Webdunia - Bharat's app for daily news and videos

Install App

ಪಠ್ಯಪುಸ್ತಕ ಮುದ್ರಣಕ್ಕೆ ಭಾರತದಿಂದ ಭಾರೀ ನೆರವು

Webdunia
ಭಾನುವಾರ, 11 ಸೆಪ್ಟಂಬರ್ 2022 (06:44 IST)
ಕೊಲಂಬೊ : ತೀವ್ರ ಆರ್ಥಿಕ ಬಿಕ್ಕಟ್ಟಿನಿಂದ ನರಳುತ್ತಿರುವ ಶ್ರೀಲಂಕಾಗೆ 2023ನೇ ಸಾಲಿನ ಶಾಲಾ ಮಕ್ಕಳಿಗೆ ಪಠ್ಯಪುಸ್ತಕಗಳ ಮುದ್ರಣಕ್ಕೆ ಅಗತ್ಯ ನೆರವು ನೀಡಲು ಭಾರತ ಮುಂದಾಗಿದ್ದು, 4 ವರ್ಷಗಳಲ್ಲಿ 2.9 ಶತಕೋಟಿ ಡಾಲರ್ ನೆರವು ನೀಡಲಿದೆ.

ಭಾರತೀಯ ಸಾಲ ಯೋಜನೆ ಅಡಿಯಲ್ಲಿ ಪಠ್ಯಪುಸ್ತಕ ಮುದ್ರಣಕ್ಕೆ ಅಗತ್ಯವಿರುವ ಕಾಗದ, ಶಾಯಿ ಸೇರಿದಂತೆ ಕಚ್ಚಾವಸ್ತುಗಳನ್ನು ಆಮದು ಮಾಡಿಕೊಳ್ಳಲು ಕ್ರಮಕೈಗೊಳ್ಳಲಾಗಿದೆ ಎಂದು ಶಿಕ್ಷಣ ಸಚಿವ ಸುಸಿಲ್ ಪ್ರೇಮೇಜನಾಥ ತಿಳಿಸಿದ್ದಾರೆ.

ಡಾಲರ್ ಕೊರತೆ ಇರುವುದರಿಂದ ಪಠ್ಯಪುಸ್ತಕಗಳ ಮುದ್ರಣಕ್ಕೆ ಅತ್ಯಂತ ಪ್ರಮುಖವಾಗಿ ಬೇಕಾದ ಕಚ್ಚಾವಸ್ತುಗಳ ಖರೀದಿಗೂ ಶ್ರೀಲಂಕಾ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಕಳೆದ ವರ್ಷದ ಮಾರ್ಚ್ನಲ್ಲಿ ಪ್ರಶ್ನೆಪತ್ರಿಕೆ ಮುದ್ರಿಸಲು ಕಾಗದದ ಕೊರತೆ ಉಂಟಾಗಿದ್ದರಿಂದ ಲಕ್ಷಾಂತರ ವಿದ್ಯಾರ್ಥಿಗಳ ಪರೀಕ್ಷೆ ರದ್ದುಪಡಿಸಲಾಗಿತ್ತು.

ಉಚಿತ ಶಿಕ್ಷಣ ಯೋಜನೆಯಡಿ ಶ್ರೀಲಂಕಾವು ಶಾಲಾ ಮಕ್ಕಳಿಗೆ ಪಠ್ಯಪುಸ್ತಕ ಮತ್ತು ಸಮವಸ್ತ್ರಗಳನ್ನು ಒದಗಿಸುತ್ತದೆ. 2023ರ ಶೈಕ್ಷಣಿಕ ವರ್ಷದಲ್ಲಿ ಪಠ್ಯಪುಸ್ತಕ ಮುದ್ರಣಕ್ಕೆ ಸುಮಾರು 44 ಮಿಲಿಯನ್ ಡಾಲರ್ ಖರ್ಚಾಗಲಿದೆ ಎಂದು ಅಂದಾಜಿಸಿದೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments