಲು ರಾತ್ರಿ ಎನ್ನದೇ ಕಷ್ಟಪಟ್ಟು ಬಂಪರ್ ಟೊಮೆಟೊ ಬೆಳೆದು ಲೋಡ್ ಗಟ್ಟಲೇ ಸಾವಿರಾರು ಟನ್ ಟೊಮೆಟೊವನ್ನು ಮಾರುಕಟ್ಟೆಗೆ ಹೊತ್ತು ತರುತ್ತಾರೆ. ಆದರೆ ಈಗ ಚಿಂತಾಮಣಿ ಟೊಮೆಟೊ ಮಾರುಕಟ್ಟೆಯಲ್ಲಿ ಟೊಮೆಟೊ ಖರೀದಿಸುವವರೇ ಕಡಿಮೆಯಾಗಿದ್ದಾರೆ.

ಟೊಮೆಟೊ ಖರೀದಿ ಮಾಡಿದರೂ 15 ಕೆಜಿಯ ಬಾಕ್ಸ್ 10 ರೂಪಾಯಿ, 20 ರೂಪಾಯಿ, ಹೆಚ್ಚೆಂದರೆ 30 ರೂಪಾಯಿಗೆ ಬಿಕರಿಯಾಗುತ್ತಿದೆ. ಇದರಿಂದ 1 ಕೆಜಿ ಟೊಮೆಟೊ 1 ರೂ. ಗಿಂತಲೂ ಕಡಿಮೆ ಬೆಲೆಗೆ ಬಿಕರಿಯಾಗುತ್ತಿದ್ದು, ಟೊಮೆಟೊ ಬೆಳೆದ ರೈತರು ಬೀದಿಪಾಲಾಗುವಂತಾಗಿದೆ ಎಂದು ಟೊಮೆಟೊ ಬೆಳೆಗಾರ, ರೈತ ತಿಪ್ಪಣ್ಣ ತಮ್ಮ ಅಳಲು ತೋಡಿಕೊಂಡಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಅಕ್ಕನನ್ನು ಮಾರಾಟ ಮಾಡ್ಬೇಡಿ, ಅಕ್ಕನ ಮಾತು ಕೇಳಿದ್ರೆ ಕಣ್ಣೀರು ಬರುತ್ತೆ

ವಿಧಾನಸಭೆ ಚುನಾವಣೆ, ಬಿಹಾರದಲ್ಲಿ ರಾಹುಲ್ ಗಾಂಧಿ ಮೊದಲ ರ್ಯಾಲಿ

ದ್ವೇಷ ಭಾಷಣ ಮಾಡುವವರ ಬಗ್ಗೆ ಮಂಗಳೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ

ಮಹತ್ವದ ಪೋಸ್ಟ್ ಹಂಚಿಕೊಂಡ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌

ತನ್ನವರನ್ನು ಕಳೆದುಕೊಂಡ ಸಂತ್ರಸ್ತರ ಕುಟುಂಬದ ಜತೆ ವಿಜಯ್ ನಡೆ ಹೇಗಿತ್ತು ಗೊತ್ತಾ

ಮುಂದಿನ ಸುದ್ದಿ
Show comments